Categories: CrimeLatest

ಪತಿ ಜೊತೆ ಮಹಿಳಾ ಕಾನ್ಸ್‌ಟೇಬಲ್ ಸರಸ! ರೆಡ್‌ಹ್ಯಾಂಡ್ ಆಗಿ ಹಿಡಿದ ಪತ್ನಿ, ರಸ್ತೆ ಮಧ್ಯೆಯೇ ಧರ್ಮದೇಟು!

ಪತಿ–ಪತ್ನಿ ನಡುವಿನ ಜಗಳಕ್ಕೆ ಮೂರನೇ ವ್ಯಕ್ತಿಯ ಪ್ರವೇಶವಾದರೆ ಪರಿಸ್ಥಿತಿ ಹೇಗೆ ಕೈಮೀರುತ್ತದೆ ಎಂಬುದಕ್ಕೆ ಉತ್ತರ ಪ್ರದೇಶದಲ್ಲಿ ನಡೆದ ಈ ಘಟನೆ ಸಾಕ್ಷಿಯಾಗಿದೆ. ಮತ್ತೊಬ್ಬ ಮಹಿಳೆಯೊಂದಿಗೆ ಆಪ್ತವಾಗಿದ್ದ ಪತಿಯನ್ನು ಪತ್ನಿಯೇ ರೆಡ್‌ಹ್ಯಾಂಡ್ ಆಗಿ ಹಿಡಿದು, ಸಾರ್ವಜನಿಕರ ಎದುರೇ ತರಾಟೆಗೆ ತೆಗೆದುಕೊಂಡಿರುವ ಘಟನೆ ನಡೆದಿದೆ. ವಿಶೇಷವೆಂದರೆ, ಪತಿಯೊಂದಿಗೆ ಸಿಕ್ಕಿಬಿದ್ದಿದ್ದ ಮಹಿಳೆ ಪೊಲೀಸ್ ಇಲಾಖೆಯ ಕಾನ್‌ಸ್ಟೇಬಲ್ ಎನ್ನಲಾಗಿದೆ.

ವರದಿಗಳ ಪ್ರಕಾರ, ಉತ್ತರ ಪ್ರದೇಶದ ಪ್ರತಾಪ್‌ಗಢಕ್ಕೆ ಮಹಿಳಾ ಕಾನ್‌ಸ್ಟೇಬಲ್ ಒಬ್ಬರು ನಿಯೋಜನೆಗೊಂಡ ಬಳಿಕ, ಆಕೆಗೆ ಈ ವ್ಯಕ್ತಿಯೊಂದಿಗೆ ಪರಿಚಯ ಬೆಳೆದಿತ್ತು ಎನ್ನಲಾಗಿದೆ. ಬಳಿಕ ಇಬ್ಬರ ನಡುವೆ ಆತ್ಮೀಯತೆ ಹೆಚ್ಚಾಗಿ, ಅಕ್ರಮ ಸಂಬಂಧದ ಆರೋಪ ಕೇಳಿಬಂದಿತ್ತು.

ಪತಿಯ ವರ್ತನೆಯ ಬಗ್ಗೆ ಅನುಮಾನಗೊಂಡಿದ್ದ ಪತ್ನಿಗೆ ಈ ವಿಚಾರ ತಿಳಿದು ಆಕ್ರೋಶಗೊಂಡಿದ್ದರು ಎನ್ನಲಾಗಿದೆ. ಇಬ್ಬರೂ ಒಟ್ಟಿಗೆ ಇರುವುದನ್ನು ತಿಳಿದ ಪತ್ನಿ, ಸ್ಥಳಕ್ಕೆ ತೆರಳಿ ಅವರನ್ನು ರೆಡ್‌ಹ್ಯಾಂಡ್ ಆಗಿ ಹಿಡಿದಿದ್ದಾರೆ.

ಪತಿಯನ್ನು ಕಂಡ ಕೂಡಲೇ ಆಕ್ರೋಶಗೊಂಡ ಪತ್ನಿ, ಸಾರ್ವಜನಿಕ ಸ್ಥಳದಲ್ಲೇ ಆತನನ್ನು ತರಾಟೆಗೆ ತೆಗೆದುಕೊಂಡು ಥಳಿಸಿದ್ದಾರೆ. ಏಕಾಏಕಿ ನಡೆದ ಗಲಾಟೆಯಿಂದ ಸ್ಥಳದಲ್ಲಿ ಕೆಲಕಾಲ ಹೈಡ್ರಾಮಾ ಸೃಷ್ಟಿಯಾಗಿದ್ದು, ಘಟನೆಯನ್ನು ನೋಡಲು ಸುತ್ತಮುತ್ತಲಿನ ಜನರು ಕೂಡ ಜಮಾಯಿಸಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ. ಬಳಿಕ ಪತಿ, ಪತ್ನಿ ಹಾಗೂ ಮಹಿಳಾ ಕಾನ್‌ಸ್ಟೇಬಲ್‌ರನ್ನು ವಿಚಾರಣೆಗಾಗಿ ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಪೊಲೀಸರು ವಿಚಾರಣೆ ನಡೆಸುತ್ತಿದ್ದು, ಪತಿ ಹಾಗೂ ಮಹಿಳಾ ಕಾನ್‌ಸ್ಟೇಬಲ್ ನಡುವಿನ ಸಂಬಂಧದ ಆರೋಪಗಳ ಬಗ್ಗೆ ತನಿಖೆ ಮುಂದುವರಿದಿದೆ. ಸಾರ್ವಜನಿಕವಾಗಿ ನಡೆದ ಈ ಹೈಡ್ರಾಮಾದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ ಎನ್ನಲಾಗಿದೆ.

