ಬೆಂಗಳೂರು: ಕರ್ನಾಟಕ ಬಿಜೆಪಿ ಶಿಬಿರದಲ್ಲಿ ಆಂತರಿಕ ಬಿಕ್ಕಟ್ಟು ಮತ್ತಷ್ಟು ಗಂಭೀರ ಸ್ವರೂಪ ಪಡೆಯುತ್ತಿದ್ದು, ನಾಯಕತ್ವದ ವಿರುದ್ ಸಮಾಧಾನ ದಿನದಿಂದ ದಿನಕ್ಕೆ ಗರಿಷ್ಠಕ್ಕೇರಿ ಬಿರುಕು ಹೆಚ್ಚಿಸುತ್ತಿದೆ. ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಬಿವೈ ವಿಜಯೇಂದ್ರ ನೇಮಕಗೊಂಡ ಬಳಿಕವೇ ಈ ಬಿರುಕುಗಳು ಪ್ರಕಟವಾಗಿ ಹೊರಬರುತ್ತಿದ್ದರೆ, ಇತ್ತೀಚಿನ ಬೆಳವಣಿಗೆಗಳು ಪಕ್ಷದ ಅಂತರಾಳದಲ್ಲಿ ಚರ್ಚೆಗೆ ಕಾರಣವಾಗಿವೆ.
ಪಕ್ಷದಿಂದ ಉಚ್ಚಾಟನೆಗೊಳಗಾದ ಬಿಜೇಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಇದೀಗ ಮತ್ತೊಮ್ಮೆ ಬಿಎಸ್ ಯಡಿಯೂರಪ್ಪ ಮತ್ತು ವಿಜಯೇಂದ್ರ ವಿರುದ್ಧ ಕಿಡಿಕಾರಿದ್ದಾರೆ. ಯತ್ನಾಳ್, “ರಮೇಶ್ ಜಾರಕಿಹೊಳಿ ಅವರ ಸಿಡಿ ಪ್ರಕರಣದ ಹಿಂದೆ ನಿಂತಿದ್ದು ಬಿವೈ ವಿಜಯೇಂದ್ರ. ಇಂತಹ ಕೆಲಸಗಳಲ್ಲಿ ತೊಡಗಿರುವ ವ್ಯಕ್ತಿ ಪಕ್ಷದ ನೇತೃತ್ವ ವಹಿಸುವುದೇ ಶೋಚನೀಯ” ಎಂದು ಕಿಡಿಕಾರಿದ್ದಾರೆ.
ಅಷ್ಟಕ್ಕೆ ನಿಲ್ಲದೆ, ಡಿಕೆ ಶಿವಕುಮಾರ್ ಮತ್ತು ವಿಜಯೇಂದ್ರ ಸೇರಿಕೊಂಡು ಜಾರಕಿಹೊಳಿ ಅವರ ರಾಜಕೀಯ ಬದುಕು ಹಾಳು ಮಾಡಿದ್ದಾರೆ ಎಂಬ ಗಂಭೀರ ಆರೋಪವನ್ನೂ ಯತ್ನಾಳ್ ಮಾಡಿದ್ದಾರೆ. ಈ ಹೇಳಿಕೆಗಳು ಈಗ ರಾಜ್ಯ ರಾಜಕೀಯದಲ್ಲಿ ಮತ್ತೊಂದು ವಿವಾದದ ತಿರುಳನ್ನು ಹುಟ್ಟುಹಾಕಿವೆ.
ಇದರಿಂದಾಗಿ, ಯತ್ನಾಳ್ ಪದೇ ಪದೇ ವಿಜಯೇಂದ್ರನನ್ನು ಟಾರ್ಗೆಟ್ ಮಾಡುತ್ತಿರುವುದು ಹೈಕಮಾಂಡ್ನಲ್ಲಿ ಅಸಮಾಧಾನ ಉಂಟುಮಾಡುವ ಸಾಧ್ಯತೆ ಇದೆ. ಇತ್ತ, ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನದಲ್ಲಿ ಬದಲಾವಣೆ ನಡೆಯುವವೋ ಎಂಬ ಮಾತುಗಳು ಕೂಡ ಕಿವಿಗುತ್ತಿವೆ.
ಒಟ್ಟಾರೆ, ಕರ್ನಾಟಕ ಬಿಜೆಪಿ ಈಗ ಗಂಭೀರ ಆಂತರಿಕ ಬಿಕ್ಕಟ್ಟಿನಲ್ಲಿದ್ದು, ನಾಯಕತ್ವದ ವಿರೋಧಿ ಧ್ವನಿ ದಿನದಿಂದ ದಿನಕ್ಕೆ ಬಲಿಷ್ಠವಾಗುತ್ತಿರುವುದು ಪಕ್ಷದ ಭವಿಷ್ಯಕ್ಕೇ ಸವಾಲಾಗಿ ಪರಿಣಮಿಸಲಿದೆ.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…