Latest

ಅಶ್ಲೀಲ ವರ್ತನೆಗೆ ಪ್ರಶ್ನೆ ಕೇಳಿದ ಮಹಿಳೆಯ ಪತಿ ಹಾಗೂ ಏಳು ಮಂದಿ ಮೇಲೆ ಹಲ್ಲ: ಆರೋಪಿಗಾಗಿ ಪೊಲೀಸರ ಹುಡುಕಾಟ.

ಬೆಂಗಳೂರು: ನಗರದಲ್ಲೊಂದು ಅಶ್ಲೀಲ ವರ್ತನೆ ಗಂಭೀರ ಹಲ್ಲೆ ಪ್ರಕರಣಕ್ಕೆ ಕಾರಣವಾಗಿದ್ದು, ಸಿಲಿಕಾನ್ ಸಿಟಿಯಲ್ಲಿರುವ ಶಿವಾಜಿನಗರದಲ್ಲಿ ಏಪ್ರಿಲ್ 13ರಂದು ಈ ಘಟನೆ ನಡೆದಿದೆ. ಯುವಕನೊಬ್ಬ ಮಹಿಳೆಯೊಬ್ಬರ ಮುಂದೆ ತಮ್ಮ ಮರ್ಮಾಂಗ ತೋರಿಸಿ ಲೈಂಗಿಕ ಕಿರುಕುಳ ನೀಡಿದ ಘಟನೆ ವಿವಾದದ ಮೂಲವಾಗಿದೆ.

ಪೊಲೀಸರ ಪ್ರಕಾರ, ಮಹಿಳೆ ತನ್ನ ಮನೆಯ ಮಹಡಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಎದುರು ಮನೆಯಲ್ಲಿ ವಾಸಿಸುತ್ತಿದ್ದ ಕಾರ್ತಿಕ್ ಎಂಬ ಯುವಕ ಪ್ಯಾಂಟ್‌ ಜೀಪ್ ಬಿಚ್ಚಿ ತನ್ನ ಮರ್ಮಾಂಗವನ್ನು ತೋರಿಸಿದ್ದಾನೆ. ಅಲ್ಲದೆ, ಅಶ್ಲೀಲ ಹಾವಭಾವಗಳನ್ನು ಪ್ರದರ್ಶಿಸಿ ಆಕೆಯನ್ನು ಲೈಂಗಿಕ ಕ್ರಿಯೆಗೆ ಆಹ್ವಾನಿಸಿದ್ದಾನೆ.

ಘಟನೆಯ ತೀವ್ರತೆಗೆ ಬೆಚ್ಚಿಬಿದ್ದ ಮಹಿಳೆ ತಕ್ಷಣವೇ ಪತಿಯನ್ನು ಕರೆದು ಸಹಾಯ ಕೋರಿದ್ದಾಳೆ. ಆಗ ಕಾರ್ತಿಕ್ ಆಕ್ರೋಶಗೊಂಡು ಆಕೆಯ ಪತಿಯ ಮೇಲೆ ಹಲ್ಲೆ ನಡೆಸಿದ್ದಾನೆ. ಜಗಳವನ್ನು ಶಮನಗೊಳಿಸಲು ಬಂದ ನೆರೆಹೊರೆಯವರ ಮೇಲೂ ಹಲ್ಲೆ ನಡೆಸಿದ್ದು, ಹಾಲೊ ಬ್ಲಾಕ್‌, ಹೂವಿನ ಕುಂಡಗಳು ಮತ್ತು ಕಿಟಕಿಯ ಗಾಜುಗಳನ್ನು ಉಪಯೋಗಿಸಿ ದುಷ್ಕೃತ್ಯ ನಡೆಸಲಾಗಿದೆ.

ಘಟನೆಯಲ್ಲಿ ಏಳು ಮಂದಿ ಗಾಯಗೊಂಡಿದ್ದು, ಅವರಲ್ಲಿ ಮೂವರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಆಕ್ರೋಶದ ಹೊಟ್ಟೆಯಲ್ಲಿ ತನ್ನ ತಾಯಿಯ ಮೇಲೂ ಹಲ್ಲೆ ನಡೆಸಿರುವ ಶಂಕಿತನ ವಿರುದ್ಧ ಶಿವಾಜಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಯ ಬಳಿಕ ಕಾರ್ತಿಕ್ ಸ್ಥಳದಿಂದ ಪರಾರಿಯಾಗಿದ್ದು, ಪೊಲೀಸರ ತಂಡ ಅವನಿಗಾಗಿ ಶೋಧ ಕಾರ್ಯ ನಡೆಸುತ್ತಿದೆ.

ಪೊಲೀಸರು ನೀಡಿದ ಮಾಹಿತಿ ಪ್ರಕಾರ, ಈತನ ವಿರುದ್ಧ ಮೊದಕ್ಕೂ ಅನೇಕ ಮಹಿಳೆಯರ ಮೇಲೆ ಅಸಭ್ಯ ವರ್ತನೆಯ ಆರೋಪಗಳು ದಾಖಲಾಗಿದ್ದು, ಈಗ ನಡೆದಿರುವ ಘಟನೆಯು ಸಾರ್ವಜನಿಕರಲ್ಲಿ ಭೀತಿ ಹುಟ್ಟಿಸಿದೆ.

