Latest

ಅಶ್ಲೀಲ ವರ್ತನೆಗೆ ಪ್ರಶ್ನೆ ಕೇಳಿದ ಮಹಿಳೆಯ ಪತಿ ಹಾಗೂ ಏಳು ಮಂದಿ ಮೇಲೆ ಹಲ್ಲ: ಆರೋಪಿಗಾಗಿ ಪೊಲೀಸರ ಹುಡುಕಾಟ.

ಬೆಂಗಳೂರು: ನಗರದಲ್ಲೊಂದು ಅಶ್ಲೀಲ ವರ್ತನೆ ಗಂಭೀರ ಹಲ್ಲೆ ಪ್ರಕರಣಕ್ಕೆ ಕಾರಣವಾಗಿದ್ದು, ಸಿಲಿಕಾನ್ ಸಿಟಿಯಲ್ಲಿರುವ ಶಿವಾಜಿನಗರದಲ್ಲಿ ಏಪ್ರಿಲ್ 13ರಂದು ಈ ಘಟನೆ ನಡೆದಿದೆ. ಯುವಕನೊಬ್ಬ ಮಹಿಳೆಯೊಬ್ಬರ ಮುಂದೆ ತಮ್ಮ ಮರ್ಮಾಂಗ ತೋರಿಸಿ ಲೈಂಗಿಕ ಕಿರುಕುಳ ನೀಡಿದ ಘಟನೆ ವಿವಾದದ ಮೂಲವಾಗಿದೆ.

ಪೊಲೀಸರ ಪ್ರಕಾರ, ಮಹಿಳೆ ತನ್ನ ಮನೆಯ ಮಹಡಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಎದುರು ಮನೆಯಲ್ಲಿ ವಾಸಿಸುತ್ತಿದ್ದ ಕಾರ್ತಿಕ್ ಎಂಬ ಯುವಕ ಪ್ಯಾಂಟ್‌ ಜೀಪ್ ಬಿಚ್ಚಿ ತನ್ನ ಮರ್ಮಾಂಗವನ್ನು ತೋರಿಸಿದ್ದಾನೆ. ಅಲ್ಲದೆ, ಅಶ್ಲೀಲ ಹಾವಭಾವಗಳನ್ನು ಪ್ರದರ್ಶಿಸಿ ಆಕೆಯನ್ನು ಲೈಂಗಿಕ ಕ್ರಿಯೆಗೆ ಆಹ್ವಾನಿಸಿದ್ದಾನೆ.

ಘಟನೆಯ ತೀವ್ರತೆಗೆ ಬೆಚ್ಚಿಬಿದ್ದ ಮಹಿಳೆ ತಕ್ಷಣವೇ ಪತಿಯನ್ನು ಕರೆದು ಸಹಾಯ ಕೋರಿದ್ದಾಳೆ. ಆಗ ಕಾರ್ತಿಕ್ ಆಕ್ರೋಶಗೊಂಡು ಆಕೆಯ ಪತಿಯ ಮೇಲೆ ಹಲ್ಲೆ ನಡೆಸಿದ್ದಾನೆ. ಜಗಳವನ್ನು ಶಮನಗೊಳಿಸಲು ಬಂದ ನೆರೆಹೊರೆಯವರ ಮೇಲೂ ಹಲ್ಲೆ ನಡೆಸಿದ್ದು, ಹಾಲೊ ಬ್ಲಾಕ್‌, ಹೂವಿನ ಕುಂಡಗಳು ಮತ್ತು ಕಿಟಕಿಯ ಗಾಜುಗಳನ್ನು ಉಪಯೋಗಿಸಿ ದುಷ್ಕೃತ್ಯ ನಡೆಸಲಾಗಿದೆ.

ಘಟನೆಯಲ್ಲಿ ಏಳು ಮಂದಿ ಗಾಯಗೊಂಡಿದ್ದು, ಅವರಲ್ಲಿ ಮೂವರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಆಕ್ರೋಶದ ಹೊಟ್ಟೆಯಲ್ಲಿ ತನ್ನ ತಾಯಿಯ ಮೇಲೂ ಹಲ್ಲೆ ನಡೆಸಿರುವ ಶಂಕಿತನ ವಿರುದ್ಧ ಶಿವಾಜಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಯ ಬಳಿಕ ಕಾರ್ತಿಕ್ ಸ್ಥಳದಿಂದ ಪರಾರಿಯಾಗಿದ್ದು, ಪೊಲೀಸರ ತಂಡ ಅವನಿಗಾಗಿ ಶೋಧ ಕಾರ್ಯ ನಡೆಸುತ್ತಿದೆ.

ಪೊಲೀಸರು ನೀಡಿದ ಮಾಹಿತಿ ಪ್ರಕಾರ, ಈತನ ವಿರುದ್ಧ ಮೊದಕ್ಕೂ ಅನೇಕ ಮಹಿಳೆಯರ ಮೇಲೆ ಅಸಭ್ಯ ವರ್ತನೆಯ ಆರೋಪಗಳು ದಾಖಲಾಗಿದ್ದು, ಈಗ ನಡೆದಿರುವ ಘಟನೆಯು ಸಾರ್ವಜನಿಕರಲ್ಲಿ ಭೀತಿ ಹುಟ್ಟಿಸಿದೆ.

ಕಾರ್ತಿಕ್ ಬಂಧನಕ್ಕೆ ಮುಂದಾಗಿ ಪೊಲೀಸರು ಬಲೆ ಬೀಸಿದ್ದು, ಶೀಘ್ರದಲ್ಲೇ ಅವನನ್ನು ಕಾನೂನು ಮುಂದಕ್ಕೆ ಒಯ್ಯಲಿದ್ದಾರೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.

nazeer ahamad

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

1 day ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

1 day ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

1 day ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

1 day ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

1 day ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

1 day ago