Corruption

ಕಸದ ಕೊಂಪೆಯಾದ ಯರಗುಪ್ಪಿ ಬಸ್ ನಿಲ್ದಾಣ..!

ಕುಂದಗೋಳ; ತಾಲೂಕಿನ ಯರಗುಪ್ಪಿ ಗ್ರಾಮದ ಚಿಕ್ಕನರ್ತಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಹತ್ತಿರ ನಿರ್ಮಾಸಿಲಾದ ಬಸ್ ತಂಗುದಾಣ, ತ್ಯಾಜ್ಯ ವಸ್ತುಗಳ ಸಂಗಮವಾಗಿದೆ.

ಹೌದು..! ಈ ಬಸ್ ನಿಲ್ದಾಣ ಅವ್ಯವಸ್ಥೆ ಒಂದಾ ಎರಡಾ ನೂರೆಂಟು ಸಮಸ್ಯೆಗಳ ಆಗರವಾಗಿದೆ. ಬಸ್ ತಂಗುದಾಣದಲ್ಲಿ ಕುಡುಕರ ಹಾವಳಿ ಹೆಚ್ಚಾಗಿದ್ದು ಮಹಿಳೆಯರಿಗೆ ಕೂಡಲು ಆಸನದ ವ್ಯವಸ್ಥೆ ಇಲ್ಲದೆ ಇರುವುದರಿಂದ ಬಸ್ ನಿಲ್ದಾಣ, ಎದುರುಗಡೆ ಮನೆಯೊಂದರಲ್ಲಿ ನಿಂತು ಪ್ರಯಾಣ ಬೆಳಸುತ್ತಾರೆ. ನಿಲ್ದಾಣದಲ್ಲಿ ಸಾರಾಯಿ ಟೆಟ್ರಾ ಪ್ಯಾಕೇಟ್ ಗಳು, ಬಿಡಾ , ಸಿಗರೇಟು, ತ್ಯಾಜ್ಯ ವಸ್ತುಗಳು, ದುರ್ವಾಸನೆ ಎದ್ದು ನಾರುತ್ತಿದ್ದರು, ಏನು ಆಗೇ ಇಲ್ಲ ಎನ್ನುವಂತೆ, ಸ್ಥಳೀಯ ಅಧಿಕಾರಿಗಳು, ರಾಜಕಾರಣಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆ.

ಈ ಕಟ್ಟಡದ ದುಸ್ಥಿತಿ ಕಂಡು ಸ್ಥಳೀಯರ ಬಳಿ ವಿಚಾರಿಸಿದಾಗ 25 ವರ್ಷಕ್ಕೂ ಹೆಚ್ಚು ವರ್ಷದ ಹಿಂದೆ ಈ ಕಟ್ಟಡ ನಿರ್ಮಿಸಿದ್ದಾರೆ. ಕಟ್ಟಡ ಶಿಥಿಲಾವ್ಯಸ್ಥೆ ತಲುಪಿದರು ಸ್ವಲ್ಪವೂ ಕಾಳಜಿ ತೋರಿಸದೆ, ಕೇವಲ ಕಛೇರಿಗೆ ಸೀಮಿತವಾದ ಅಧಿಕಾರಿಗಳೇ ಒಮ್ಮೆ ಇತ್ತ ಗಮನ ಹರಿಸಿ. ಇದರ ಜೊತೆಗೆ ಮುಳ್ಳಹಳ್ಳಿ ಕ್ರಾಸ್ ಬಳಿ ಬಸ್ ನಿಲ್ದಾಣ ಇಲ್ಲದೇ ಇರುವುದರಿಂದ ಗ್ರಾಮದ ಮತ್ತು ಪಕ್ಕದ ಗ್ರಾಮಸ್ಥರು ಬಸ್ ನಿಲ್ದಾಣದ ಪಕ್ಕದ ಮನೆಗಳಲ್ಲಿ ಅಶ್ರಯ ಪಡೆಯುತ್ತಿದ್ದಾರೆ. ಇದರಿಂದ ಸಾರ್ವಜನಿಕರು ಗ್ರಾಮ ಪಂಚಾಯತಿ ಆಡಳಿತ ವೈಖರಿ ವಿರುದ್ದ ಕಿಡಿಕಾರಿದರು.

ಕೂಡಲೇ ಗ್ರಾಮ ಪಂಚಾಯಿತಿ ಆಡಳಿತ ಮಂಡಳಿ ಸಾರ್ವಜನಿಕ ರಿಗೆ ಸೂಕ್ತವಾದ ವ್ಯವಸ್ಥೆ ಕಲ್ಪಿಸಿ ಕೊಡಬೇಕೆಂದು ಇಲ್ಲಿಯ ಜನರ ಅಗ್ರಹವಾಗಿದೆ.

