Categories: Latest

ಗೌರಿಬಿದನೂರು ತಾಲ್ಲೂಕಿನ ತರಿದಾಳು ಗ್ರಾಮದಲ್ಲಿದ್ದ ಬಾ‌ರ್ ಮುಚ್ಚಿಸಿದ ಮಹಿಳೆಯರು

ಚಿಕ್ಕಬಳ್ಳಾಪುರ ಜಿಲ್ಲೆ, ಗೌರಿಬಿದನೂರು ತಾಲ್ಲೂಕು: ತಾಲ್ಲೂಕಿನ ತರಿದಾಳು ಗ್ರಾಮದಲ್ಲಿ ಎಂಎಸ್‌ಐಎಲ್ ಬಾರ್ ವಿರುದ್ಧ ಗ್ರಾಮಸ್ಥರ ಆಕ್ರೋಶ ಭುಗಿಲೆದ್ದಿದ್ದು, ವಿಶೇಷವಾಗಿ ಮಹಿಳೆಯರು ಮುಂದಾಗಿ ಗುರುವಾರ ಬಾರ್ ಮುಚ್ಚುವಂತೆ ಬಲವಾದ ಹೋರಾಟ ನಡೆಸಿದ್ದಾರೆ.

ಪ್ರಮುಖವಾಗಿ, ಈ ಬಾರ್ ಸರ್ಕಾರಿ ಶಾಲೆಯ ಪಕ್ಕದಲ್ಲಿದ್ದು, ಪ್ರತಿದಿನ ಮಕ್ಕಳೂ, ವಿದ್ಯಾರ್ಥಿನಿಯರೂ, ಮಹಿಳೆಯರೂ ಇದೇ ರಸ್ತೆಯಲ್ಲಿ ಓಡಾಡುತ್ತಿರುತ್ತಾರೆ. ಆದರೆ ಬಾರ್ ಬಳಿ ಕುಡಿದುನೋಡುವವರ ಅಸಭ್ಯ ವರ್ತನೆ ಗ್ರಾಮಸ್ಥರಿಗೆ ತೀವ್ರ ತೊಂದರೆಯಾಗುತ್ತಿದ್ದು, ಮಕ್ಕಳಿಗೂ ಭಯವಿಟ್ಟಿದೆ. ಶಾಲೆಯವರಿಂದ ಮನೆಗೆ ತಲುಪಲು ವಿದ್ಯಾರ್ಥಿನಿಯರು ಕಳವಳಗೊಂಡು ತಮ್ಮ ಪಾಲಕರಿಗೆ ಕರೆಮಾಡಿ ಕರೆಸಿಕೊಳ್ಳುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಹಿಳೆಯರ ಪ್ರಕಾರ, ಕಳೆದ ಮೂರು ವರ್ಷಗಳಲ್ಲಿ ಕುಡಿತದ ಹಿನ್ನಲೆಯಲ್ಲಿ ಸಣ್ಣ ವಯಸ್ಸಿನ 20ಕ್ಕೂ ಹೆಚ್ಚು ಯುವಕರು ಸಾವನ್ನಪ್ಪಿದ್ದಾರೆ. ಈ ಕುರಿತು ಹಲವಾರು ಬಾರಿ ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆಯಲು ಪ್ರಯತ್ನಿಸಿದರೂ ಸೂಕ್ತ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಆರೋಪಿಸಲಾಗಿದೆ.

ಇದರ ಬೆನ್ನಲ್ಲೇ, ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಬಹುಮಾನ್ಯವಾದ ತೀರ್ಮಾನವೊಂದನ್ನು ತೆಗೆದುಕೊಂಡ ಮಹಿಳೆಯರು – “ಗ್ರಾಮದಲ್ಲಿ ಶಾಂತಿ ಮತ್ತು ಭದ್ರತೆ ಕಾಪಾಡಬೇಕು ಎಂದರೆ ಬಾರ್ ಮುಚ್ಚಲೇಬೇಕು” ಎಂಬ ಘೋಷಣೆ ಜೊತೆಗೆ, ಬಾರ್‌ಗೆ ಬೀಗ ಹಾಕಿಸಿ ಪ್ರತಿಭಟನೆಯನ್ನು ತೀವ್ರಗೊಳಿಸಿದರು.

