ಬೆಳಗಾವಿ ಜಿಲ್ಲೆಯ ಬೈರನಟ್ಟಿ ಗ್ರಾಮದಲ್ಲಿ ಬ್ಯಾಂಕ್ ಸಿಬ್ಬಂದಿಗಳ ಕಿರುಕುಳಕ್ಕೆ ಮಹಿಳೆಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಪಾರ್ವತೆಮ್ಮ ಸೋಮಪ್ಪ ಮುತ್ನಾಳ ಎಂಬ 50 ವರ್ಷದ ಮಹಿಳೆ ಮಗನಾದ ದೇಮಪ್ಪ ಖಾಸಗಿ ಬ್ಯಾಂಕ್ ಮುಚ್ಚಂಡಿಯಿಂದ ಎಮ್ಮೆಯ ಮೇಲೆ ಸಾಲವನ್ನು ತೆಗೆದುಕೊಂಡಿದು. ಇಲ್ಲಿಯವರೆಗೂ ಕಂತುಗಳನ್ನು ಕಟ್ಟುತ್ತಾ ಬಂದಿದ. ಈ ತಿಂಗಳು ಅಂದರೆ ಫೆಬ್ರುವರಿ ತಿಂಗಳ ಕಂತು ಕಟ್ಟುವುದು ತಡವಾದರಿಂದ ದಿನಾಂಕ 15/02/2024 ರ ಬೆಳಿಗ್ಗೆ 10 ಘಂಟೆ ಸುಮಾರಿಗೆ ಖಾಸಗಿ ಬ್ಯಾಂಕ್ ಸಿಬ್ಬಂದಿಯಾದ ಸೋಮು ಕಿರಗಾವ ಹಾಗೂ ಹೆಸರು ಗೊತ್ತಿರದ ಇನ್ನೊಬ್ಬ ಸಿಬ್ಬಂದಿ, ಇಬ್ಬರು ಪದೇ ಪದೇ ಮನೆಗೆ ಬಂದು ಒಬ್ಬಳೇ ಇದ್ದಾಗ ಅವಾಚ್ಯ ಶಬ್ದಗಳಿಂದ ಬೈದಿದ್ದಾರೆ ಎಂದು ಮಹಿಳೆ ಆರೋಪಿಸಿರುತ್ತಾರೆ.
ಮರ್ಯಾದೆಗೆ ಹೆದರಿ, ಬೈಯಬೇಡಿ ನಾನು ಏನಾದರೂ ಕುಡಿದು ಸಾಯ್ತೀನಿ ನೋಡಿ ಎಂದಾಗ ಬ್ಯಾಂಕಿನ ಸಿಬ್ಬಂದಿ ನೀನು ವಿಷ ಕುಡಿದು ಸಾಯಿ ಆಗ ನಿನ್ನ ಮಗ ಬರುತ್ತಾನಲ್ಲ ಅವ ಬಂದ ಮೇಲೆ ಸಾಲ ವಸೂಲಿ ಮಾಡುತ್ತೇವೆ ಎಂದು ವಿಷ ಕುಡಿಯಲು ಬ್ಯಾಂಕ್ನ ಸಿಬ್ಬಂದಿಯೇ ಪ್ರಚೋದಿಸಿರುತ್ತಾನೆ ಎಂದು ಮಹಿಳೆ ಆರೋಪಿಸಿರುತ್ತಾರೆ.
ಮಹಿಳೆಯು ವಿಷ ಸೇವಿಸಿದ್ದು ಸ್ಥಳದಿಂದ ಬ್ಯಾಂಕ್ ನ ಸಿಬ್ಬಂದಿಗಳು ಪರಾರಿಯಾಗಿರುತ್ತಾರೆ. ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿದ್ದು ನೇಸರಗಿ ಠಾಣ ಪೊಲೀಸರು ದೂರನ್ನು ದಾಖಲಿಸಿಕೊಂಡಿರುತ್ತಾರೆ.
ವರದಿ: ಸಂಗಪ್ಪ ಚಲವಾದಿ
ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ…
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…
ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…
ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…
ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕಾನಸೂರಿನ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿ ಗೋಕುಲ ಗೌಡ ಸಾವನ್ನಪ್ಪಿದ ಪ್ರಕರಣಕ್ಕೆ…
ಹಳಿಯಾಳ: ತಾಲೂಕಿನ ಕಾಳಗಿನಕೊಪ್ಪ ಗ್ರಾಮದಲ್ಲಿ ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ನಾಡಬಾಂಬ್ಗಳು ಸೋಮವಾರ ಮುಂಜಾನೆ ಭಾರೀ ಸ್ಫೋಟಗೊಂಡ ಪರಿಣಾಮ ಹಲವು ಮನೆಗಳಿಗೆ…