ಬೆಂಗಳೂರು: ಕರ್ನಾಟಕ ಬಿಜೆಪಿ ಶಿಬಿರದಲ್ಲಿ ಆಂತರಿಕ ಬಿಕ್ಕಟ್ಟು ಮತ್ತಷ್ಟು ಗಂಭೀರ ಸ್ವರೂಪ ಪಡೆಯುತ್ತಿದ್ದು, ನಾಯಕತ್ವದ ವಿರುದ್ ಸಮಾಧಾನ ದಿನದಿಂದ ದಿನಕ್ಕೆ ಗರಿಷ್ಠಕ್ಕೇರಿ ಬಿರುಕು ಹೆಚ್ಚಿಸುತ್ತಿದೆ. ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಬಿವೈ ವಿಜಯೇಂದ್ರ ನೇಮಕಗೊಂಡ ಬಳಿಕವೇ ಈ ಬಿರುಕುಗಳು ಪ್ರಕಟವಾಗಿ ಹೊರಬರುತ್ತಿದ್ದರೆ, ಇತ್ತೀಚಿನ ಬೆಳವಣಿಗೆಗಳು ಪಕ್ಷದ ಅಂತರಾಳದಲ್ಲಿ ಚರ್ಚೆಗೆ ಕಾರಣವಾಗಿವೆ.
ಪಕ್ಷದಿಂದ ಉಚ್ಚಾಟನೆಗೊಳಗಾದ ಬಿಜೇಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಇದೀಗ ಮತ್ತೊಮ್ಮೆ ಬಿಎಸ್ ಯಡಿಯೂರಪ್ಪ ಮತ್ತು ವಿಜಯೇಂದ್ರ ವಿರುದ್ಧ ಕಿಡಿಕಾರಿದ್ದಾರೆ. ಯತ್ನಾಳ್, “ರಮೇಶ್ ಜಾರಕಿಹೊಳಿ ಅವರ ಸಿಡಿ ಪ್ರಕರಣದ ಹಿಂದೆ ನಿಂತಿದ್ದು ಬಿವೈ ವಿಜಯೇಂದ್ರ. ಇಂತಹ ಕೆಲಸಗಳಲ್ಲಿ ತೊಡಗಿರುವ ವ್ಯಕ್ತಿ ಪಕ್ಷದ ನೇತೃತ್ವ ವಹಿಸುವುದೇ ಶೋಚನೀಯ” ಎಂದು ಕಿಡಿಕಾರಿದ್ದಾರೆ.
ಅಷ್ಟಕ್ಕೆ ನಿಲ್ಲದೆ, ಡಿಕೆ ಶಿವಕುಮಾರ್ ಮತ್ತು ವಿಜಯೇಂದ್ರ ಸೇರಿಕೊಂಡು ಜಾರಕಿಹೊಳಿ ಅವರ ರಾಜಕೀಯ ಬದುಕು ಹಾಳು ಮಾಡಿದ್ದಾರೆ ಎಂಬ ಗಂಭೀರ ಆರೋಪವನ್ನೂ ಯತ್ನಾಳ್ ಮಾಡಿದ್ದಾರೆ. ಈ ಹೇಳಿಕೆಗಳು ಈಗ ರಾಜ್ಯ ರಾಜಕೀಯದಲ್ಲಿ ಮತ್ತೊಂದು ವಿವಾದದ ತಿರುಳನ್ನು ಹುಟ್ಟುಹಾಕಿವೆ.
ಇದರಿಂದಾಗಿ, ಯತ್ನಾಳ್ ಪದೇ ಪದೇ ವಿಜಯೇಂದ್ರನನ್ನು ಟಾರ್ಗೆಟ್ ಮಾಡುತ್ತಿರುವುದು ಹೈಕಮಾಂಡ್ನಲ್ಲಿ ಅಸಮಾಧಾನ ಉಂಟುಮಾಡುವ ಸಾಧ್ಯತೆ ಇದೆ. ಇತ್ತ, ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನದಲ್ಲಿ ಬದಲಾವಣೆ ನಡೆಯುವವೋ ಎಂಬ ಮಾತುಗಳು ಕೂಡ ಕಿವಿಗುತ್ತಿವೆ.
