ಹುನಗುಂದ: ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲ್ಲೂಕಿನ ಕಮತಗಿ ಕ್ರಾಸ್ ಬಳಿ ಕೆಲವು ವಾರಗಳ ಹಿಂದೆ ಅಪಘಾತವಾಗಿದ್ದು ಅಪಘಾತದಲ್ಲಿ ಪ್ರವೀಣ್ ಸಾಬಣ್ಣನವರ್ ಎಂಬುವವರು ಮೃತಪಟ್ಟಿದ್ದರು. ಮೇಲ್ನೋಟಕ್ಕೆ ಇದು ಅಪಘಾತದ ರೀತಿಯಲ್ಲಿ ಕಂಡುಬಂದರೂ ಪೊಲೀಸರ ವಿಚಾರಣೆಯ ಬಳಿಕ ಕೊಲೆ ಎಂದು ಸಾಬೀತಾಗುವುದಲ್ಲದೆ ಅಚ್ಚರಿಯ ವಿಚಾರವೊಂದು ಹೊರಬಿದ್ದಿದೆ.
ಸಾವನ್ನಪ್ಪಿರುವ ಪ್ರವೀಣ್ ಹಾಗೂ ನಿತ್ಯ ಎಂಬಾಕೆಯು ಪ್ರೀತಿಸಿ ವಿವಾಹವಾಗಿರುತ್ತಾರೆ. ಆದರೆ ನಿತ್ಯ ಮದುವೆಯ ಬಳಿಕ ರಾಘವೇಂದ್ರ ಎಂಬಾತನೊಂದಿಗೆ ಅನೈತಿಕ ಸಂಬಂಧ ಇಟ್ಟುಕೊಂಡಿರುತ್ತಾಳೆ. ಇವಳ ಅನೈತಿಕ ಸಂಬಂಧಕ್ಕೆ ಈಕೆಯ ಗಂಡ ಮುಳುವಾಗಬಾರದು ಎಂದು ಆಲೋಚಿಸಿ ಪ್ರಿಯಕರನೊಂದಿಗೆ ಸೇರಿ ಉಪಾಯ ಮಾಡಿ ಬೈಕ್ ನಲ್ಲಿ ಚಲಿಸುತ್ತಿದ್ದಂತಹ ಪ್ರವೀಣನಿಗೆ ನಿತ್ಯ ಹಾಗೂ ರಾಘವೇಂದ್ರ ಕಾರಿನಲ್ಲಿ ಬಂದು ಗುದ್ದಿದ್ದಾರೆ. ಪ್ರವೀಣನ ಬೈಕಿಗೆ ಗುದ್ದಿದ ನಂತರ ಸ್ಥಳದಿಂದ ಪರಾರಿಯಾಗುತ್ತಿದ್ದ ನಿತ್ಯಾಗೆ ಪ್ರವೀಣನೇ ಕರೆ ಮಾಡಿ ನನಗೆ ಆಘಾತವಾಗಿದೆ ನನ್ನನ್ನು ಹತ್ತಿರದ ಆಸ್ಪತ್ರೆಗೆ ಸೇರಿಸಿ ಕಾಪಾಡು ಎಂದು ಕೇಳಿಕೊಂಡಿದ್ದಾನೆ. ಆದರೆ ಈ ಐನಾತಿ ಹೆಂಡ್ತಿ ನಿತ್ಯ ಪುನಃ ಕಾರಿನಲ್ಲಿ ಹಿಂದೆ ಬಂದು ಪ್ರವೀಣನ ಮೇಲೆ ಕಾರು ಹತ್ತಿಸಿ ಮೃತ ಪಡುವಂತೆ ಮಾಡಿದ್ದಾಳೆ. ಈ ಎಲ್ಲಾ ವಿಚಾರವೂ ಪೋಲಿಸರ ತನಿಖೆಯ ಬಳಿಕ ಬೆಳಕಿಗೆ ಬಂದಿದು ಅನೈತಿಕ ಸಂಬಂಧಕ್ಕಾಗಿ ಗಂಡನನ್ನು ಬಲಿತೆಗೆದುಕೊಂಡ ನಿತ್ಯ ಹಾಗೂ ಆಕೆಯ ಪ್ರಿಯಕರ ರಾಘವೇಂದ್ರ ಈಗ ಪೊಲೀಸರ ಅತಿಥಿಯಾಗಿದ್ದಾರೆ.
ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…
ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…
ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…
ಉತ್ತರ ಪ್ರದೇಶದ ಅಲಿಗಢ್ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…
ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್ಮೆಂಟ್ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…
ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…