ನಂಜನಗೂಡು ಪಟ್ಟಣದಲ್ಲಿ ಭೀಕರ ಅಪಘಾತ ಜರುಗಿದ್ದು, ಅಕ್ಕಿ ಸಾಗಾಣಿಕೆಯ ಲಾರಿ ಚಕ್ರಕ್ಕೆ ಸಿಲುಕಿ ಮಹಿಳೆಯೋರ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಸೋಮವಾರ ಜರುಗಿದೆ. ನಂಜನಗೂಡು ತಾಲೂಕಿನ ಬದನವಾಳು ಗ್ರಾಮದ ೩೦ ವರ್ಷದ ಭವಾನಿ ಸಾವನ್ನಪ್ಪಿದ ದುರ್ದೈವಿ ಮಹಿಳೆಯಾಗಿದ್ದು, ಅಪಘಾತದಲ್ಲಿ ಗಂಡ ಮಹೇಶ್ ಗಂಭಿರ ಗಾಯಗೊಂಡಿದ್ದು, ಆತನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪಟ್ಟಣದ ಆರ್ಪಿ ರಸ್ತೆಯ ೧೫ನೇ ತಿರುವಿನಲ್ಲಿ ಸರಿ ಸುಮಾರು ೧೨ ಗಂಟೆ ಹೊತ್ತಿಗೆ ಈ ಘಟನೆ ಜರುಗಿದ್ದು, ಲಾರಿ ಚಕ್ರಕ್ಕೆ ಸಿಲುಕಿದ ಭವಾನಿಯ ಮೆದುಳು ಛಿದ್ರ ಛಿದ್ರವಾಗಿದೆ. ಗಂಡ ಮಹೇಶ್ ಜೊತೆ ಡಿಯೋ ದ್ವಿಚಕ್ರ ವಾಹನದಲ್ಲಿ ಬದನವವಾಳುವಿನಿಂದ ನಂಜನಗೂಡಿಗೆ ಆಗಮಿಸುತ್ತಿದ್ದ ವೇಳೆ ಆಯಾತಪ್ಪಿ ಬಿದ್ದ ಭವಾನಿ ತಮಿಳುನಾಡು ರಿಜಿಸ್ಟರೇಷನ್ ಹೊಂದಿರುವ ಟಿಎನ್ ೭೦ಆರ್ ೬೬೧೫ ಸಂಖ್ಯೆಯ ಅಕ್ಕಿ ಸಾಗಾಣಿಕೆ ಲಾರಿಯ ಹಿಂಬದಿ ಚಕ್ರಕ್ಕೆ ಸಿಲುಕಿಕೊಂಡಿದ್ದಾರೆ. ಲಾರಿ ಭಾರೀ ತೂಕವಿದ್ದ ಕಾರಣ, ಲಾರಿ ಚಕ್ರ ತಲೆ ಮೇಲೆ ಹರಿದು ಭವಾನಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಅಪಘಾತ ಜರುಗಿದ ಸ್ಥಳದಲ್ಲಿ ಸಾರ್ವಜನಿಕರು ಭಾರೀ ಸಂಖ್ಯೆಯಲ್ಲಿ ಜಮಾಯಿಸಿ, ಘಟನೆಯ ಬಗ್ಗೆ ವಿಷಾದ ವ್ಯಕ್ತಪಡಿಸುತ್ತಿದ್ದರು. ಈ ವೇಳೆ ಕೆಲ ಕಾಲ ಟ್ರಾಪಿಕ್ ಜಾಮ್ ಕೂಡ ಉಂಟಾಗಿತ್ತು. ಸ್ಥಳಕ್ಕೆ ಬಂದ ನಂಜನಗೂಡು ಸಂಚಾರಿ ಠಾಣೆ ಪೊಲೀಸರು ಲಾರಿಯನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ. ಇನ್ನು ಸುದ್ದಿ ತಿಳಿದು ಸ್ಥಳಕ್ಕೆ ಬಂದ ಭವಾನಿ ಕುಟುಂಬಸ್ಥರು, ಅಪಘಾತದ ಭೀಕರ ದೃಶ್ಯ ನೋಡಿ, ಗೋಳಾಡುತ್ತಿದ್ದ ದೃಶ್ಯ ನೋಡುಗರನ್ನು ಮಮ್ಮುಲ ಮರುಗುವಂತೆ ಮಾಡಿತ್ತು. ವರದಿ: ಮೋಹನ್
ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದ…
ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…
ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…
ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…
ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…
ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…