ಹುನಗುಂದ: ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲ್ಲೂಕಿನ ಕಮತಗಿ ಕ್ರಾಸ್ ಬಳಿ ಕೆಲವು ವಾರಗಳ ಹಿಂದೆ ಅಪಘಾತವಾಗಿದ್ದು ಅಪಘಾತದಲ್ಲಿ ಪ್ರವೀಣ್ ಸಾಬಣ್ಣನವರ್ ಎಂಬುವವರು ಮೃತಪಟ್ಟಿದ್ದರು. ಮೇಲ್ನೋಟಕ್ಕೆ ಇದು ಅಪಘಾತದ ರೀತಿಯಲ್ಲಿ ಕಂಡುಬಂದರೂ ಪೊಲೀಸರ ವಿಚಾರಣೆಯ ಬಳಿಕ ಕೊಲೆ ಎಂದು ಸಾಬೀತಾಗುವುದಲ್ಲದೆ ಅಚ್ಚರಿಯ ವಿಚಾರವೊಂದು ಹೊರಬಿದ್ದಿದೆ.
ಸಾವನ್ನಪ್ಪಿರುವ ಪ್ರವೀಣ್ ಹಾಗೂ ನಿತ್ಯ ಎಂಬಾಕೆಯು ಪ್ರೀತಿಸಿ ವಿವಾಹವಾಗಿರುತ್ತಾರೆ. ಆದರೆ ನಿತ್ಯ ಮದುವೆಯ ಬಳಿಕ ರಾಘವೇಂದ್ರ ಎಂಬಾತನೊಂದಿಗೆ ಅನೈತಿಕ ಸಂಬಂಧ ಇಟ್ಟುಕೊಂಡಿರುತ್ತಾಳೆ. ಇವಳ ಅನೈತಿಕ ಸಂಬಂಧಕ್ಕೆ ಈಕೆಯ ಗಂಡ ಮುಳುವಾಗಬಾರದು ಎಂದು ಆಲೋಚಿಸಿ ಪ್ರಿಯಕರನೊಂದಿಗೆ ಸೇರಿ ಉಪಾಯ ಮಾಡಿ ಬೈಕ್ ನಲ್ಲಿ ಚಲಿಸುತ್ತಿದ್ದಂತಹ ಪ್ರವೀಣನಿಗೆ ನಿತ್ಯ ಹಾಗೂ ರಾಘವೇಂದ್ರ ಕಾರಿನಲ್ಲಿ ಬಂದು ಗುದ್ದಿದ್ದಾರೆ. ಪ್ರವೀಣನ ಬೈಕಿಗೆ ಗುದ್ದಿದ ನಂತರ ಸ್ಥಳದಿಂದ ಪರಾರಿಯಾಗುತ್ತಿದ್ದ ನಿತ್ಯಾಗೆ ಪ್ರವೀಣನೇ ಕರೆ ಮಾಡಿ ನನಗೆ ಆಘಾತವಾಗಿದೆ ನನ್ನನ್ನು ಹತ್ತಿರದ ಆಸ್ಪತ್ರೆಗೆ ಸೇರಿಸಿ ಕಾಪಾಡು ಎಂದು ಕೇಳಿಕೊಂಡಿದ್ದಾನೆ. ಆದರೆ ಈ ಐನಾತಿ ಹೆಂಡ್ತಿ ನಿತ್ಯ ಪುನಃ ಕಾರಿನಲ್ಲಿ ಹಿಂದೆ ಬಂದು ಪ್ರವೀಣನ ಮೇಲೆ ಕಾರು ಹತ್ತಿಸಿ ಮೃತ ಪಡುವಂತೆ ಮಾಡಿದ್ದಾಳೆ. ಈ ಎಲ್ಲಾ ವಿಚಾರವೂ ಪೋಲಿಸರ ತನಿಖೆಯ ಬಳಿಕ ಬೆಳಕಿಗೆ ಬಂದಿದು ಅನೈತಿಕ ಸಂಬಂಧಕ್ಕಾಗಿ ಗಂಡನನ್ನು ಬಲಿತೆಗೆದುಕೊಂಡ ನಿತ್ಯ ಹಾಗೂ ಆಕೆಯ ಪ್ರಿಯಕರ ರಾಘವೇಂದ್ರ ಈಗ ಪೊಲೀಸರ ಅತಿಥಿಯಾಗಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಮೂಡಬಿದಿರೆ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಆಗಿದ್ದ ಸಂದೇಶ್…
Iran-Israel ಸಂಘರ್ಷದ ಪರೋಕ್ಷ ಪರಿಣಾಮವಾಗಿ ರಾಜ್ಯದಲ್ಲಿ ಬಿಸ್ಕೆಟ್ ಅಭಾವದ ಭೀತಿ ಎದುರಾಗಿದೆ. ವಿಶೇಷವಾಗಿ ಮಕ್ಕಳಿಗೆ ಹೆಚ್ಚು ಬಳಸುವ Parle-G ಬಿಸ್ಕೆಟ್ಗಳ…
ಧಾರವಾಡ ಜಿಲ್ಲೆಯ Navalgund ತಾಲೂಕಿನ ಒಂದು ಗ್ರಾಮದಲ್ಲಿ ಗಂಭೀರ ಘಟನೆ ಬೆಳಕಿಗೆ ಬಂದಿದೆ. ಶಾಲೆಯ ಮುಖ್ಯಶಿಕ್ಷಕನ ವಿರುದ್ಧ 10 ವರ್ಷದ…
ತುಮಕೂರು ಜಿಲ್ಲೆಯ Pavagada ಪಟ್ಟಣದಲ್ಲಿ ಹೃದಯ ಕಲುಕುವ ಘಟನೆ ನಡೆದಿದೆ. ಮೇಲಾಧಿಕಾರಿಗಳ ಕಿರುಕುಳದಿಂದ ಮನನೊಂದು ಅಧಿಕಾರಿಯೊಬ್ಬರು ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವುದು…
ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಒಂದು ವಿಡಿಯೋ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. X ನಲ್ಲಿ ವೈರಲ್ ಆಗಿರುವ ಈ ವಿಡಿಯೋ…
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತಾರಕಕ್ಕೇರಿರುವ ಬೆನ್ನಲ್ಲೇ United States ಮತ್ತು Israel ಪಡೆಗಳು Iranನ ಅತ್ಯಂತ ಪ್ರಮುಖ ಪರಮಾಣು ಕೇಂದ್ರವಾದ Natanz…