Latest

ಅಶ್ಲೀಲ ವರ್ತನೆಗೆ ಪ್ರಶ್ನೆ ಕೇಳಿದ ಮಹಿಳೆಯ ಪತಿ ಹಾಗೂ ಏಳು ಮಂದಿ ಮೇಲೆ ಹಲ್ಲ: ಆರೋಪಿಗಾಗಿ ಪೊಲೀಸರ ಹುಡುಕಾಟ.

ಬೆಂಗಳೂರು: ನಗರದಲ್ಲೊಂದು ಅಶ್ಲೀಲ ವರ್ತನೆ ಗಂಭೀರ ಹಲ್ಲೆ ಪ್ರಕರಣಕ್ಕೆ ಕಾರಣವಾಗಿದ್ದು, ಸಿಲಿಕಾನ್ ಸಿಟಿಯಲ್ಲಿರುವ ಶಿವಾಜಿನಗರದಲ್ಲಿ ಏಪ್ರಿಲ್ 13ರಂದು ಈ ಘಟನೆ ನಡೆದಿದೆ. ಯುವಕನೊಬ್ಬ ಮಹಿಳೆಯೊಬ್ಬರ ಮುಂದೆ ತಮ್ಮ ಮರ್ಮಾಂಗ ತೋರಿಸಿ ಲೈಂಗಿಕ ಕಿರುಕುಳ ನೀಡಿದ ಘಟನೆ ವಿವಾದದ ಮೂಲವಾಗಿದೆ.

ಪೊಲೀಸರ ಪ್ರಕಾರ, ಮಹಿಳೆ ತನ್ನ ಮನೆಯ ಮಹಡಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಎದುರು ಮನೆಯಲ್ಲಿ ವಾಸಿಸುತ್ತಿದ್ದ ಕಾರ್ತಿಕ್ ಎಂಬ ಯುವಕ ಪ್ಯಾಂಟ್‌ ಜೀಪ್ ಬಿಚ್ಚಿ ತನ್ನ ಮರ್ಮಾಂಗವನ್ನು ತೋರಿಸಿದ್ದಾನೆ. ಅಲ್ಲದೆ, ಅಶ್ಲೀಲ ಹಾವಭಾವಗಳನ್ನು ಪ್ರದರ್ಶಿಸಿ ಆಕೆಯನ್ನು ಲೈಂಗಿಕ ಕ್ರಿಯೆಗೆ ಆಹ್ವಾನಿಸಿದ್ದಾನೆ.

ಘಟನೆಯ ತೀವ್ರತೆಗೆ ಬೆಚ್ಚಿಬಿದ್ದ ಮಹಿಳೆ ತಕ್ಷಣವೇ ಪತಿಯನ್ನು ಕರೆದು ಸಹಾಯ ಕೋರಿದ್ದಾಳೆ. ಆಗ ಕಾರ್ತಿಕ್ ಆಕ್ರೋಶಗೊಂಡು ಆಕೆಯ ಪತಿಯ ಮೇಲೆ ಹಲ್ಲೆ ನಡೆಸಿದ್ದಾನೆ. ಜಗಳವನ್ನು ಶಮನಗೊಳಿಸಲು ಬಂದ ನೆರೆಹೊರೆಯವರ ಮೇಲೂ ಹಲ್ಲೆ ನಡೆಸಿದ್ದು, ಹಾಲೊ ಬ್ಲಾಕ್‌, ಹೂವಿನ ಕುಂಡಗಳು ಮತ್ತು ಕಿಟಕಿಯ ಗಾಜುಗಳನ್ನು ಉಪಯೋಗಿಸಿ ದುಷ್ಕೃತ್ಯ ನಡೆಸಲಾಗಿದೆ.

ಘಟನೆಯಲ್ಲಿ ಏಳು ಮಂದಿ ಗಾಯಗೊಂಡಿದ್ದು, ಅವರಲ್ಲಿ ಮೂವರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಆಕ್ರೋಶದ ಹೊಟ್ಟೆಯಲ್ಲಿ ತನ್ನ ತಾಯಿಯ ಮೇಲೂ ಹಲ್ಲೆ ನಡೆಸಿರುವ ಶಂಕಿತನ ವಿರುದ್ಧ ಶಿವಾಜಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಯ ಬಳಿಕ ಕಾರ್ತಿಕ್ ಸ್ಥಳದಿಂದ ಪರಾರಿಯಾಗಿದ್ದು, ಪೊಲೀಸರ ತಂಡ ಅವನಿಗಾಗಿ ಶೋಧ ಕಾರ್ಯ ನಡೆಸುತ್ತಿದೆ.

ಪೊಲೀಸರು ನೀಡಿದ ಮಾಹಿತಿ ಪ್ರಕಾರ, ಈತನ ವಿರುದ್ಧ ಮೊದಕ್ಕೂ ಅನೇಕ ಮಹಿಳೆಯರ ಮೇಲೆ ಅಸಭ್ಯ ವರ್ತನೆಯ ಆರೋಪಗಳು ದಾಖಲಾಗಿದ್ದು, ಈಗ ನಡೆದಿರುವ ಘಟನೆಯು ಸಾರ್ವಜನಿಕರಲ್ಲಿ ಭೀತಿ ಹುಟ್ಟಿಸಿದೆ.

ಕಾರ್ತಿಕ್ ಬಂಧನಕ್ಕೆ ಮುಂದಾಗಿ ಪೊಲೀಸರು ಬಲೆ ಬೀಸಿದ್ದು, ಶೀಘ್ರದಲ್ಲೇ ಅವನನ್ನು ಕಾನೂನು ಮುಂದಕ್ಕೆ ಒಯ್ಯಲಿದ್ದಾರೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.

nazeer ahamad

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

2 weeks ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago