ಘಾಜಿಯಾಬಾದ್: ಆರ್ಸಿಬಿ ತಂಡದ ವೇಗದ ಬೌಲರ್ ಯಶ್ ದಯಾಳ್ ವಿರುದ್ಧ ಮಹಿಳೆಯೊಬ್ಬರು ಗಂಭೀರ ಆರೋಪ ಹೊರಿಸಿದ್ದಾರೆ. ದಯಾಳ್ ತನ್ನನ್ನು ಮದುವೆಯಾಗುವ ಭರವಸೆ ನೀಡಿದ್ದರೂ, ನಂತರ ಮೋಸಮಾಡಿ ದೂರ ಸರಿದಿದ್ದಾನೆ ಎಂದು ಆಕೆ ದೂರಿದ್ದಾರೆ. ಇದಲ್ಲದೆ, ದಯಾಳ್ ತನ್ನ ಮೇಲೆ ಮಾನಸಿಕ ಹಾಗೂ ದೈಹಿಕ ಹಿಂಸೆ ಎಸಗಿದ್ದಾನೆ ಎಂಬ ಗಂಭೀರ ಆರೋಪ ಕೂಡ ಮಹಿಳೆಯು ಮಾಡಿದ್ದಾರೆ.
ಘಾಜಿಯಾಬಾದ್ನ ಪೊಲೀಸರ ಬಳಿ ಮಹಿಳೆ ದೂರು ದಾಖಲಿಸಿದ್ದು, ಈಗಾಗಲೇ ಅವರ ಹೇಳಿಕೆ ದಾಖಲಾಗಿದೆ. ಉತ್ತರ ಪ್ರದೇಶ ಸರ್ಕಾರದ ಕುಂದುಕೊರತೆ ಪರಿಹಾರ ಪೋರ್ಟಲ್ ಮೂಲಕ ಈ ದೂರು ದಾಖಲಾಗಿ, ಎರಡು ದಿನಗಳ ಹಿಂದೆ ಈ ಕುರಿತು ಅಧಿಕಾರಿಗಳಿಗೆ ಮಾಹಿತಿ ಲಭಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರ್ಥಿಕ ಹಾಗೂ ಭಾವನಾತ್ಮಕವಾಗಿ ದಯಾಳ್ ಮೇಲೆ ಸಂಪೂರ್ಣ ಅವಲಂಬಿತರಾಗಿದ್ದುದಾಗಿ ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ. ಆದರೆ ದಯಾಳ್, ಇನ್ನೊಬ್ಬ ಮಹಿಳೆಯೊಂದಿಗೆ ಸಹ ಸಂಬಂಧ ಹೊಂದಿದ್ದರು ಎಂಬ ಸಂಗತಿಯೂ ಈ ದೂರುದಲ್ಲಿ ಉಲ್ಲೇಖವಾಗಿದೆ.
2020 ರ ಕೊನೆಯಲ್ಲಿ ಮಹಿಳೆ ಮತ್ತು ಯಶ್ ದಯಾಳ್ ಸಾಮಾಜಿಕ ಜಾಲತಾಣದ ಮೂಲಕ ಪರಿಚಿತರಾಗಿ, ಪ್ರಾರಂಭದಲ್ಲಿ ಪ್ರಯಾಗ್ರಾಜ್ನಲ್ಲಿ ಭೇಟಿಯಾದರು. ನಂತರ ಅವರ ನಡುವಿನ ಸಂಪರ್ಕ ಆಳವಾಗುತ್ತಾ ಹೋಗಿದ್ದು, ಹಲವಾರು ಬಾರಿ ಮಹಿಳೆ ದಯಾಳ್ ಅವರ ನಿವಾಸದಲ್ಲಿ ಉಳಿದಿದ್ದು, ಕುಟುಂಬದೊಂದಿಗೆ ಸಹ ಆತ್ಮೀಯತೆಯನ್ನು ಹೊಂದಿದ್ದರು. 2022ರ ಐಪಿಎಲ್ ಫೈನಲ್ ಸಂದರ್ಭದಲ್ಲಿ ಗುಜರಾತ್ ಟೈಟಾನ್ಸ್ ತಂಡ ಜಯಗಳಿಸಿದಾಗ, ಅವರು ದಯಾಳ್ ಕುಟುಂಬದೊಂದಿಗೆ ಪಂದ್ಯವನ್ನು ವೀಕ್ಷಿಸಿದ್ದರು.
ಕಳೆದ ಎರಡು ವರ್ಷಗಳಿಂದ ದೂರವಾಗತೊಡಗಿತ್ತು ಎಂದು ಮಹಿಳೆ ಹೇಳಿದ್ದಾರೆ. ಕ್ರಿಕೆಟಿಗನಿಂದ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸುತ್ತಾ, ಮಹಿಳೆ ತಮ್ಮ ಬಳಿ ಸಾಕಷ್ಟು ಪುರಾವೆಗಳಿವೆ ಎಂದು ತಿಳಿಸಿದ್ದಾರೆ — ಚಾಟ್ಗಳ ಸ್ಕ್ರೀನ್ಶಾಟ್ಗಳು, ವೀಡಿಯೋ ಕರೆಗಳ ದಾಖಲೆಗಳು ಮತ್ತು ಫೋಟೋಗಳು ಇತ್ಯಾದಿ.
ಘಾಜಿಯಾಬಾದ್ ಪೊಲೀಸರು ಈ ಬಗ್ಗೆ ತನಿಖೆ ಪ್ರಾರಂಭಿಸಿದ್ದು, “ಯಶ್ ದಯಾಳ್ ಅವರ ಹೇಳಿಕೆ ಇನ್ನೂ ದಾಖಲೆಯಾಗಿಲ್ಲ. ತನಿಖೆ ಪೂರ್ಣಗೊಳ್ಳುವವರೆಗೆ ಯಾವುದೇ ತೀರ್ಮಾನಕ್ಕೆ ಬರಲಾಗದು,” ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…