ನಂಜನಗೂಡು ಪಟ್ಟಣದಲ್ಲಿ ಭೀಕರ ಅಪಘಾತ ಜರುಗಿದ್ದು, ಅಕ್ಕಿ ಸಾಗಾಣಿಕೆಯ ಲಾರಿ ಚಕ್ರಕ್ಕೆ ಸಿಲುಕಿ ಮಹಿಳೆಯೋರ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಸೋಮವಾರ ಜರುಗಿದೆ. ನಂಜನಗೂಡು ತಾಲೂಕಿನ ಬದನವಾಳು ಗ್ರಾಮದ ೩೦ ವರ್ಷದ ಭವಾನಿ ಸಾವನ್ನಪ್ಪಿದ ದುರ್ದೈವಿ ಮಹಿಳೆಯಾಗಿದ್ದು, ಅಪಘಾತದಲ್ಲಿ ಗಂಡ ಮಹೇಶ್ ಗಂಭಿರ ಗಾಯಗೊಂಡಿದ್ದು, ಆತನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪಟ್ಟಣದ ಆರ್ಪಿ ರಸ್ತೆಯ ೧೫ನೇ ತಿರುವಿನಲ್ಲಿ ಸರಿ ಸುಮಾರು ೧೨ ಗಂಟೆ ಹೊತ್ತಿಗೆ ಈ ಘಟನೆ ಜರುಗಿದ್ದು, ಲಾರಿ ಚಕ್ರಕ್ಕೆ ಸಿಲುಕಿದ ಭವಾನಿಯ ಮೆದುಳು ಛಿದ್ರ ಛಿದ್ರವಾಗಿದೆ. ಗಂಡ ಮಹೇಶ್ ಜೊತೆ ಡಿಯೋ ದ್ವಿಚಕ್ರ ವಾಹನದಲ್ಲಿ ಬದನವವಾಳುವಿನಿಂದ ನಂಜನಗೂಡಿಗೆ ಆಗಮಿಸುತ್ತಿದ್ದ ವೇಳೆ ಆಯಾತಪ್ಪಿ ಬಿದ್ದ ಭವಾನಿ ತಮಿಳುನಾಡು ರಿಜಿಸ್ಟರೇಷನ್ ಹೊಂದಿರುವ ಟಿಎನ್ ೭೦ಆರ್ ೬೬೧೫ ಸಂಖ್ಯೆಯ ಅಕ್ಕಿ ಸಾಗಾಣಿಕೆ ಲಾರಿಯ ಹಿಂಬದಿ ಚಕ್ರಕ್ಕೆ ಸಿಲುಕಿಕೊಂಡಿದ್ದಾರೆ. ಲಾರಿ ಭಾರೀ ತೂಕವಿದ್ದ ಕಾರಣ, ಲಾರಿ ಚಕ್ರ ತಲೆ ಮೇಲೆ ಹರಿದು ಭವಾನಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಅಪಘಾತ ಜರುಗಿದ ಸ್ಥಳದಲ್ಲಿ ಸಾರ್ವಜನಿಕರು ಭಾರೀ ಸಂಖ್ಯೆಯಲ್ಲಿ ಜಮಾಯಿಸಿ, ಘಟನೆಯ ಬಗ್ಗೆ ವಿಷಾದ ವ್ಯಕ್ತಪಡಿಸುತ್ತಿದ್ದರು. ಈ ವೇಳೆ ಕೆಲ ಕಾಲ ಟ್ರಾಪಿಕ್ ಜಾಮ್ ಕೂಡ ಉಂಟಾಗಿತ್ತು. ಸ್ಥಳಕ್ಕೆ ಬಂದ ನಂಜನಗೂಡು ಸಂಚಾರಿ ಠಾಣೆ ಪೊಲೀಸರು ಲಾರಿಯನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ. ಇನ್ನು ಸುದ್ದಿ ತಿಳಿದು ಸ್ಥಳಕ್ಕೆ ಬಂದ ಭವಾನಿ ಕುಟುಂಬಸ್ಥರು, ಅಪಘಾತದ ಭೀಕರ ದೃಶ್ಯ ನೋಡಿ, ಗೋಳಾಡುತ್ತಿದ್ದ ದೃಶ್ಯ ನೋಡುಗರನ್ನು ಮಮ್ಮುಲ ಮರುಗುವಂತೆ ಮಾಡಿತ್ತು. ವರದಿ: ಮೋಹನ್
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…