ಭ್ರಷ್ಟರ ಬೇಟೆ

Recent Posts

ಹಳೆ ಲವರ್ ಆಂಟಿಯ ಫೋನ್ ಕಾಲ್ ನಂಬಿ ಬೆಂಗಳೂರಿನಿಂದ ಊರಿಗೆ ಬಂದ ರಮೇಶ್‌! ನಾಲ್ಕೇ ದಿನಕ್ಕೆ ಗದ್ದೆಯಲ್ಲಿ ರಕ್ತಸಿಕ್ತ ಶವ!!

ರಾಯಚೂರು: ಪ್ರೀತಿಯ ಮಾತು ನಂಬಿ ಊರಿಗೆ ವಾಪಸ್ ಬಂದ ಯುವಕನೊಬ್ಬ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ.…

2 minutes ago

ಪಡಿತರ ಚೀಟಿ ಸರ್ವೇಗೆ ತಾಂತ್ರಿಕ ವಿಘ್ನ: ಹುಕ್ಕೇರಿಯಲ್ಲಿ ಸಾರ್ವಜನಿಕರು, ಸರ್ವೇಯರ್‌ಗಳ ಪರದಾಟ

ಹುಕ್ಕೇರಿ: ರಾಜ್ಯಾದ್ಯಂತ ನಡೆಯುತ್ತಿರುವ ಪಡಿತರ ಚೀಟಿ (ರೇಷನ್ ಕಾರ್ಡ್) ಸರ್ವೇ ಕಾರ್ಯಕ್ಕೆ ತಾಂತ್ರಿಕ ಸಮಸ್ಯೆಗಳು ಅಡ್ಡಿಯಾಗಿದ್ದು, ಬೆಳಗಾವಿ ಜಿಲ್ಲೆಯ ಹುಕ್ಕೇರಿ…

1 day ago

ಆಳವಾದ ಬಾವಿಗೆ ಬಿದ್ದ ನಾಯಿ; ಸಾಹಸದಿಂದ ರಕ್ಷಿಸಿದ ಚಿಕ್ಕಬಳ್ಳಾಪುರ ಅಗ್ನಿಶಾಮಕ ಸಿಬ್ಬಂದಿ

ಚಿಕ್ಕಬಳ್ಳಾಪುರ: ಆಕಸ್ಮಿಕವಾಗಿ ಆಳವಾದ ಬಾವಿಗೆ ಬಿದ್ದಿದ್ದ ನಾಯಿಯೊಂದನ್ನು ಚಿಕ್ಕಬಳ್ಳಾಪುರ ಅಗ್ನಿಶಾಮಕ ಇಲಾಖೆಯ ಸಿಬ್ಬಂದಿ ಸತತ ಒಂದೂವರೆ ಗಂಟೆಗಳ ಕಾಲ ಕಾರ್ಯಾಚರಣೆ…

1 day ago

ಹುಬ್ಬಳ್ಳಿಯಲ್ಲಿ ಕೊಲೆ: 12 ವರ್ಷ ಸೇಡು ಹೊತ್ತ ತಾಯಿ! ಮಗನ ಹಂತಕನ ರಕ್ತ ಹರಿಸಿ ಪ್ರತೀಕಾರ ತೀರಿಸಿಕೊಂಡ ರಣಚಂಡಿ

‘ಹಾವಿನ ದ್ವೇಷ 12 ವರ್ಷ’ ಎಂಬ ಮಾತು ಇಲ್ಲಿ ಅಕ್ಷರಶಃ ನಿಜವಾದಂತಿದೆ. ತನ್ನ ಮಗನನ್ನು ಕೊಂದವನನ್ನು ಶಿಕ್ಷಿಸುವವರೆಗೂ ನೆಮ್ಮದಿ ಕಾಣದ…

1 day ago

17ರ ಬಾಲಕಿಯ ಧೈರ್ಯದಿಂದ ಬಯಲಾಯ್ತು 3 ಕೊಲೆಗಳ ರಹಸ್ಯ; ಮನೆಯ ಅಂಗಳ ಅಗೆದಾಗ ಸಿಕ್ಕಿದ್ದು ಅಸ್ಥಿಪಂಜರ!

ತಮಿಳುನಾಡು: ಪ್ರೀತಿಗೆ ಪೋಷಕರ ವಿರೋಧ, ಮನೆಯಿಂದ ಓಡಿಹೋದ ಅಪ್ರಾಪ್ತ ಬಾಲಕಿ, ತಂದೆಯ ವಿರುದ್ಧ ಕೇಳಿಬಂದ ಗಂಭೀರ ಆರೋಪಗಳು… ಇವೆಲ್ಲದರ ನಡುವೆ…

2 days ago

ಬೆಂಗಳೂರಿನಲ್ಲಿ NEET ತಯಾರಿ ಮಾಡುತ್ತಿದ್ದ ವಿದ್ಯಾರ್ಥಿನಿಯರ ರೀಲ್ಸ್‌ಗೆ 9 ಕೋಟಿ ವೀಕ್ಷಣೆ; ಕೊನೆಗೆ ಓದಿಗೇ ಬಿತ್ತು ಕುತ್ತು!

ಬೆಂಗಳೂರು: ವೈದ್ಯಕೀಯ ಪ್ರವೇಶ ಪರೀಕ್ಷೆ (NEET)ಗೆ ತಯಾರಿ ನಡೆಸುತ್ತಿದ್ದ ಇಬ್ಬರು ವಿದ್ಯಾರ್ಥಿನಿಯರು ಸಾಮಾಜಿಕ ಜಾಲತಾಣದ ರೀಲ್ಸ್‌ ಗೀಳಿಗೆ ಬಿದ್ದು, ತಮ್ಮ…

2 days ago