Categories: Latest

ನಂಜನಗೂಡು ಪಟ್ಟಣದಲ್ಲಿ ಭೀಕರ ರಸ್ತೆ ಅಪಘಾತ ಲಾರಿ ಚಕ್ರಕ್ಕೆ ಸಿಲುಕಿ ಮಹಿಳೆ ದಾರುಣ ಸಾವು

ನಂಜನಗೂಡು ಪಟ್ಟಣದಲ್ಲಿ ಭೀಕರ ಅಪಘಾತ ಜರುಗಿದ್ದು, ಅಕ್ಕಿ ಸಾಗಾಣಿಕೆಯ ಲಾರಿ ಚಕ್ರಕ್ಕೆ ಸಿಲುಕಿ ಮಹಿಳೆಯೋರ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಸೋಮವಾರ ಜರುಗಿದೆ. ನಂಜನಗೂಡು ತಾಲೂಕಿನ ಬದನವಾಳು ಗ್ರಾಮದ ೩೦ ವರ್ಷದ ಭವಾನಿ ಸಾವನ್ನಪ್ಪಿದ ದುರ್ದೈವಿ ಮಹಿಳೆಯಾಗಿದ್ದು, ಅಪಘಾತದಲ್ಲಿ ಗಂಡ ಮಹೇಶ್‌ ಗಂಭಿರ ಗಾಯಗೊಂಡಿದ್ದು, ಆತನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪಟ್ಟಣದ ಆರ್‌ಪಿ ರಸ್ತೆಯ ೧೫ನೇ ತಿರುವಿನಲ್ಲಿ ಸರಿ ಸುಮಾರು ೧೨ ಗಂಟೆ ಹೊತ್ತಿಗೆ ಈ ಘಟನೆ ಜರುಗಿದ್ದು, ಲಾರಿ ಚಕ್ರಕ್ಕೆ ಸಿಲುಕಿದ ಭವಾನಿಯ ಮೆದುಳು ಛಿದ್ರ ಛಿದ್ರವಾಗಿದೆ. ಗಂಡ ಮಹೇಶ್‌ ಜೊತೆ ಡಿಯೋ ದ್ವಿಚಕ್ರ ವಾಹನದಲ್ಲಿ ಬದನವವಾಳುವಿನಿಂದ ನಂಜನಗೂಡಿಗೆ ಆಗಮಿಸುತ್ತಿದ್ದ ವೇಳೆ ಆಯಾತಪ್ಪಿ ಬಿದ್ದ ಭವಾನಿ ತಮಿಳುನಾಡು ರಿಜಿಸ್ಟರೇಷನ್‌ ಹೊಂದಿರುವ ಟಿಎನ್‌ ೭೦ಆರ್‌ ೬೬೧೫ ಸಂಖ್ಯೆಯ ಅಕ್ಕಿ ಸಾಗಾಣಿಕೆ ಲಾರಿಯ ಹಿಂಬದಿ ಚಕ್ರಕ್ಕೆ ಸಿಲುಕಿಕೊಂಡಿದ್ದಾರೆ. ಲಾರಿ ಭಾರೀ ತೂಕವಿದ್ದ ಕಾರಣ, ಲಾರಿ ಚಕ್ರ ತಲೆ ಮೇಲೆ ಹರಿದು ಭವಾನಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಅಪಘಾತ ಜರುಗಿದ ಸ್ಥಳದಲ್ಲಿ ಸಾರ್ವಜನಿಕರು ಭಾರೀ ಸಂಖ್ಯೆಯಲ್ಲಿ ಜಮಾಯಿಸಿ, ಘಟನೆಯ ಬಗ್ಗೆ ವಿಷಾದ ವ್ಯಕ್ತಪಡಿಸುತ್ತಿದ್ದರು. ಈ ವೇಳೆ ಕೆಲ ಕಾಲ ಟ್ರಾಪಿಕ್‌ ಜಾಮ್‌ ಕೂಡ ಉಂಟಾಗಿತ್ತು. ಸ್ಥಳಕ್ಕೆ ಬಂದ ನಂಜನಗೂಡು ಸಂಚಾರಿ ಠಾಣೆ ಪೊಲೀಸರು ಲಾರಿಯನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ. ಇನ್ನು ಸುದ್ದಿ ತಿಳಿದು ಸ್ಥಳಕ್ಕೆ ಬಂದ ಭವಾನಿ ಕುಟುಂಬಸ್ಥರು, ಅಪಘಾತದ ಭೀಕರ ದೃಶ್ಯ ನೋಡಿ, ಗೋಳಾಡುತ್ತಿದ್ದ ದೃಶ್ಯ ನೋಡುಗರನ್ನು ಮಮ್ಮುಲ ಮರುಗುವಂತೆ ಮಾಡಿತ್ತು. ವರದಿ: ಮೋಹನ್

nazeer ahamad

Recent Posts

ಲಿವ್-ಇನ್ ಸಂಬಂಧದ ದುರಂತ ಅಂತ್ಯ: ಲವ್ ಜಿಹಾದ್ ಗೆ ಮತ್ತೊಂದು ಬಲಿ, ನಂದಿನಿ ಬೋಸ್ಮಿಯಾ ಸಾವಿನ ಪ್ರಕರಣ ಚರ್ಚೆಗೆ ಗ್ರಾಸ

