ನಂಜನಗೂಡು ಪಟ್ಟಣದಲ್ಲಿ ಭೀಕರ ಅಪಘಾತ ಜರುಗಿದ್ದು, ಅಕ್ಕಿ ಸಾಗಾಣಿಕೆಯ ಲಾರಿ ಚಕ್ರಕ್ಕೆ ಸಿಲುಕಿ ಮಹಿಳೆಯೋರ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಸೋಮವಾರ ಜರುಗಿದೆ. ನಂಜನಗೂಡು ತಾಲೂಕಿನ ಬದನವಾಳು ಗ್ರಾಮದ ೩೦ ವರ್ಷದ ಭವಾನಿ ಸಾವನ್ನಪ್ಪಿದ ದುರ್ದೈವಿ ಮಹಿಳೆಯಾಗಿದ್ದು, ಅಪಘಾತದಲ್ಲಿ ಗಂಡ ಮಹೇಶ್ ಗಂಭಿರ ಗಾಯಗೊಂಡಿದ್ದು, ಆತನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪಟ್ಟಣದ ಆರ್ಪಿ ರಸ್ತೆಯ ೧೫ನೇ ತಿರುವಿನಲ್ಲಿ ಸರಿ ಸುಮಾರು ೧೨ ಗಂಟೆ ಹೊತ್ತಿಗೆ ಈ ಘಟನೆ ಜರುಗಿದ್ದು, ಲಾರಿ ಚಕ್ರಕ್ಕೆ ಸಿಲುಕಿದ ಭವಾನಿಯ ಮೆದುಳು ಛಿದ್ರ ಛಿದ್ರವಾಗಿದೆ. ಗಂಡ ಮಹೇಶ್ ಜೊತೆ ಡಿಯೋ ದ್ವಿಚಕ್ರ ವಾಹನದಲ್ಲಿ ಬದನವವಾಳುವಿನಿಂದ ನಂಜನಗೂಡಿಗೆ ಆಗಮಿಸುತ್ತಿದ್ದ ವೇಳೆ ಆಯಾತಪ್ಪಿ ಬಿದ್ದ ಭವಾನಿ ತಮಿಳುನಾಡು ರಿಜಿಸ್ಟರೇಷನ್ ಹೊಂದಿರುವ ಟಿಎನ್ ೭೦ಆರ್ ೬೬೧೫ ಸಂಖ್ಯೆಯ ಅಕ್ಕಿ ಸಾಗಾಣಿಕೆ ಲಾರಿಯ ಹಿಂಬದಿ ಚಕ್ರಕ್ಕೆ ಸಿಲುಕಿಕೊಂಡಿದ್ದಾರೆ. ಲಾರಿ ಭಾರೀ ತೂಕವಿದ್ದ ಕಾರಣ, ಲಾರಿ ಚಕ್ರ ತಲೆ ಮೇಲೆ ಹರಿದು ಭವಾನಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಅಪಘಾತ ಜರುಗಿದ ಸ್ಥಳದಲ್ಲಿ ಸಾರ್ವಜನಿಕರು ಭಾರೀ ಸಂಖ್ಯೆಯಲ್ಲಿ ಜಮಾಯಿಸಿ, ಘಟನೆಯ ಬಗ್ಗೆ ವಿಷಾದ ವ್ಯಕ್ತಪಡಿಸುತ್ತಿದ್ದರು. ಈ ವೇಳೆ ಕೆಲ ಕಾಲ ಟ್ರಾಪಿಕ್ ಜಾಮ್ ಕೂಡ ಉಂಟಾಗಿತ್ತು. ಸ್ಥಳಕ್ಕೆ ಬಂದ ನಂಜನಗೂಡು ಸಂಚಾರಿ ಠಾಣೆ ಪೊಲೀಸರು ಲಾರಿಯನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ. ಇನ್ನು ಸುದ್ದಿ ತಿಳಿದು ಸ್ಥಳಕ್ಕೆ ಬಂದ ಭವಾನಿ ಕುಟುಂಬಸ್ಥರು, ಅಪಘಾತದ ಭೀಕರ ದೃಶ್ಯ ನೋಡಿ, ಗೋಳಾಡುತ್ತಿದ್ದ ದೃಶ್ಯ ನೋಡುಗರನ್ನು ಮಮ್ಮುಲ ಮರುಗುವಂತೆ ಮಾಡಿತ್ತು. ವರದಿ: ಮೋಹನ್
ಶಿವಮೊಗ್ಗ ಜಿಲ್ಲೆಯ ಸೊರಬ ಪಟ್ಟಣದ ಕಾನುಕೇರಿ ಬಡಾವಣೆಯಲ್ಲಿ ದುರಂತ ಘಟನೆ ಸಂಭವಿಸಿದೆ. ಪತಿಯ ಅನೈತಿಕ ಸಂಬಂಧ ಹಾಗೂ ನಿರಂತರ ದೈಹಿಕ-ಮಾನಸಿಕ…
ಹೈದರಾಬಾದ್: ಬಣ್ಣದ ಲೋಕದಲ್ಲಿ ಮತ್ತೆ ವಂಚನೆ ಆರೋಪ ಕೇಳಿಬಂದಿದ್ದು, ತೆಲುಗು ಬಿಗ್ಬಾಸ್ ಮೂಲಕ ಜನಪ್ರಿಯತೆ ಪಡೆದ ನಟಿ ಆಶು ರೆಡ್ಡಿ…
ಧಾರವಾಡ: 20 ವರ್ಷದ ಆದಿತ್ಯ ಮ್ಯಾಗೇರಿ ಆತ್ಮಹತ್ಯೆ ಪ್ರಕರಣ ದಿನದಿಂದ ದಿನಕ್ಕೆ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಇದೀಗ ಪೊಲೀಸರ ವಿರುದ್ಧ…
ಶೇಕ್ಪೇಟ್: ಪಶುಗಳ ಚಿಕಿತ್ಸೆಯ ಹೆಸರಿನಲ್ಲಿ ನಡೆದಿದ್ದ ಅಮಾನವೀಯ ದಂಧೆಯೊಂದು ಬೆಳಕಿಗೆ ಬಂದು ಸಾರ್ವಜನಿಕರಲ್ಲಿ ಆಕ್ರೋಶ ಹುಟ್ಟಿಸಿದೆ. ಖಾಸಗಿ ಪಶು ವೈದ್ಯಕೀಯ…
ಧಾರವಾಡ: ಗಾಂಜಾ ಪ್ರಕರಣದಲ್ಲಿ ಹೆಸರು ಸೇರಿಸಲಾಗುತ್ತದೆ ಎಂಬ ಭಯದಿಂದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡದಲ್ಲಿ ನಡೆದಿದೆ. ಈ ಪ್ರಕರಣದಲ್ಲಿ…
ಬೆಂಗಳೂರು: ಸಾರ್ವಜನಿಕ ಸ್ಥಳದಲ್ಲಿ ಅಕ್ರಮ ಚಟುವಟಿಕೆಗಳಲ್ಲಿ ತೊಡಗಿದ್ದ ಆರೋಪದ ಮೇರೆಗೆ ಆರು ವಿದೇಶಿ ಮಹಿಳೆಯರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ…