Latest

ಆನೇಕಲ್‌ ಸಾಯಿ ಲೇಔಟ್‌ನಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ: ಹಣ ಬೇಡಿಕೆ ಮತ್ತು ಮೌಲ್ಯವಸ್ತು ದೋಚಿದ ಆರೋಪ

ಆನೇಕಲ್, ಜುಲೈ 09: ದೊಡ್ಡ ನಾಗಮಂಗಲದ ಸಾಯಿ ಲೇಔಟ್‌ ಪ್ರದೇಶದಲ್ಲಿ ಮಹಿಳೆಯೊಬ್ಬರ ಮೇಲೆ ನಡೆದಿರುವ ಸಾಮೂಹಿಕ ಅತ್ಯಾಚಾರ ಪ್ರಕರಣ ಇದೀಗ ಬೆಳಕಿಗೆ ಬಂದಿದೆ. ಘಟನೆ ಮೂರು ದಿನಗಳ ಹಿಂದೆ ನಡೆದಿದ್ದು, ತಡವಾಗಿ ಇದ ಬಗ್ಗೆ ಮಾಹಿತಿ ಹೊರಬಿದ್ದಿದೆ.

ಸಂತ್ರಸ್ತೆ ದೊಡ್ಡ ನಾಗಮಂಗಲದ ಸಾಯಿ ಲೇಔಟ್‌ನಲ್ಲಿರುವ ತನ್ನ ಸ್ನೇಹಿತನ ಮನೆಗೆ ಭೇಟಿ ನೀಡಿದ್ದ ವೇಳೆ ಈ ಅಮಾನುಷ ಕೃತ್ಯ ನಡೆದಿದೆ. ಆಕೆಯ ಸ್ಥಳದಲ್ಲಿದ್ದಾಗ ಇಬ್ಬರು ಅಪರಿಚಿತ ವ್ಯಕ್ತಿಗಳು ಮನೆಯೊಳಗೆ ನುಗ್ಗಿ, ದೂರು ನೀಡಿದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಬೆದರಿಸಿ ಅತ್ಯಾಚಾರ ಎಸಗಿದ್ದಾರೆ ಎಂದು ತಿಳಿದುಬಂದಿದೆ.

ಅತ್ಯಾಚಾರ ಬಳಿಕ ಆರೋಪಿಗಳು ಮಹಿಳೆಯ ಬಳಿ ಹಣವಿಗೂ ಬೇಡಿಕೆ ಇಟ್ಟಿದ್ದಾರೆ. ಆತಂಕಗೊಂಡ ಸಂತ್ರಸ್ತೆ, ಹಣದ ಅವಶ್ಯಕತೆಯನ್ನು ಸ್ನೇಹಿತೆಯ ಬಳಿ ಹೇಳಿ, ಆಕೆಯ ಬ್ಯಾಂಕ್ ಖಾತೆ ಮೂಲಕ ಹಣ ವರ್ಗಾಯಿಸಿದ್ದಾರೆ. ಆರೋಪಿಗಳು ಈ ಹಣವನ್ನು ತಮ್ಮ ಬೆಟ್ಟಿಂಗ್ ಆ್ಯಪ್‌ ಖಾತೆಗೆ ಜಮಾ ಮಾಡಿಕೊಂಡಿದ್ದಾರೆ.

ಇದೆಲ್ಲಕ್ಕೂ ಮೀರಿದ ಆರೋಪಿಗಳು, ಮಹಿಳೆಯ ಹಾಗೂ ಆಕೆಯ ಸ್ನೇಹಿತನ ಮೊಬೈಲ್ ಫೋನ್‌ಗಳನ್ನು ಕಸಿದುಕೊಂಡು, ಮನೆಯಲ್ಲಿದ್ದ ಪ್ರಿಡ್ಜ್ ಹಾಗೂ ವಾಶಿಂಗ್ ಮೆಷಿನ್‌ನ್ನು ಬಲವಂತವಾಗಿ ಹೊತ್ತೊಯ್ದಿದ್ದಾರೆ.

