Latest

ಕರೆ ಮಾಡಿ ಕಾಪಾಡು ಎಂದ ಪತಿಯ ಮೇಲೆ ಕಾರು ಹತ್ತಿಸಿ ಕೊಂದ ಪತ್ನಿ!

ಹುನಗುಂದ: ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲ್ಲೂಕಿನ ಕಮತಗಿ ಕ್ರಾಸ್ ಬಳಿ ಕೆಲವು ವಾರಗಳ ಹಿಂದೆ ಅಪಘಾತವಾಗಿದ್ದು ಅಪಘಾತದಲ್ಲಿ ಪ್ರವೀಣ್ ಸಾಬಣ್ಣನವರ್ ಎಂಬುವವರು ಮೃತಪಟ್ಟಿದ್ದರು. ಮೇಲ್ನೋಟಕ್ಕೆ ಇದು ಅಪಘಾತದ ರೀತಿಯಲ್ಲಿ ಕಂಡುಬಂದರೂ ಪೊಲೀಸರ ವಿಚಾರಣೆಯ ಬಳಿಕ ಕೊಲೆ ಎಂದು ಸಾಬೀತಾಗುವುದಲ್ಲದೆ ಅಚ್ಚರಿಯ ವಿಚಾರವೊಂದು ಹೊರಬಿದ್ದಿದೆ.
ಸಾವನ್ನಪ್ಪಿರುವ ಪ್ರವೀಣ್ ಹಾಗೂ ನಿತ್ಯ ಎಂಬಾಕೆಯು ಪ್ರೀತಿಸಿ ವಿವಾಹವಾಗಿರುತ್ತಾರೆ. ಆದರೆ ನಿತ್ಯ ಮದುವೆಯ ಬಳಿಕ ರಾಘವೇಂದ್ರ ಎಂಬಾತನೊಂದಿಗೆ ಅನೈತಿಕ ಸಂಬಂಧ ಇಟ್ಟುಕೊಂಡಿರುತ್ತಾಳೆ. ಇವಳ ಅನೈತಿಕ ಸಂಬಂಧಕ್ಕೆ ಈಕೆಯ ಗಂಡ ಮುಳುವಾಗಬಾರದು ಎಂದು ಆಲೋಚಿಸಿ ಪ್ರಿಯಕರನೊಂದಿಗೆ ಸೇರಿ ಉಪಾಯ ಮಾಡಿ ಬೈಕ್ ನಲ್ಲಿ ಚಲಿಸುತ್ತಿದ್ದಂತಹ ಪ್ರವೀಣನಿಗೆ ನಿತ್ಯ ಹಾಗೂ ರಾಘವೇಂದ್ರ ಕಾರಿನಲ್ಲಿ ಬಂದು ಗುದ್ದಿದ್ದಾರೆ. ಪ್ರವೀಣನ ಬೈಕಿಗೆ ಗುದ್ದಿದ ನಂತರ ಸ್ಥಳದಿಂದ ಪರಾರಿಯಾಗುತ್ತಿದ್ದ ನಿತ್ಯಾಗೆ ಪ್ರವೀಣನೇ ಕರೆ ಮಾಡಿ ನನಗೆ ಆಘಾತವಾಗಿದೆ ನನ್ನನ್ನು ಹತ್ತಿರದ ಆಸ್ಪತ್ರೆಗೆ ಸೇರಿಸಿ ಕಾಪಾಡು ಎಂದು ಕೇಳಿಕೊಂಡಿದ್ದಾನೆ. ಆದರೆ ಈ ಐನಾತಿ ಹೆಂಡ್ತಿ ನಿತ್ಯ ಪುನಃ ಕಾರಿನಲ್ಲಿ ಹಿಂದೆ ಬಂದು ಪ್ರವೀಣನ ಮೇಲೆ ಕಾರು ಹತ್ತಿಸಿ ಮೃತ ಪಡುವಂತೆ ಮಾಡಿದ್ದಾಳೆ. ಈ ಎಲ್ಲಾ ವಿಚಾರವೂ ಪೋಲಿಸರ ತನಿಖೆಯ ಬಳಿಕ ಬೆಳಕಿಗೆ ಬಂದಿದು ಅನೈತಿಕ ಸಂಬಂಧಕ್ಕಾಗಿ ಗಂಡನನ್ನು ಬಲಿತೆಗೆದುಕೊಂಡ ನಿತ್ಯ ಹಾಗೂ ಆಕೆಯ ಪ್ರಿಯಕರ ರಾಘವೇಂದ್ರ ಈಗ ಪೊಲೀಸರ ಅತಿಥಿಯಾಗಿದ್ದಾರೆ.

ಭ್ರಷ್ಟರ ಬೇಟೆ

Recent Posts

ಕರ್ಕಶ ಶಬ್ದದ ಬೈಕ್ ವಿಚಾರಕ್ಕೆ ಪೊಲೀಸರ ಮೇಲೆಯೇ ವಿದ್ಯಾರ್ಥಿಗಳ ಹಲ್ಲೆ

ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…

6 hours ago

ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ ದಂಧೆ: ಬೆಳ್ತಂಗಡಿಯಲ್ಲಿ ಪೊಲೀಸರ ದಾಳಿ, ಮೂವರು ಬಂಧನ

ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…

6 hours ago

ಒಂದು ವರ್ಷದ ನಿರೀಕ್ಷೆಗೆ ತೆರೆ: ಭಟ್ಕಳಕ್ಕೆ ಖಾಯಂ ಎಸಿ, ಜೆ. ಮಹೇಶ್ ಅಧಿಕಾರ ಸ್ವೀಕಾರ

ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…

1 day ago

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ; ರಾಜಕೀಯ ವಲಯದಲ್ಲಿ ಶೋಕದ ಛಾಯೆ

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…

1 day ago

ಆಂಟಿ ಹಿಂದೆ ಹೋದವನ ದುರಂತ ಅಂತ್ಯ: ಲಿವ್-ಇನ್ ಸಂಗಾತಿಯ ಕಿರುಕುಳಕ್ಕೆ ಯುವಕ ಆತ್ಮಹತ್ಯೆ!

ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…

1 day ago

ಶಸ್ತ್ರಚಿಕಿತ್ಸೆಗೆ ದಾಖಲಾಗಿದ್ದ ಮಹಿಳೆಯ ಚಿನ್ನಾಭರಣ ಕಳವು: ಖಾಸಗಿ ಆಸ್ಪತ್ರೆ ಸಿಬ್ಬಂದಿ ವಶಕ್ಕೆ

ಬೆಂಗಳೂರು: ಶಸ್ತ್ರಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯ ಚಿನ್ನಾಭರಣ ಕಳವು ಮಾಡಿದ್ದ ಆರೋಪದ ಮೇಲೆ ಆಸ್ಪತ್ರೆಯ ಮಹಿಳಾ ಸಿಬ್ಬಂದಿಯನ್ನು ಹೆಣ್ಣೂರು…

2 days ago