ಯಾದಗಿರಿ ಜಿಲ್ಲೆ ಗುರುಮಿಟ್ಕಲ್ ತಾಲೂಕು ಸೈದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಚಿಂದಿ ಆಯುವ ಯುವತಿಯರಿಬ್ಬರ ಶವ ನೀಲಹಳ್ಳಿ ಕೆರೆಯಲ್ಲಿ ದಿನಾಂಕ 11.02.2025 ರಂದು ದೊರೆತಿದ್ದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿರುತ್ತಾರೆ.
ಮೃತ ಯುವತಿಯರು ಬುಡ್ಗಜಂಗಮ ಸಮುದಾಯದ ಸಾಯಮ್ಮ(15) ಮತ್ತು ಶ್ಯಾಮಮ್ಮ (19) ಎಂದು ಗುರುತಿಸಲಾಗಿದೆ.
ಕುಟುಂಬಸ್ಥರಿಂದ ಅತ್ಯಾಚಾರ ಮತ್ತು ಕೊಲೆಯ ಆರೋಪ.
ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕುಟುಂಬಸ್ಥರು ಅತ್ಯಾಚಾರ ಮತ್ತು ಕೊಲೆ ಎಂದು ಆರೋಪಿಸಿದ್ದು ಈ ಆರೋಪಕ್ಕೆ ಪುಷ್ಟಿ ಕೊಡುವಂತೆ ಯುವತಿಯರ ಬಳಿ ಸಿಕ್ಕ ದೂರವಾಣಿ ಸಂಖ್ಯೆಗಳು, ಹಾಗೂ ಯಾರೋ ಅವರನ್ನು ಬೈಕ್ ನಲ್ಲಿ ಕರೆದುಕೊಂಡು ಹೋದರು ಎಂಬ ಹೇಳಿಕೆಗಳನ್ನು ಸ್ಥಳೀಯರು ನೀಡಿರುತ್ತಾರೆ.
ದಲಿತ ಪರ ಸಂಘಗಳಿಂದ ಪ್ರತಿಭಟನೆ.
ಈ ವಿಚಾರದ ಕುರಿತು ಕೆಲ ದಲಿತ ಪರ ಸಂಘಗಳು ತನಿಖೆ ನಡೆಸಿ ಆದಷ್ಟು ಬೇಗ ಅಪರಾಧಿಗಳನ್ನು ಬಂಧಿಸಬೇಕೆಂದು ಒತ್ತಾಯಿಸಿರುತ್ತಾರೆ. ಅಷ್ಟೇ ಅಲ್ಲದೆ ದಿನಾಂಕ 25.02.2025 ರಂದು ಬೆಂಗಳೂರು ಹಾಗೂ ಕಲಬುರ್ಗಿಯಲ್ಲೂ ಸಹ ದಲಿತಪರ ಸಂಘಗಳು ಪ್ರತಿಭಟನೆ ನಡೆಸಿರುತ್ತಾರೆ.
ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ವಡ್ಡಗೆರೆ ನಾಗರಾಜಯ್ಯ ಹಾಗೂ ಹಲವರು ಸೇರಿ ಪ್ರತಿಭಟನೆ ನಡೆಸಿದ್ದು ಚಿಂದಿ ಆಯುವ ಅಲೆಮಾರಿ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ವ್ಯಾಸಗಿ ಕೊಲೆ ಮಾಡಿರುವವರನ್ನು ಬಂಧಿಸಿ ಕಾನೂನು ರೀತಿ ಕ್ರಮ ಜರುಗಿಸಬೇಕೆಂದು ಒತಾಯಿಸಿರುತ್ತಾರೆ.
ಪೊಲೀಸರ ಹೇಳಿಕೆ.
ಕೆರೆಯಲ್ಲಿ ಸಿಕ್ಕಿರುವ ಯುವತಿಯರ ಶವದ ಪ್ರಕರಣದ ಕುರಿತು ಮರಣೋತ್ತರ ಪರೀಕ್ಷೆಯ ವರದಿ ಬಂದಿದ್ದು ತನಿಖೆ ನಡೆಸುತ್ತಿದ್ದೇವೆ ಈಗಲೇ ಹೆಚ್ಚಿನ ಮಾಹಿತಿಯನ್ನು ಒದಗಿಸಲು ಸಾಧ್ಯವಿಲ್ಲ ಎಫ್ ಎಸ್ ಎಲ್ ವರದಿಗಾಗಿ ನಿರೀಕ್ಷಿಸುತ್ತಿದ್ದೇವೆ ಅದು ಬಂದ ನಂತರ ಖಚಿತ ಮಾಹಿತಿಯನ್ನು ನೀಡಲು ಸಾಧ್ಯವಾಗುತ್ತದೆ ಎಂದು ಹೇಳಿರುತ್ತಾರೆ.
ಸ್ವಿಮ್ಮಿಂಗ್ ಪೂಲ್ನಲ್ಲಿ ಮಹಿಳೆ ತನ್ನ ಬಾಯ್ಫ್ರೆಂಡ್ ಜೊತೆಗೆ ಸಮಯ ಕಳೆಯುತ್ತಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ವೇಳೆ…
ಬಳ್ಳಾರಿಯ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಕಚೇರಿಯಲ್ಲಿ ನಡೆದಿದೆ ಎನ್ನಲಾದ 16 ಕೋಟಿಗೂ ಅಧಿಕ ವಂಚನೆ ಪ್ರಕರಣದಲ್ಲಿ ಪ್ರಮುಖ…
ನಾಸಿಕ್ನ ಟಿಸಿಎಸ್ ಸಂಬಂಧಿತ ಮತಾಂತರ ಮತ್ತು ಕಿರುಕುಳ ಪ್ರಕರಣದ ತನಿಖೆಯಲ್ಲಿ ಹೊಸದಾಗಿ ಸ್ಫೋಟಕ ಮಾಹಿತಿಗಳು ಬಹಿರಂಗವಾಗುತ್ತಿವೆ. ಬಿಪಿಒ ಘಟಕದಲ್ಲಿ ಎಚ್ಆರ್…
ವಿಜಯನಗರ:- ಗೃಹಲಕ್ಷ್ಮಿ ಯೋಜನೆ ಹಣವನ್ನು ಕೂಡಿಟ್ಟು ಮಹಿಳೆಯೊಬ್ಬರು ಸಣ್ಣದಾಗಿ ಐಸ್ ಕ್ರೀಮ್ ಅಂಗಡಿ ತೆರೆದು ಬದುಕು ಕಟ್ಟಿಕೊಂಡಿದ್ದಾರೆ.ಕೊಟ್ಟೂರು ತಾಲ್ಲೂಕಿನ ಹರಾಳು…
ಧಾರವಾಡ ಜಿಪಂ ಮಾಜಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಹತ್ವದ ತೀರ್ಪು ಹೊರಬಿದ್ದಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕಾಂಗ್ರೆಸ್…
ವಿಜಯಪುರ ಜಿಲ್ಲೆಯಲ್ಲಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಸಿಲುಕಿರುವ ಘಟನೆ ನಡೆದಿದೆ. ಪೆಟ್ರೋಲ್ ಬಂಕ್ ಜಾಗದ…