Categories: LatestPolitics

‘ಕೋಟಿ ರೂ. ಆಮಿಷಕ್ಕೂ ಜಗ್ಗಲ್ಲ, ಪ್ರಾಣ ಹೋದರೂ ಹೋರಾಟ ನಿಲ್ಲಲ್ಲ’: ಶರಾವತಿ ಯೋಜನೆ ವಿರುದ್ಧ ಮಾರುತಿ ಗುರೂಜಿ ಗರಂ

ಹೊನ್ನಾವರ: ಶರಾವತಿ ಪಂಪ್ ಸ್ಟೋರೇಜ್ ಯೋಜನೆ ವಿರೋಧಿಸಿ ನಡೆಯುತ್ತಿರುವ ಹೋರಾಟದಿಂದ ಹಿಂದೆ ಸರಿಯುವಂತೆ ತಮ್ಮ ಮೇಲೆ ಬೆದರಿಕೆಗಳು, ಒತ್ತಡಗಳು ಹಾಗೂ ಹಣದ ಆಮಿಷಗಳು ಬಂದಿವೆ ಎಂದು ಬಂಗಾರಮಕ್ಕಿ ಶ್ರೀಕ್ಷೇತ್ರದ ಮಾರುತಿ ಗುರೂಜಿ ಆರೋಪಿಸಿದ್ದಾರೆ. ಕೋಟಿ ರೂಪಾಯಿ ನೀಡುವ ಪ್ರಸ್ತಾಪವೂ ಬಂದಿದ್ದರೂ ಅದನ್ನು ತಿರಸ್ಕರಿಸಿದ್ದೇನೆ ಎಂದು ಅವರು ತಿಳಿಸಿದ್ದಾರೆ.

ಶರಾವತಿ ಪಂಪ್ ಸ್ಟೋರೇಜ್ ಯೋಜನೆಗೆ ವಿರೋಧವಾಗಿ ವಿವಿಧ ಭಾಗಗಳಲ್ಲಿ ಪ್ರತಿಭಟನೆಗಳು ಮುಂದುವರಿದಿದ್ದು, ಯೋಜನೆಯಿಂದ ಪರಿಸರ ಹಾಗೂ ಸ್ಥಳೀಯರ ಬದುಕಿನ ಮೇಲೆ ಗಂಭೀರ ಪರಿಣಾಮ ಉಂಟಾಗಲಿದೆ ಎಂದು ಹೋರಾಟಗಾರರು ಮತ್ತು ವಿವಿಧ ಸಂಘಟನೆಗಳು ಆಕ್ಷೇಪ ವ್ಯಕ್ತಪಡಿಸುತ್ತಿವೆ. ಈ ಹೋರಾಟದಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿರುವ ಮಾರುತಿ ಗುರೂಜಿ, ಯೋಜನೆಗೆ ತಮ್ಮ ತೀವ್ರ ವಿರೋಧವನ್ನು ಮತ್ತೊಮ್ಮೆ ವ್ಯಕ್ತಪಡಿಸಿದರು.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆರಂಭದಲ್ಲಿ ಹೋರಾಟ ಕೈಬಿಡುವಂತೆ ಬೆದರಿಕೆಗಳು ಬಂದಿದ್ದವು. ನಂತರ ತಮ್ಮ ವಾಹನಕ್ಕೆ ಅಪಘಾತವಾಗುವಂತೆ ಮಾಡಲಾಗಿದೆ ಎಂದು ಆರೋಪಿಸಿದ ಅವರು, ಬಳಿಕ ಬೆದರಿಕೆ ಕರೆಗಳು ಬಂದವು ಹಾಗೂ ತಮ್ಮ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಲು ಯತ್ನಿಸಲಾಗಿದೆ ಎಂದು ಹೇಳಿದರು.