ವರದಿ; ಶಾನು ಯಲಿಗಾರ

ಭ್ರಷ್ಟರ ಬೇಟೆ

Recent Posts

ಮದ್ಯಪಾನ ಮಾಡಿ ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ಚಾಲಕರ ವಿರುದ್ಧ ಕ್ರಮ: ಬೆಂಗಳೂರು ಸಂಚಾರ ಪೊಲೀಸರ ದಾಳಿ

ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…

14 hours ago

ಮೈಸೂರಿನಲ್ಲಿ ಐಷಾರಾಮಿ ಕಾರುಗಳ ಮೇಲೆ ಆರ್‌ಟಿಒ ದಾಳಿ: ₹3 ಕೋಟಿ ದಂಡ, ₹15 ಕೋಟಿ ಮೌಲ್ಯದ ವಾಹನ ವಶ

ಮೈಸೂರು: ನಕಲಿ ದಾಖಲೆಗಳ ಆಧಾರದಲ್ಲಿ ನೋಂದಣಿ ಮಾಡಿಕೊಂಡು ತೆರಿಗೆ ವಂಚನೆ ಮಾಡುತ್ತಿದ್ದ ದುಬಾರಿ ಕಾರುಗಳ ಮೇಲೆ ಸಾರಿಗೆ ಇಲಾಖೆಯ ಅಧಿಕಾರಿಗಳು…

15 hours ago

ಕೆ.ಆರ್.ಪೇಟೆ: ಜಮೀನಿನಲ್ಲಿ ಗಾಂಜಾ ಬೆಳೆಯುತ್ತಿದ ವ್ಯಕ್ತಿ ಬಂಧನ

ಕೆ.ಆರ್.ಪೇಟೆ ತಾಲ್ಲೂಕಿನ ಬೂಕನಕೆರೆ ಹೋಬಳಿಯ ಕಾಶಿ ಮುರುಕನಹಳ್ಳಿಯಲ್ಲಿ ಗಾಂಜಾ ಬೆಳೆದಿದ್ದ ಪ್ರಕರಣವೊಂದು ಬೆಳಕಿಗೆ ಬಂದಿದೆ. ಜಮೀನಿನಲ್ಲಿ ಸುಮಾರು 17 ಕಿಲೋಗ್ರಾಂ…

15 hours ago

ರ್‍ಯಾಶ್ ಡ್ರೈವಿಂಗ್ ಪ್ರಶ್ನಿಸಿದ ಮಹಿಳೆಗೆ ರ‍್ಯಾಪಿಡೋ ಬೈಕ್ ಚಾಲಕನಿಂದ ಹಲ್ಲೆ: ಪ್ರಕರಣ ದಾಖಲು

ರಾಜ್ಯ ಸರ್ಕಾರ ಓಲಾ, ಉಬರ್ ಹಾಗೂ ರ‍್ಯಾಪಿಡೋ ಸೇರಿದಂತೆ ಎಲ್ಲ ಬೈಕ್ ಟ್ಯಾಕ್ಸಿ ಸೇವೆಗಳನ್ನು ಬೆಂಗಳೂರಿನಲ್ಲಿ ರ‍್ಯಾಪಿಡೋ ಚಾಲಕನಿಂದ ಮಹಿಳೆಯ…

17 hours ago

ಪುತ್ತೂರಿನಲ್ಲಿ ಆತ್ಮಹತ್ಯೆ ಆಘಾತ: ಏಳು ತಿಂಗಳ ಗರ್ಭಿಣಿ ನೇಣುಬಿಗಿದುಕೊಂಡು ಜೀವವಿಡುವ ದುರ್ಘಟನೆ

ಪುತ್ತೂರು, ಜೂನ್ 16 – ಪುತ್ತೂರು ಹೊರವಲಯದ ಚಿಕ್ಕಪುತ್ತೂರಿನಲ್ಲಿ ಏಳು ತಿಂಗಳ ಗರ್ಭಿಣಿಯಾಗಿದ್ದ ಯುವತಿಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ಬೆಳಕಿಗೆ…

18 hours ago

ಕೋಲಾರ್ ಎಸ್‌ಬಿಐ ಎಟಿಎಂ ದರೋಡೆ: ಕಳ್ಳರು ₹27 ಲಕ್ಷ ನಗದು ದೋಚಿ ಪರಾರಿ.!

ಕೋಲಾರ್ (ಜೂನ್ 16): ನಗರದ ಸಹಕಾರ ನಗರದಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಎಟಿಎಂ ಕೇಂದ್ರವೊಂದರಲ್ಲಿ ಭಾನುವಾರ ರಾತ್ರಿ ಸಂಭವಿಸಿದ…

21 hours ago