Latest

ಯಾದಗಿರಿ: ಚಿಂದಿ ಆಯುವ ಯುವತಿಯರ ಅತ್ಯಾಚಾರ ಮತ್ತು ಕೊಲೆ ಪ್ರಕರಣ; ಬೆಂಗಳೂರಿನಲ್ಲಿ ಪ್ರತಿಭಟನೆ…!

ಯಾದಗಿರಿ ಜಿಲ್ಲೆ ಗುರುಮಿಟ್ಕಲ್ ತಾಲೂಕು ಸೈದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಚಿಂದಿ ಆಯುವ ಯುವತಿಯರಿಬ್ಬರ ಶವ ನೀಲಹಳ್ಳಿ ಕೆರೆಯಲ್ಲಿ ದಿನಾಂಕ 11.02.2025 ರಂದು ದೊರೆತಿದ್ದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿರುತ್ತಾರೆ.
ಮೃತ ಯುವತಿಯರು ಬುಡ್ಗಜಂಗಮ ಸಮುದಾಯದ ಸಾಯಮ್ಮ(15) ಮತ್ತು ಶ್ಯಾಮಮ್ಮ (19) ಎಂದು ಗುರುತಿಸಲಾಗಿದೆ.

ಕುಟುಂಬಸ್ಥರಿಂದ ಅತ್ಯಾಚಾರ ಮತ್ತು ಕೊಲೆಯ ಆರೋಪ.

ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕುಟುಂಬಸ್ಥರು ಅತ್ಯಾಚಾರ ಮತ್ತು ಕೊಲೆ ಎಂದು ಆರೋಪಿಸಿದ್ದು ಈ ಆರೋಪಕ್ಕೆ ಪುಷ್ಟಿ ಕೊಡುವಂತೆ ಯುವತಿಯರ ಬಳಿ ಸಿಕ್ಕ ದೂರವಾಣಿ ಸಂಖ್ಯೆಗಳು, ಹಾಗೂ ಯಾರೋ ಅವರನ್ನು ಬೈಕ್ ನಲ್ಲಿ ಕರೆದುಕೊಂಡು ಹೋದರು ಎಂಬ ಹೇಳಿಕೆಗಳನ್ನು ಸ್ಥಳೀಯರು ನೀಡಿರುತ್ತಾರೆ.

ದಲಿತ ಪರ ಸಂಘಗಳಿಂದ ಪ್ರತಿಭಟನೆ.

ಈ ವಿಚಾರದ ಕುರಿತು ಕೆಲ ದಲಿತ ಪರ ಸಂಘಗಳು ತನಿಖೆ ನಡೆಸಿ ಆದಷ್ಟು ಬೇಗ ಅಪರಾಧಿಗಳನ್ನು ಬಂಧಿಸಬೇಕೆಂದು ಒತ್ತಾಯಿಸಿರುತ್ತಾರೆ. ಅಷ್ಟೇ ಅಲ್ಲದೆ ದಿನಾಂಕ 25.02.2025 ರಂದು ಬೆಂಗಳೂರು ಹಾಗೂ ಕಲಬುರ್ಗಿಯಲ್ಲೂ ಸಹ ದಲಿತಪರ ಸಂಘಗಳು ಪ್ರತಿಭಟನೆ ನಡೆಸಿರುತ್ತಾರೆ.
ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ವಡ್ಡಗೆರೆ ನಾಗರಾಜಯ್ಯ ಹಾಗೂ ಹಲವರು ಸೇರಿ ಪ್ರತಿಭಟನೆ ನಡೆಸಿದ್ದು ಚಿಂದಿ ಆಯುವ ಅಲೆಮಾರಿ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ವ್ಯಾಸಗಿ ಕೊಲೆ ಮಾಡಿರುವವರನ್ನು ಬಂಧಿಸಿ ಕಾನೂನು ರೀತಿ ಕ್ರಮ ಜರುಗಿಸಬೇಕೆಂದು ಒತಾಯಿಸಿರುತ್ತಾರೆ.

ಪೊಲೀಸರ ಹೇಳಿಕೆ.

ಕೆರೆಯಲ್ಲಿ ಸಿಕ್ಕಿರುವ ಯುವತಿಯರ ಶವದ ಪ್ರಕರಣದ ಕುರಿತು ಮರಣೋತ್ತರ ಪರೀಕ್ಷೆಯ ವರದಿ ಬಂದಿದ್ದು ತನಿಖೆ ನಡೆಸುತ್ತಿದ್ದೇವೆ ಈಗಲೇ ಹೆಚ್ಚಿನ ಮಾಹಿತಿಯನ್ನು ಒದಗಿಸಲು ಸಾಧ್ಯವಿಲ್ಲ ಎಫ್ ಎಸ್ ಎಲ್ ವರದಿಗಾಗಿ ನಿರೀಕ್ಷಿಸುತ್ತಿದ್ದೇವೆ ಅದು ಬಂದ ನಂತರ ಖಚಿತ ಮಾಹಿತಿಯನ್ನು ನೀಡಲು ಸಾಧ್ಯವಾಗುತ್ತದೆ ಎಂದು ಹೇಳಿರುತ್ತಾರೆ.

nazeer ahamad

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

3 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

3 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

3 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

3 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

1 day ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

1 day ago