ಕೆಲವು ಅಧಿಕಾರಿಗಳು ತಮ್ಮನ್ನು ಭೇಟಿ ಮಾಡಿ ಯೋಜನೆಗೆ ಬೆಂಬಲ ನೀಡುವಂತೆ ಮನವಿ ಮಾಡಿದ್ದು, ಇದೇ ವೇಳೆ ಹಣದ ಆಮಿಷವನ್ನೂ ಒಡ್ಡಲಾಗಿದೆ ಎಂದು ಗುರೂಜಿ ಆರೋಪಿಸಿದರು. ಆದರೆ ಯಾವುದೇ ಕಾರಣಕ್ಕೂ ತಮ್ಮ ನಿಲುವು ಬದಲಾಗುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

“ಇಂದು ಕೋಟಿ ರೂಪಾಯಿ ಕೊಟ್ಟರೂ, ನಾಳೆ ಅದಕ್ಕಿಂತ ಹೆಚ್ಚಿನ ಹಣ ನೀಡಿದರೂ ನಾವು ಒಪ್ಪುವುದಿಲ್ಲ. ಹಣಕ್ಕಾಗಿ ನಮ್ಮ ಹೋರಾಟವನ್ನು ಮಾರಿಕೊಳ್ಳುವುದಿಲ್ಲ. ಪ್ರಾಣ ಹೋದರೂ ಶರಾವತಿಯನ್ನು ಉಳಿಸುವ ಹೋರಾಟದಿಂದ ಹಿಂದೆ ಸರಿಯುವುದಿಲ್ಲ,” ಎಂದು ಮಾರುತಿ ಗುರೂಜಿ ಹೇಳಿದರು.

ಯೋಜನೆ ಪರವಾಗಿರುವ ಕೆಲವರು ಸಮಾಜದಲ್ಲಿ ಭಿನ್ನಾಭಿಪ್ರಾಯ ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ ಅವರು, ಒಂದೆಡೆ ಬೆದರಿಕೆ ಹಾಗೂ ಮತ್ತೊಂದೆಡೆ ಹಣದ ಆಮಿಷದ ಮೂಲಕ ಹೋರಾಟವನ್ನು ದುರ್ಬಲಗೊಳಿಸುವ ಪ್ರಯತ್ನ ನಡೆಯುತ್ತಿದೆ ಎಂದು ಹೇಳಿದರು.

ತಮ್ಮ ಕಾರು ಅಪಘಾತದ ಘಟನೆಯನ್ನು ಉಲ್ಲೇಖಿಸಿದ ಅವರು, “ಭಯ ಹುಟ್ಟಿಸುವ ಹಲವು ಪ್ರಯತ್ನಗಳು ನಡೆದಿವೆ. ಇಂತಹ ಪರಿಸ್ಥಿತಿಯಲ್ಲಿ ನ್ಯಾಯಕ್ಕಾಗಿ ಯಾರನ್ನು ನಂಬಬೇಕು ಎಂಬ ಪ್ರಶ್ನೆಯೂ ಎದುರಾಗಿದೆ. ಆದರೂ ನಮ್ಮ ಹೋರಾಟ ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ,” ಎಂದು ತಮ್ಮ ದೃಢ ನಿಲುವು ಪುನರುಚ್ಚರಿಸಿದರು.

ಭ್ರಷ್ಟರ ಬೇಟೆ

Recent Posts

ಲೀಲಾ ದೂರವಾದ ಕೋಪ: ಮನೆಗೆ ನುಗ್ಗಿ ತಾಯಿಯ ಮೇಲೆ ಸೈಕಲ್ ಎತ್ತಿ ಹಾಕಿದ ಮಂಜ!

