Categories: Latest

ವೃದ್ಧ ದೂರುದಾರನ ಎದುರು ಮೇಜಿನ ಮೇಲೆ ಕಾಲು: ಮಹಿಳಾ ಕಾನ್‌ಸ್ಟೇಬಲ್ ಅಮಾನತು, ವೈರಲ್ ಫೋಟೋಗೆ ಇಲಾಖೆ ಕಂಗಾಲು

ರಾಜಸ್ಥಾನದ ಡುಂಗರಪುರ ಜಿಲ್ಲೆಯ ಬಿಚ್ಚಿವಾಡ ಪೊಲೀಸ್ ಠಾಣೆಯಲ್ಲಿ ನಡೆದ ಘಟನೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ವೃದ್ಧ ದೂರುದಾರನ ಎದುರು ಮಹಿಳಾ ಕಾನ್‌ಸ್ಟೇಬಲ್ ಅಸಭ್ಯವಾಗಿ ವರ್ತಿಸಿದ ಫೋಟೋ ವೈರಲ್ ಆದ ಬೆನ್ನಲ್ಲೇ ಸಂಬಂಧಿತ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ.

ಅಮಾನತುಗೊಂಡ ಮಹಿಳಾ ಕಾನ್‌ಸ್ಟೇಬಲ್ ಅನ್ನು ರೀನಾ ಗರ್ಗ್ ಎಂದು ಗುರುತಿಸಲಾಗಿದೆ. ಕೆಲ ದಿನಗಳ ಹಿಂದೆ ವಯೋವೃದ್ಧ ವ್ಯಕ್ತಿಯೊಬ್ಬರು ತಮ್ಮ ಸಮಸ್ಯೆಗೆ ಸಂಬಂಧಿಸಿದಂತೆ ದೂರು ನೀಡಲು ಬಿಚ್ಚಿವಾಡ ಪೊಲೀಸ್ ಠಾಣೆಗೆ ಬಂದಿದ್ದರು. ಈ ವೇಳೆ ಕರ್ತವ್ಯದಲ್ಲಿದ್ದ ರೀನಾ ಗರ್ಗ್, ದೂರನ್ನು ಆಲಿಸುವ ಬದಲು ಮೇಜಿನ ಮೇಲೆ ಎರಡೂ ಕಾಲುಗಳನ್ನು ಇಟ್ಟುಕೊಂಡು ಕುಳಿತಿರುವುದು ಫೋಟೋದಲ್ಲಿ ಕಂಡುಬಂದಿದೆ.

ವೃದ್ಧ ವ್ಯಕ್ತಿಯ ಎದುರು ಕನಿಷ್ಠ ಗೌರವವೂ ತೋರಿಸದ ರೀತಿಯಲ್ಲಿ ವರ್ತಿಸಿರುವುದನ್ನು ಅಲ್ಲಿದ್ದ ಯಾರೋ ಮೊಬೈಲ್‌ನಲ್ಲಿ ಸೆರೆಹಿಡಿದು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು. ಫೋಟೋ ವೈರಲ್ ಆದ ಬಳಿಕ ಸಾರ್ವಜನಿಕರು ಪೊಲೀಸರ ನಡೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಹಲವರು ಇದನ್ನು ಅಧಿಕಾರದ ದುರುಪಯೋಗ ಹಾಗೂ ಸಾರ್ವಜನಿಕರ ಅವಮಾನ ಎಂದು ಟೀಕಿಸಿದರು.

ಪ್ರಕರಣ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗುತ್ತಿದ್ದಂತೆ ಡುಂಗರಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮನೀಶ್ ಕುಮಾರ್ ತಕ್ಷಣ ಕ್ರಮ ಕೈಗೊಂಡಿದ್ದಾರೆ. ಕರ್ತವ್ಯ ಲೋಪ ಹಾಗೂ ಸಾರ್ವಜನಿಕರೊಂದಿಗೆ ಅಸಭ್ಯ ವರ್ತನೆ ತೋರಿದ ಆರೋಪದ ಮೇಲೆ ಕಾನ್‌ಸ್ಟೇಬಲ್ ರೀನಾ ಗರ್ಗ್ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.