ತರಿದಾಳು ಗ್ರಾಮದ ಈ ಹೋರಾಟ ಇಡೀ ತಾಲ್ಲೂಕಿನಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ಅಧಿಕಾರಿಗಳು ಇನ್ನು ಮುಂದೆ ಈ ಸಂಬಂಧ ಎಂತಹ ಕ್ರಮ ಕೈಗೊಳ್ಳುತ್ತಾರೆ ಎಂಬುದರತ್ತ ಎಲ್ಲರ ಗಮನ ಹರಿದಿದೆ. ವರದಿ: ಅವಿನಾಶ್ ಎ.ಆರ್, 

nazeer ahamad

Recent Posts

ನಾಲ್ಕನೇ ಬಾರಿಯೂ ಹೆಣ್ಣು ಮಗು: ಬಾಣಂತಿ ಮಮತಾಳ ದಾರುಣ ಅಂತ್ಯ, ಅತ್ತೆ ಮನೆಯ ಕಿರುಕುಳ ಆರೋಪ!

ನಲಗೊಂಡ: ಹೆಣ್ಣು ಮಗು ಹುಟ್ಟಿದ ಕಾರಣಕ್ಕೆ ಮಹಿಳೆಯೊಬ್ಬರು ಕೌಟುಂಬಿಕ ಒತ್ತಡ ಹಾಗೂ ಕಿರುಕುಳಕ್ಕೆ ಒಳಗಾಗಿದ್ದರೆಂಬ ಆರೋಪ ಕೇಳಿಬಂದಿದ್ದು, ಕೊನೆಗೆ ಬಾಣಂತಿಯೊಬ್ಬರು…

3 hours ago

ಆಸ್ತಿ ಆಸೆಗೆ ತಂದೆಯನ್ನೇ ಮುಗಿಸಲು ಸಂಚು; ನಿದ್ರೆ ಮಾತ್ರೆ ಕೊಟ್ಟು ಮಗನಿಂದ ಕತ್ತು ಹಿಸುಕಿ ಕೊಲೆ!

ಕೋಲಾರ: ಹಣ-ಆಸ್ತಿಗಾಗಿ ಹೆತ್ತ ತಂದೆಯನ್ನೇ ಕೊಲೆ ಮಾಡಿರುವ ಆರೋಪದ ಪ್ರಕರಣ ಕೋಲಾರ ಜಿಲ್ಲೆಯ ವೇಮಗಲ್ ಹೋಬಳಿಯ ಚನ್ನಸಂದ್ರ ಗ್ರಾಮದಲ್ಲಿ ಬೆಳಕಿಗೆ…

3 hours ago

ಜೈಲಿನಲ್ಲೂ ಪ್ರಜ್ವಲ್ ರೇವಣ್ಣಗೆ ಮೊಬೈಲ್‌ ಸೌಲಭ್ಯ? ಫೋನ್‌ನಲ್ಲಿ ಅಶ್ಲೀಲ ವಿಡಿಯೋ ಪತ್ತೆ, ಅಧಿಕಾರಿಗಳ ವಿರುದ್ಧ ಗಂಭೀರ ಪ್ರಶ್ನೆ!

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ, ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದರೂ ಮೊಬೈಲ್ ಫೋನ್…

3 hours ago

ವಸತಿ ನಿಲಯದಲ್ಲಿ 8ನೇ ತರಗತಿ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು: ಪೋಷಕರ ಆಕ್ರೋಶ, ಉನ್ನತ ಮಟ್ಟದ ತನಿಖೆಗೆ ಆಗ್ರಹ!

ಪಾವಗಡ: ತಾಲೂಕಿನ ರಂಗಸಮುದ್ರದಲ್ಲಿರುವ ಕಸ್ತೂರಬಾ ಗಾಂಧಿ ವಸತಿ ನಿಲಯದಲ್ಲಿ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಪ್ರಿಯಾಂಕ ಎಂಬ ಬಾಲಕಿ ಅನುಮಾನಾಸ್ಪದವಾಗಿ…

4 hours ago

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

1 day ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

1 day ago