ಗುಜರಾತಿನ ರಾಜ್‌ಕೋಟ್‌ನಲ್ಲಿ ಯುವತಿ ನಂದಿನಿ ಬೋಸ್ಮಿಯಾ ಸಾವಿನ ಪ್ರಕರಣವು ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಆಮ್ ಆದ್ಮಿ ಪಕ್ಷದೊಂದಿಗೆ ಗುರುತಿಸಿಕೊಂಡಿದ್ದ ನಂದಿನಿ,…

5 hours ago

ಸದಾ ಶೀಲ ಶಂಕಿಸುತ್ತಿದ್ದವನು ಪ್ರೀತಿಸಿ ಮದುವೆಯಾದ ಪತ್ನಿಯನ್ನೇ ಕೊಂದ..!

ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹುಲ್ಲೇನಹಳ್ಳಿ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದ್ದು, ಪತ್ನಿಯ ಶೀಲವನ್ನು ಅನುಮಾನಿಸುತ್ತಿದ್ದ ಪತಿಯೊಬ್ಬ ಕೊನೆಗೆ ಆಕೆಯನ್ನು…

6 hours ago

ಮಕ್ಕಳ ನಿರ್ಲಕ್ಷ್ಯದಿಂದ ಮನನೊಂದ ನಿವೃತ್ತ ಸೈನಿಕ; ₹4 ಕೋಟಿ ಆಸ್ತಿಯನ್ನು ತಿರುಪತಿ ದೇವರಿಗೆ ದಾನ ಮಾಡಿದ ಹೃದಯವಿದ್ರಾವಕ ನಿರ್ಧಾರ

ದೇಶದ ಗಡಿಯಲ್ಲಿ ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಸೈನಿಕರೊಬ್ಬರು, ಸ್ವಂತ ಮಕ್ಕಳ ನಿರ್ಲಕ್ಷ್ಯದಿಂದ ಮನನೊಂದು ತಮ್ಮ ಸುಮಾರು ₹4…

6 hours ago

ಬೇರೊಬ್ಬನೊಂದಿಗೆ ಓಡಿ ಹೋದ ತಾಯಿ: ಹಸಿದ ಕಂದಮ್ಮನನ್ನು ಮಡಿಲಲ್ಲಿ ಹಿಡಿದು ಮೆಡಿಕಲ್ಗೆ ಬಂದು ಕಣ್ಣೀರಿಟ್ಟ ತಂದೆ.

ಹಸಿದ ಕಂದಮ್ಮನ ಅಳುವನ್ನು ಸಮಾಧಾನಪಡಿಸಲಾಗದೆ ಅಸಹಾಯಕನಾಗಿ ನಿಂತ ತಂದೆಯೊಬ್ಬನ ಕಥೆ ಸಾಮಾಜಿಕ ಜಾಲತಾಣಗಳಲ್ಲಿ ಅನೇಕರ ಮನಕಲಕಿದೆ. ಪತ್ನಿ ಮನೆಯನ್ನು ತೊರೆದು…

6 hours ago

ಕುಟುಂಬದ ಮೂವರ ಹತ್ಯೆ ಪ್ರಕರಣ: ಹೆತ್ತವರನ್ನು ಕೊಂದ ಬಳಿಕ ಪ್ರಿಯಕರನೊಂದಿಗೆ ಹೋಗಿ ಸಿಗರೇಟ್ ಸೇದಿದ್ದ ಸೈಕೋ ಮಗಳು..!

ತಂದೆ, ತಾಯಿ ಮತ್ತು ತಂಗಿಯನ್ನು ಹತ್ಯೆ ಮಾಡಿದ ಆರೋಪದಲ್ಲಿ ಬಂಧಿತಳಾಗಿರುವ ಶ್ವೇತಾ ಹಾಗೂ ಆಕೆಯ ಪ್ರಿಯಕರ ಕೆನತ್ ಪ್ರಕರಣದಲ್ಲಿ ದಿನದಿಂದ…

6 hours ago

ನಾಲ್ಕು ತಿಂಗಳ ಗರ್ಭಿಣಿ ಮಗುವಿನೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ: ಕಲಬುರಗಿಯಲ್ಲಿ ಮನಕಲುಕುವ ಘಟನೆ

ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಚಿಂಚನಸೂರ್ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದ್ದು, ನಾಲ್ಕು ತಿಂಗಳ ಗರ್ಭಿಣಿಯಾಗಿದ್ದ ಮಹಿಳೆಯೊಬ್ಬರು ತಮ್ಮ ಒಂದೂವರೆ…

6 hours ago