ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನಲ್ಲಿ ಮಹಿಳೆಯರ ಮೇಲೆ ದುಷ್ಕರ್ಮಿಗಳ ಗುಂಪುವೊಂದು ಕ್ರೂರ ಹಲ್ಲೆ ನಡೆಸಿದ ಘಟನೆ ವರದಿಯಾಗಿದೆ. ಜ್ಯೋತಿ ಮತ್ತು ಪೂರ್ಣಿಮಾ ಎಂಬ ಇಬ್ಬರು ಮಹಿಳೆಯರು ಗ್ಯಾಂಗ್ ಹಲ್ಲೆಗೆ ಒಳಗಾಗಿ ತೀವ್ರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆಯೆಂದು ತಿಳಿದುಬಂದಿದೆ.
ದರ್ಶನ್ ಮತ್ತು ಶಿವು ಎಂಬ ಯುವಕರು ತಮ್ಮ ಸಾಥಿಯವರೊಂದಿಗೆ ಗುಂಪು ಕಟ್ಟಿಕೊಂಡು ಹಲ್ಲೆ ನಡೆಸಿದ್ದಾರೆ. ಕೇವಲ ಹಲ್ಲೆಯಷ್ಟೆ ಅಲ್ಲದೆ, ಮಹಿಳೆಯರ ನಿವಾಸದ ಪೀಠೋಪಕರಣಗಳನ್ನು ನಾಶಮಾಡಿ ಪರಾರಿಯಾಗಿದ್ದಾರೆ.
ದರ್ಶನ್ ಎಂಬಾತ ಈ ಹಿಂದೆ, ಸುಮಾರು ಎರಡು ವರ್ಷಗಳ ಹಿಂದೆ ಜ್ಯೋತಿಗೆ ಸಾರ್ವಜನಿಕವಾಗಿ ಕಿರುಕುಳ ನೀಡುತ್ತಿದ್ದ. ಈ ವಿಷಯಕ್ಕೆ ಸಂಬಂಧಿಸಿದಂತೆ ಗ್ರಾಮಸ್ಥರ ಮಧ್ಯಸ್ಥಿಕೆಯಿಂದ ಸ್ಥಳೀಯ ಮಟ್ಟದಲ್ಲಿ ಪಂಚಾಯಿತಿ ಕೂಡಾ ನಡೆದಿತ್ತು. ಆದರೆ ಅದರ ಬಳಿಕವೂ ದರ್ಶನ್ ತನ್ನ ವರ್ತನೆ ಬದಲಾಯಿಸದೇ, ಮತ್ತೆ ಜ್ಯೋತಿಯ ಪಿಂಚಳಿಯಲ್ಲಿ ತೊಡಗಿದ್ದ ಎನ್ನಲಾಗಿದೆ.
ಇತ್ತೀಚೆಗಿನ ಘಟನೆಯ ದಿನದಂದು, ದರ್ಶನ್ ಮತ್ತು ಶಿವು ಜ್ಯೋತಿಗೆ ಮನೆಯ ಬಳಿ ಕಿರುಕುಳ ನೀಡಿದಾಗ, ಜ್ಯೋತಿ ಪ್ರತಿಭಟಿಸಿ ಬೈದಿದ್ದಳು. ಇದರಿಂದ ಕೋಪಗೊಂಡ ಗ್ಯಾಂಗ್, ಮಧ್ಯಾಹ್ನದ ವೇಳೆಗೆ ಮನೆಗೆ ನುಗ್ಗಿ ಜ್ಯೋತಿ ಮತ್ತು ಆಕೆಯ ಸಹೋದರಿಯಾದ ಪೂರ್ಣಿಮಾ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ.
ಈ ಕುರಿತು ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳ ಪತ್ತೆಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಗಾಯಗೊಂಡ ಮಹಿಳೆಯರ ಸ್ಥಿತಿ ಗಂಭೀರವಾಗಿರುವ ಹಿನ್ನೆಲೆಯಲ್ಲಿ, ಪ್ರಕರಣಕ್ಕೆ ಹೆಚ್ಚಿನ ಮಹತ್ವ ನೀಡಿ ತನಿಖೆ ಮುಂದುವರಿಸಲಾಗಿದೆ.
ಶಿಕ್ಷಣಕ್ಕೆ ಬೆಂಬಲ ನೀಡಿ ಪತ್ನಿಗೆ ಸರ್ಕಾರಿ ಉದ್ಯೋಗ ಸಿಗುವಂತೆ ಮಾಡಿದ ಗಂಡನೊಬ್ಬ, ನಂತರ ಪತ್ನಿಯ ನಿರ್ಲಕ್ಷ್ಯ ಮತ್ತು ಕಿರುಕುಳದಿಂದ ಮನನೊಂದು…
ಚಿಕ್ಕಮಗಳೂರು ಜಿಲ್ಲೆಯ ಕಳಸದಿಂದ ಬಾಳೆಹೊನ್ನೂರುವರೆಗೆ ಭದ್ರಾ ನದಿ ಪ್ರದೇಶದಲ್ಲಿ ಇತ್ತೀಚೆಗೆ ಕಡಿಮೆ ಎತ್ತರದಲ್ಲಿ ಹಾರಾಡುತ್ತಿದ್ದ ನಿಗೂಢ ವಿಮಾನ ಸಾರ್ವಜನಿಕರಲ್ಲಿ ಭೀತಿ…
ಧಾರವಾಡ ಜಿಲ್ಲೆಯ ರಾಮಾಪುರ ಅರಣ್ಯ ವ್ಯಾಪ್ತಿಯ ನಿರ್ಜನ ಪ್ರದೇಶದಲ್ಲಿ ಹೃದಯವಿದ್ರಾವಕ ಘಟನೆ ಬೆಳಕಿಗೆ ಬಂದಿದೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಕ್ಷೇತ್ರದ…
ಕರ್ನಾಟಕ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಹತ್ವದ ಮಾಹಿತಿ ಬಹಿರಂಗವಾಗಿದೆ. ವಿಧಾನಸಭೆಯಲ್ಲಿ ಸಂಡೂರು ಕ್ಷೇತ್ರದ ಶಾಸಕ…
ಕರ್ನಾಟಕ ಸರ್ಕಾರವು ನಾಗರಿಕ ಸೇವೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರಿಗೆ ಮಹತ್ವದ ಹೊಸ ನಿಯಮ ಜಾರಿಗೆ ತಂದಿದೆ. ಇನ್ಮುಂದೆ ಸರ್ಕಾರಿ ನೌಕರರು ಮುಂಬಡ್ತಿ…
ಬಾಲಿವುಡ್ ನಟ ರಣವೀರ್ ಸಿಂಗ್ ಅಭಿನಯದ ‘ಧುರಂಧರ್ 2’ ಚಿತ್ರದ ಸದ್ದು ಭಾರತದ ಬಾಕ್ಸ್ ಆಫೀಸ್ನಲ್ಲಿ ಕೇಳಿಬರುತ್ತಿರುವಂತೆಯೇ, ಅದರ ಪ್ರಭಾವ…