ಈ ಘಟನೆ, ಸಾರ್ವಜನಿಕ ಸೇವೆಯಲ್ಲಿ ಇರುವ ಅಧಿಕಾರಿಗಳು ತಮ್ಮ ಜವಾಬ್ದಾರಿಯನ್ನು ಮರೆಯಬಾರದು ಎಂಬ ಸಂದೇಶ ನೀಡುವುದರ ಜೊತೆಗೆ, ಸೋಷಿಯಲ್ ಮೀಡಿಯಾ ಇಂದಿನ ದಿನಗಳಲ್ಲಿ ಹೊಣೆಗಾರಿಕೆಯನ್ನು ನೆನಪಿಸುವ ಪ್ರಬಲ ವೇದಿಕೆಯಾಗಿರುವುದನ್ನೂ ಮತ್ತೊಮ್ಮೆ ಸಾಬೀತುಪಡಿಸಿದೆ.

ಭ್ರಷ್ಟರ ಬೇಟೆ

Recent Posts

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

11 hours ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

11 hours ago

ಹುಬ್ಬಳ್ಳಿ–ಅಂಕೋಲಾ ರೈಲ್ವೆ ಯೋಜನೆಗೆ ಭೂಸ್ವಾಧೀನ ಅಧಿಕೃತ ಚಾಲನೆ

163 ಕಿ.ಮೀ. ಉದ್ದದ ಯೋಜನೆ; ಉತ್ತರ ಕನ್ನಡದ 40 ಗ್ರಾಮಗಳು ಭೂಸ್ವಾಧೀನ ವ್ಯಾಪ್ತಿಗೆ ಉತ್ತರ ಕನ್ನಡ: ಹಲವು ವರ್ಷಗಳಿಂದ ನನೆಗುದಿಗೆ…

11 hours ago

ಪಾಂಡೆಗಾಂವ–ಕಂಗೋಳಿ ರಸ್ತೆ ಕೆಸರಿನ ಹೊಂಡ: ಜನರ ಆಕ್ರೋಶ, ಕಾಮಗಾರಿ ವಿಳಂಬವಾದರೆ ರಸ್ತೆ ತಡೆ ಎಚ್ಚರಿಕೆ

ಮಳೆ ಬಂದರೆ ಕೆಸರುಗದ್ದೆ; ವಿದ್ಯಾರ್ಥಿಗಳು, ವೃದ್ಧರು, ರೋಗಿಗಳ ಸಂಚಾರಕ್ಕೆ ಸಂಕಷ್ಟ — ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ ಕಾಗವಾಡ: ಬೆಳಗಾವಿ…

11 hours ago

ಜಾತ್ರೆಯಲ್ಲಿ ಮಹಿಳೆಯ ಮಂಗಳಸೂತ್ರ ಕಳವು: ಮೂವರು ಆರೋಪಿಗಳ ಬಂಧನ

₹4.50 ಲಕ್ಷ ಮೌಲ್ಯದ ಚಿನ್ನ, ಕೃತ್ಯಕ್ಕೆ ಬಳಸಿದ್ದ ಬೈಕ್ ವಶ ಹಳಿಯಾಳ: ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ…

1 day ago

ಬೈಕ್‌ನಲ್ಲಿ ಕರೆದೊಯ್ದು ಹಣ ಕಸಿದು ಜೀವ ಬೆದರಿಕೆ: 24 ಗಂಟೆಯಲ್ಲೇ ಆರೋಪಿ ಬಂಧನ

ಸಿಸಿಟಿವಿ ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಯ ಪತ್ತೆ; ಬೈಕ್, ಹಣ ವಶ ಹೊನ್ನಾವರ: ಬ್ಯಾಂಕ್‌ನಿಂದ ಹಣ ಪಡೆದು ಹೊರಬಂದ…

1 day ago