ಕಾರ್ತಿಕ್ ಬಂಧನಕ್ಕೆ ಮುಂದಾಗಿ ಪೊಲೀಸರು ಬಲೆ ಬೀಸಿದ್ದು, ಶೀಘ್ರದಲ್ಲೇ ಅವನನ್ನು ಕಾನೂನು ಮುಂದಕ್ಕೆ ಒಯ್ಯಲಿದ್ದಾರೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.

nazeer ahamad

Recent Posts

ಟಿಪ್ಪರ್ ಡಿಕ್ಕಿ, ನಂತರ ಗುಂಡಿನ ದಾಳಿ: ವಿಜಯಪುರದಲ್ಲಿ ಸಿನಿಮಾ ಶೈಲಿಯ ಹತ್ಯೆ ಪ್ರಕರಣ

ವಿಜಯಪುರ ಜಿಲ್ಲೆಯಲ್ಲಿ ರಿಯಲ್ ಎಸ್ಟೇಟ್ ಏಜೆಂಟ್ ಹಾಗೂ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ರಾಜು ಬಾಪು ಖರಿ (48) ಅವರನ್ನು…

2 hours ago

ವಿದೇಶಿ ಮಹಿಳೆ ಮೇಲೆ ದೌರ್ಜನ್ಯ ಆರೋಪ: ಕೊಡಗಿನಲ್ಲಿ ಹೋಂಸ್ಟೇ ಪರವಾನಗಿ ರದ್ದು

ಅಮೆರಿಕದ ಪ್ರಜೆಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾಡಳಿತ ತುರ್ತು ಕ್ರಮ ಕೈಗೊಂಡಿದ್ದು, ಕುಟ್ಟಾ ಗ್ರಾಮದಲ್ಲಿರುವ…

2 hours ago

WFH ಕೇಳಿದ ಮಹಿಳೆಗೆ HR ಶಾಕ್: ‘ಸಿಇಒ ಮನೋಭಾವ ಬೇಕು’ ಹೇಳಿ ಕರೆ ಕಟ್!

ಉದ್ಯೋಗಕ್ಕೆ ಅರ್ಜಿ ಸಲ್ಲಿಸುವಾಗ ಕೆಲಸದ ಸಮಯ, ದಿನಗಳು ಮತ್ತು ಸೌಲಭ್ಯಗಳ ಬಗ್ಗೆ ಪ್ರಶ್ನಿಸುವುದು ಸಾಮಾನ್ಯ. ಆದರೆ ಇಂತಹ ಸರಳ ಪ್ರಶ್ನೆಯೇ…

2 hours ago

ನಕಲಿ ದಾಖಲೆಗಳಿಂದ 9 ಎಕರೆ ಸರ್ಕಾರಿ ಜಮೀನು ಹಗರಣ: ನಿವೃತ್ತ ತಹಶೀಲ್ದಾರ್ ಸೇರಿ ನಾಲ್ವರ ವಿರುದ್ಧ ಪ್ರಕರಣ

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ಭಾರೀ ಭೂ ಹಗರಣೊಂದು ಬೆಳಕಿಗೆ ಬಂದಿದೆ. ನಕಲಿ ದಾಖಲೆಗಳನ್ನು ಸೃಷ್ಟಿಸಿ ಸುಮಾರು 9 ಎಕರೆ…

2 hours ago

₹300 ಲಂಚಕ್ಕೆ ‘ಪರೀಕ್ಷೆ ಮಾರಾಟ’: ಪರೀಕ್ಷಾ ಕೇಂದ್ರದಲ್ಲಿ ಮೊಬೈಲ್ ಬಳಕೆ, ಶಿಕ್ಷಣ ವ್ಯವಸ್ಥೆಗೆ ಕಳಂಕ

ಮಹಾರಾಷ್ಟ್ರದ ಚಂದ್ರಾಪುರದಲ್ಲಿರುವ ಸರ್ವೋದಯ ಕಾಲೇಜಿನಲ್ಲಿ ನಡೆದ ಪರೀಕ್ಷಾ ಅಕ್ರಮವು ಶಿಕ್ಷಣ ವ್ಯವಸ್ಥೆಯ ನೈತಿಕತೆಯ ಮೇಲೆಯೇ ಪ್ರಶ್ನೆ ಎಬ್ಬಿಸಿದೆ. ಕವಿಕುಲಗುರು ಕಾಳಿದಾಸ…

2 hours ago

ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಮಗನ ಹತ್ಯೆ: 60 ವರ್ಷದ ತಾಯಿ ಬಂಧನ

ಮೈಸೂರು ನಗರದ ನಜರಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಅಪರಿಚಿತ ವ್ಯಕ್ತಿಯ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ…

18 hours ago