ಒಟ್ಟಾರೆ, ಕರ್ನಾಟಕ ಬಿಜೆಪಿ ಈಗ ಗಂಭೀರ ಆಂತರಿಕ ಬಿಕ್ಕಟ್ಟಿನಲ್ಲಿದ್ದು, ನಾಯಕತ್ವದ ವಿರೋಧಿ ಧ್ವನಿ ದಿನದಿಂದ ದಿನಕ್ಕೆ ಬಲಿಷ್ಠವಾಗುತ್ತಿರುವುದು ಪಕ್ಷದ ಭವಿಷ್ಯಕ್ಕೇ ಸವಾಲಾಗಿ ಪರಿಣಮಿಸಲಿದೆ.
ಶಿಕ್ಷಣಕ್ಕೆ ಬೆಂಬಲ ನೀಡಿ ಪತ್ನಿಗೆ ಸರ್ಕಾರಿ ಉದ್ಯೋಗ ಸಿಗುವಂತೆ ಮಾಡಿದ ಗಂಡನೊಬ್ಬ, ನಂತರ ಪತ್ನಿಯ ನಿರ್ಲಕ್ಷ್ಯ ಮತ್ತು ಕಿರುಕುಳದಿಂದ ಮನನೊಂದು…
ಚಿಕ್ಕಮಗಳೂರು ಜಿಲ್ಲೆಯ ಕಳಸದಿಂದ ಬಾಳೆಹೊನ್ನೂರುವರೆಗೆ ಭದ್ರಾ ನದಿ ಪ್ರದೇಶದಲ್ಲಿ ಇತ್ತೀಚೆಗೆ ಕಡಿಮೆ ಎತ್ತರದಲ್ಲಿ ಹಾರಾಡುತ್ತಿದ್ದ ನಿಗೂಢ ವಿಮಾನ ಸಾರ್ವಜನಿಕರಲ್ಲಿ ಭೀತಿ…
ಧಾರವಾಡ ಜಿಲ್ಲೆಯ ರಾಮಾಪುರ ಅರಣ್ಯ ವ್ಯಾಪ್ತಿಯ ನಿರ್ಜನ ಪ್ರದೇಶದಲ್ಲಿ ಹೃದಯವಿದ್ರಾವಕ ಘಟನೆ ಬೆಳಕಿಗೆ ಬಂದಿದೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಕ್ಷೇತ್ರದ…
ಕರ್ನಾಟಕ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಹತ್ವದ ಮಾಹಿತಿ ಬಹಿರಂಗವಾಗಿದೆ. ವಿಧಾನಸಭೆಯಲ್ಲಿ ಸಂಡೂರು ಕ್ಷೇತ್ರದ ಶಾಸಕ…
ಕರ್ನಾಟಕ ಸರ್ಕಾರವು ನಾಗರಿಕ ಸೇವೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರಿಗೆ ಮಹತ್ವದ ಹೊಸ ನಿಯಮ ಜಾರಿಗೆ ತಂದಿದೆ. ಇನ್ಮುಂದೆ ಸರ್ಕಾರಿ ನೌಕರರು ಮುಂಬಡ್ತಿ…
ಬಾಲಿವುಡ್ ನಟ ರಣವೀರ್ ಸಿಂಗ್ ಅಭಿನಯದ ‘ಧುರಂಧರ್ 2’ ಚಿತ್ರದ ಸದ್ದು ಭಾರತದ ಬಾಕ್ಸ್ ಆಫೀಸ್ನಲ್ಲಿ ಕೇಳಿಬರುತ್ತಿರುವಂತೆಯೇ, ಅದರ ಪ್ರಭಾವ…