ಆನೇಕಲ್, ಜುಲೈ 09: ದೊಡ್ಡ ನಾಗಮಂಗಲದ ಸಾಯಿ ಲೇಔಟ್ ಪ್ರದೇಶದಲ್ಲಿ ಮಹಿಳೆಯೊಬ್ಬರ ಮೇಲೆ ನಡೆದಿರುವ ಸಾಮೂಹಿಕ ಅತ್ಯಾಚಾರ ಪ್ರಕರಣ ಇದೀಗ ಬೆಳಕಿಗೆ ಬಂದಿದೆ. ಘಟನೆ ಮೂರು ದಿನಗಳ ಹಿಂದೆ ನಡೆದಿದ್ದು, ತಡವಾಗಿ ಇದ ಬಗ್ಗೆ ಮಾಹಿತಿ ಹೊರಬಿದ್ದಿದೆ.
ಸಂತ್ರಸ್ತೆ ದೊಡ್ಡ ನಾಗಮಂಗಲದ ಸಾಯಿ ಲೇಔಟ್ನಲ್ಲಿರುವ ತನ್ನ ಸ್ನೇಹಿತನ ಮನೆಗೆ ಭೇಟಿ ನೀಡಿದ್ದ ವೇಳೆ ಈ ಅಮಾನುಷ ಕೃತ್ಯ ನಡೆದಿದೆ. ಆಕೆಯ ಸ್ಥಳದಲ್ಲಿದ್ದಾಗ ಇಬ್ಬರು ಅಪರಿಚಿತ ವ್ಯಕ್ತಿಗಳು ಮನೆಯೊಳಗೆ ನುಗ್ಗಿ, ದೂರು ನೀಡಿದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಬೆದರಿಸಿ ಅತ್ಯಾಚಾರ ಎಸಗಿದ್ದಾರೆ ಎಂದು ತಿಳಿದುಬಂದಿದೆ.
ಅತ್ಯಾಚಾರ ಬಳಿಕ ಆರೋಪಿಗಳು ಮಹಿಳೆಯ ಬಳಿ ಹಣವಿಗೂ ಬೇಡಿಕೆ ಇಟ್ಟಿದ್ದಾರೆ. ಆತಂಕಗೊಂಡ ಸಂತ್ರಸ್ತೆ, ಹಣದ ಅವಶ್ಯಕತೆಯನ್ನು ಸ್ನೇಹಿತೆಯ ಬಳಿ ಹೇಳಿ, ಆಕೆಯ ಬ್ಯಾಂಕ್ ಖಾತೆ ಮೂಲಕ ಹಣ ವರ್ಗಾಯಿಸಿದ್ದಾರೆ. ಆರೋಪಿಗಳು ಈ ಹಣವನ್ನು ತಮ್ಮ ಬೆಟ್ಟಿಂಗ್ ಆ್ಯಪ್ ಖಾತೆಗೆ ಜಮಾ ಮಾಡಿಕೊಂಡಿದ್ದಾರೆ.
ಇದೆಲ್ಲಕ್ಕೂ ಮೀರಿದ ಆರೋಪಿಗಳು, ಮಹಿಳೆಯ ಹಾಗೂ ಆಕೆಯ ಸ್ನೇಹಿತನ ಮೊಬೈಲ್ ಫೋನ್ಗಳನ್ನು ಕಸಿದುಕೊಂಡು, ಮನೆಯಲ್ಲಿದ್ದ ಪ್ರಿಡ್ಜ್ ಹಾಗೂ ವಾಶಿಂಗ್ ಮೆಷಿನ್ನ್ನು ಬಲವಂತವಾಗಿ ಹೊತ್ತೊಯ್ದಿದ್ದಾರೆ.
ಈ ಕುರಿತು ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಿಸಿ ಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಪೊಲೀಸರು ಮೂವರು ಶಂಕಿತ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಪ್ರಕರಣ ಸಂಬಂಧ ಹೆಚ್ಚಿನ ತನಿಖೆ ಮುಂದುವರಿಯುತ್ತಿದೆ.
ರಾಮನಗರ ಜಿಲ್ಲೆಯ ದೊಡ್ಡಮಣ್ಣುಗುಡ್ಡೆ ಗ್ರಾಮದಲ್ಲಿ ಜ್ಯೋತಿಷಿಯೊಬ್ಬ ಮಹಿಳೆಗೆ ಅಸಭ್ಯವಾಗಿ ಕಿರುಕುಳ ನೀಡಿದ ಪ್ರಕರಣ ಬೆಳಕಿಗೆ ಬಂದಿದೆ. ವಿಶೇಷ ಪೂಜೆಯ ಹೆಸರಿನಲ್ಲಿ…
ಮಧ್ಯಪ್ರದೇಶದಲ್ಲಿ ಇತ್ತೀಚೆಗೆ ಸಂಭವಿಸಿದ ಭೀಕರ ಬೋಟ್ ದುರಂತ ದೇಶದಾದ್ಯಂತ ಚರ್ಚೆಗೆ ಗ್ರಾಸವಾಗಿದೆ. ಈ ದುರ್ಘಟನೆಯಲ್ಲಿ ಇದುವರೆಗೆ 11 ಮಂದಿ ಸಾವನ್ನಪ್ಪಿರುವುದು…
ಚಿಕ್ಕಬಳ್ಳಾಪುರ: ಮದುವೆಯ ಮೊದಲ ವರ್ಷದ ವಾರ್ಷಿಕೋತ್ಸವವನ್ನು ಸಂಭ್ರಮದಿಂದ ಆಚರಿಸಿಕೊಳ್ಳಬೇಕಿದ್ದ ನವವಿವಾಹಿತೆಯೊಬ್ಬಳು, ಗಂಡನ ಅನುಮಾನ ಹಾಗೂ ನಿರಂತರ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆಗೆ…
ಪೂಜೆ ಮತ್ತು ದೀಕ್ಷೆಯ ಹೆಸರಿನಲ್ಲಿ ಮಹಿಳೆಯೊಬ್ಬರ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಪ್ರಕರಣ ಸಿ.ಕೆ. ಅಚ್ಚುಕಟ್ಟು ಪೊಲೀಸ್…
ಬೆಂಗಳೂರಿನಲ್ಲಿ ದುಃಖದ ಸುದ್ದಿ ಬೆಳಕಿಗೆ ಬಂದಿದೆ. ಮಾರಕ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ ಬೆಸ್ಕಾಂ ವಿಜಿಲೆನ್ಸ್ ವಿಭಾಗದ ಎಸ್ಪಿ ಬಿ.ಎನ್. ಲಾವಣ್ಯ…
ರಾಜ್ಯದ ಉತ್ತರ ಕನ್ನಡ ಜಿಲ್ಲೆಯಲ್ಲಿ ಮನಕಲಕುವ ಘಟನೆ ಒಂದು ಬೆಳಕಿಗೆ ಬಂದಿದೆ. ದಾಂಡೇಲಿ ನಗರದಲ್ಲಿ ಕುಟುಂಬ ಕಲಹ ಮತ್ತು ಮಾನಸಿಕ…