ಬೆಂಗಳೂರು: ಹುಳಿಮಾವು ಸಮೀಪದ ಬಸವನಪುರದಲ್ಲಿ ಲೀಲಾ-ಮಂಜ-ಸಂತು ನಡುವಿನ ತ್ರಿಕೋನ ಪ್ರೇಮಕಥೆ ಮತ್ತೆ ಸದ್ದು ಮಾಡಿದೆ. ಪತ್ನಿ ಲೀಲಾ ದೂರವಾಗಿದ್ದಾಳೆ ಎಂಬ…

20 hours ago

ಮದುವೆಯ ಆಸೆ ತೋರಿಸಿ ಯುವತಿಯೊಂದಿಗೆ ದೈಹಿಕ ಸಂಪರ್ಕ, ₹10 ಸಾವಿರ ಕಳುಹಿಸಿ ಕೈ ತೊಳೆದುಕೊಳ್ಳಲು ಮುಂದಾದ SI ವಿರುದ್ಧ ಕೇಸ್!

ಮೀರತ್: ರಕ್ಷಣೆ ನೀಡಬೇಕಾದ ಪೊಲೀಸನೇ ಯುವತಿಯೊಬ್ಬಳಿಗೆ ವಂಚನೆ ಎಸಗಿದ ಆರೋಪ ಉತ್ತರ ಪ್ರದೇಶದ ಮೀರತ್‌ನಲ್ಲಿ ಕೇಳಿಬಂದಿದೆ. ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ…

20 hours ago

ಪ್ರೀತಿಯ ಹೆಸರಲ್ಲಿ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ: ಯುವತಿ ಆತ್ಮಹತ್ಯೆ; ಪ್ರಿಯಕರನ ವಿರುದ್ಧ ಕೇಸ್

ಬೆಂಗಳೂರು: ಪ್ರೀತಿಯ ಹೆಸರಿನಲ್ಲಿ ಯುವತಿಗೆ ನಿರಂತರ ಕಿರುಕುಳ ನೀಡಿ, ಖಾಸಗಿ ಫೋಟೋ-ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ ಆರೋಪ…

20 hours ago

ಪತಿ-ಪ್ರೇಮಿ ಇಬ್ಬರ ಜತೆಗೂ ಸಂಸಾರಕ್ಕೆ ಅನುಮತಿ ಕೊಡಿ! ಪೊಲೀಸರ ಮುಂದೆ ಮಹಿಳೆಯ ವಿಚಿತ್ರ ಬೇಡಿಕೆ

ಸೀತಾಪುರ: ಪೊಲೀಸ್ ಠಾಣೆಗಳಿಗೆ ಪ್ರತಿದಿನ ಹಲವು ರೀತಿಯ ದೂರುಗಳು ಬರುತ್ತವೆ. ಆದರೆ ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯ ಮಹಮೂದಾಬಾದ್ ಕೊತ್ವಾಲಿ…

20 hours ago

ರೈಲಿನ ಸೂಟ್‌ಕೇಸ್‌ನಲ್ಲಿ ಮಾನವ ದೇಹದ ತುಂಡುಗಳು; ತನಿಖೆ ವೇಳೆ ಬಯಲಾಯ್ತು ಬೆಚ್ಚಿಬೀಳಿಸುವ ರಹಸ್ಯ!

ತಮಿಳುನಾಡಿನ ಚೆನ್ನೈನಲ್ಲಿ ಮಹಿಳೆಯೊಬ್ಬರನ್ನು ಭೀಕರವಾಗಿ ಹತ್ಯೆಗೈದು, ಆಕೆಯ ದೇಹದ ಭಾಗಗಳನ್ನು ಬಳಸಿ ಬಿರಿಯಾನಿ ತಯಾರಿಸಿರುವ ಆರೋಪ ಕೇಳಿಬಂದಿದ್ದು, ಇಡೀ ಪ್ರಕರಣವೇ…

20 hours ago

ಚನ್ನರಾಯಪಟ್ಟಣದಲ್ಲಿ ಯುವತಿ ಆತ್ಮಹತ್ಯೆ; ಪ್ರೇಮ ವೈಫಲ್ಯ ಎಂದು ಕುಟುಂಬಸ್ಥರ ಅನುಮಾನ

ಚನ್ನರಾಯಪಟ್ಟಣ: ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಅಂಬಿಕ ನಗರದಲ್ಲಿ ಪದವಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಕುಟುಂಬಸ್ಥರು…

20 hours ago