Crime

ಅರಸೀಕೆರೆ ರೈಲು ನಿಲ್ದಾಣದಲ್ಲಿ ಮಹಿಳೆ ಮೇಲೆ ಅತ್ಯಾಚಾರ, ಕೊಲೆ: ಆರೋಪಿಯ ಬಂಧನ

ಅರಸೀಕೆರೆ ರೈಲ್ವೆ ಪೊಲೀಸರು ತೀವ್ರ ತನಿಖೆ ನಡೆಸಿ, ರೈಲು ನಿಲ್ದಾಣದಲ್ಲಿ ಅಪರಿಚಿತ ಮಹಿಳೆಯ ಮೇಲೆ ಅತ್ಯಾಚಾರ ಎಸಗಿ, ಬಳಿಕ ಹತ್ಯೆ ಮಾಡಿದ್ದ ಆರೋಪಿಯನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿ ಮೌಸಮ್ ಪಹಡಿ (25), ಕೂಲಿ ಕೆಲಸ ಮಾಡುತ್ತಿದ್ದ ಈತ, ಮಹಿಳೆಯ ಕೊಲೆಯಲ್ಲಿ ಪ್ರಮುಖ ಆರೋಪಿಯಾಗಿದ್ದು, ಪೊಲೀಸರು ಆತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಘಟನೆ ವಿವರ

  • ಫೆಬ್ರವರಿ 13ರಂದು ಬೆಳಗ್ಗೆ, ಸಕಲೇಶಪುರ ಕಡೆ ಯಾರ್ಡ್‌ನ ಟವರ್ ವ್ಯಾಗನ್ ಶೆಡ್ ಬಳಿ, ಸುಮಾರು 40 ವರ್ಷದ ಅಪರಿಚಿತ ಮಹಿಳೆ ದಾರుణವಾಗಿ ಹತ್ಯೆಗೀಡಾಗಿದ್ದರು.
  • ಆರೋಪಿ ಮಹಿಳೆಯ ತಲೆಯ ಮೇಲೆ ಸಿಮೆಂಟ್ ಇಟ್ಟಿಗೆ ಎತ್ತಿಹಾಕಿ ಕೊಲೆ ಮಾಡಿದ್ದ ಎಂದು ತಿಳಿದು ಬಂದಿದೆ.
  • ನಿರ್ಮಾಣ ಹಂತದಲ್ಲಿದ್ದ ಆಯಿಲ್ & ಪೆಟ್ರೋಲ್ ಗೋದಾಮಿನ ರೂಮಿನಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿತ್ತು.
  • ಈ ಕುರಿತು ಸಿವಿಲ್ ಇಂಜಿನಿಯರ್ ಪವನ್ C.M. ರೈಲ್ವೆ ಪೊಲೀಸರಿಗೆ ದೂರು ಸಲ್ಲಿಸಿದ್ದರು.

ಪೊಲೀಸರ ಕಾರ್ಯಾಚರಣೆ

ಬೆಂಗಳೂರು ರೈಲ್ವೇ ಎಸ್‌ಪಿ ಡಾ. ಸೌಮ್ಯಲತಾ ಮಾರ್ಗದರ್ಶನದಲ್ಲಿ, ರೈಲ್ವೆ ಉಪ ವಿಭಾಗದ ಡಿ.ಎಸ್.ಪಿ. ಆರ್. ಸತೀಶ್ ಕುಮಾರ್ ಮೇಲ್ವಿಚಾರಣೆಯಲ್ಲಿ, ಮೈಸೂರು ರೈಲ್ವೆ ವೃತ್ತದ ಇನ್ಸ್‌ಪೆಕ್ಟರ್ ಚೇತನ್. ವಿ. ನೇತೃತ್ವದಲ್ಲಿ ವಿಶೇಷ ಪೊಲೀಸ್ ತಂಡ ರಚಿಸಲಾಗಿತ್ತು. ಈ ತಂಡ ತನಿಖೆ ಮುಂದುವರಿಸಿ ಆರೋಪಿಯನ್ನು ಪತ್ತೆ ಮಾಡಿ, ನ್ಯಾಯಾಲಯಕ್ಕೆ ಹಾಜರುಪಡಿಸಿದೆ.

ಭ್ರಷ್ಟರ ಬೇಟೆ

Recent Posts

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

2 hours ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

2 hours ago

ಹುಬ್ಬಳ್ಳಿ–ಅಂಕೋಲಾ ರೈಲ್ವೆ ಯೋಜನೆಗೆ ಭೂಸ್ವಾಧೀನ ಅಧಿಕೃತ ಚಾಲನೆ

163 ಕಿ.ಮೀ. ಉದ್ದದ ಯೋಜನೆ; ಉತ್ತರ ಕನ್ನಡದ 40 ಗ್ರಾಮಗಳು ಭೂಸ್ವಾಧೀನ ವ್ಯಾಪ್ತಿಗೆ ಉತ್ತರ ಕನ್ನಡ: ಹಲವು ವರ್ಷಗಳಿಂದ ನನೆಗುದಿಗೆ…

2 hours ago

ಪಾಂಡೆಗಾಂವ–ಕಂಗೋಳಿ ರಸ್ತೆ ಕೆಸರಿನ ಹೊಂಡ: ಜನರ ಆಕ್ರೋಶ, ಕಾಮಗಾರಿ ವಿಳಂಬವಾದರೆ ರಸ್ತೆ ತಡೆ ಎಚ್ಚರಿಕೆ

ಮಳೆ ಬಂದರೆ ಕೆಸರುಗದ್ದೆ; ವಿದ್ಯಾರ್ಥಿಗಳು, ವೃದ್ಧರು, ರೋಗಿಗಳ ಸಂಚಾರಕ್ಕೆ ಸಂಕಷ್ಟ — ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ ಕಾಗವಾಡ: ಬೆಳಗಾವಿ…

2 hours ago

ಜಾತ್ರೆಯಲ್ಲಿ ಮಹಿಳೆಯ ಮಂಗಳಸೂತ್ರ ಕಳವು: ಮೂವರು ಆರೋಪಿಗಳ ಬಂಧನ

₹4.50 ಲಕ್ಷ ಮೌಲ್ಯದ ಚಿನ್ನ, ಕೃತ್ಯಕ್ಕೆ ಬಳಸಿದ್ದ ಬೈಕ್ ವಶ ಹಳಿಯಾಳ: ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ…

18 hours ago

ಬೈಕ್‌ನಲ್ಲಿ ಕರೆದೊಯ್ದು ಹಣ ಕಸಿದು ಜೀವ ಬೆದರಿಕೆ: 24 ಗಂಟೆಯಲ್ಲೇ ಆರೋಪಿ ಬಂಧನ

ಸಿಸಿಟಿವಿ ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಯ ಪತ್ತೆ; ಬೈಕ್, ಹಣ ವಶ ಹೊನ್ನಾವರ: ಬ್ಯಾಂಕ್‌ನಿಂದ ಹಣ ಪಡೆದು ಹೊರಬಂದ…

18 hours ago