ಈ ಕುರಿತು ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಿಸಿ ಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಪೊಲೀಸರು ಮೂವರು ಶಂಕಿತ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಪ್ರಕರಣ ಸಂಬಂಧ ಹೆಚ್ಚಿನ ತನಿಖೆ ಮುಂದುವರಿಯುತ್ತಿದೆ.

nazeer ahamad

Recent Posts

ಧರ್ಮಸ್ಥಳ ಶವ ಹೂತು ಪ್ರಕರಣ: ಎಸ್‌ಐಟಿಗೆ ಮತ್ತಷ್ಟು ಅಧಿಕಾರಿಗಳ ನೇಮಕ

ಧರ್ಮಸ್ಥಳದಲ್ಲಿ ಬಹಿರಂಗವಾದ ಶವ ಹೂತು ಪ್ರಕರಣದ ತನಿಖೆ ಮತ್ತಷ್ಟು ಗಂಭೀರ ಸ್ವರೂಪ ಪಡೆದುಕೊಂಡಿದ್ದು, ತನಿಖೆಯ ವೇಗವರ್ಧನೆಗಾಗಿ ವಿಶೇಷ ತನಿಖಾ ತಂಡಕ್ಕೆ…

12 minutes ago

ಧರ್ಮಸ್ಥಳ ನದಿ ತಟದಲ್ಲಿ ಹೂತ ಶವಗಳ ಬೇಟೆ: ಎಸ್ಐಟಿ ಉತ್ಖನನ ಕಾರ್ಯಾಚರಣೆಗೂ ವೇಗ

ಬೆಳ್ತಂಗಡಿ, ಜುಲೈ 31 – ಧರ್ಮಸ್ಥಳದ ನೇತ್ರಾವತಿ ನದಿ ತಟದಲ್ಲಿ ನಿಗೂಢವಾಗಿ ಹೂತ ಶವಗಳ ಮಾಹಿತಿ ಹಿನ್ನೆಲೆಯಲ್ಲಿ ತೀವ್ರ ಚರ್ಚೆಗೆ…

38 minutes ago

ಕುಡಿಯಲು ಹಣ ನೀಡದ ತಾಯಿಯನ್ನು ಮಗನೇ ಕೊಂದ ಭೀಕರ ಘಟನೆ : ಶವ ಪಕ್ಕದಲ್ಲೇ ಮಲಗಿದ ಹಂತಕ

ಚಿಕ್ಕಮಗಳೂರು ಜಿಲ್ಲೆಯ ಆಲ್ದೂರು ತಾಲ್ಲೂಕಿನ ಹಕ್ಕಿಮಕ್ಕಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಕುಡಿಯಲು ಹಣ ಕೇಳಿದ ಮಗನಿಗೆ ತಾಯಿ ನಿಷೇಧಿಸಿದ್ದಕ್ಕೆ…

2 hours ago

ದರ್ಭಂಗಾದಲ್ಲಿ ಯುವತಿ ಅಪಹರಣ: ಕ್ರಮಕೈಗೊಳ್ಳದೆ ನಿರ್ಲಕ್ಷಿಸಿದ ಪೊಲೀಸರ ವಿರುದ್ಧ ಆಕ್ರೋಶ

ಬಿಹಾರದ ದರ್ಭಂಗಾ ಜಿಲ್ಲೆಯಲ್ಲಿ ದಿನದ ಬೆಳಗಿನ ಜಾವ ನಡೆದ ಯುವತಿಯ ಅಪಹರಣ ಪ್ರಕರಣ ಇದೀಗ ಪೊಲೀಸರ ನಿರ್ಲಕ್ಷ್ಯ ಆರೋಪದಿಂದ ಚರ್ಚೆಗೆ…

2 hours ago

ಮಂಗಳೂರು: ನೇತ್ರಾವತಿ ನದಿಯಿಂದ ಮರಳು ಕಳ್ಳ ಸಾಗಾಟ – ಪಿಕಪ್ ಹಾಗೂ ಸ್ಕೂಟರ್ ವಶಕ್ಕೆ

ಮಂಗಳೂರು ನಗರದಲ್ಲಿ ಮರಳು ಕಳ್ಳ ಸಾಗಾಟದ ಪ್ರಕರಣವೊಂದು ಬೆಳಕಿಗೆ ಬಂದಿದೆ. ಕಂಕನಾಡಿ ನಗರ ಠಾಣೆ ಪೊಲೀಸರು ನಡೆಸಿದ ತಪಾಸಣೆಯ ವೇಳೆ…

14 hours ago

ಭಟ್ಕಳ ಸಮುದ್ರ ದುರಂತ: ದೋಣಿ ಮುಗುಚಿ ನಾಲ್ವರು ಮೀನುಗಾರರು ನಾಪತ್ತೆ, ಇಬ್ಬರು ರಕ್ಷಣೆ

ಭಟ್ಕಳ, ಜುಲೈ 30 – ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ತೆಂಗಿನಗುಂಡಿ ಸಮೀಪದ ಸಮುದ್ರದಲ್ಲಿ ಭೀಕರ ದುರಂತ ಸಂಭವಿಸಿದ್ದು,…

15 hours ago