Categories: CinemaLatest

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ ಚೌಧರಿ ತಮ್ಮ ವೃತ್ತಿಜೀವನದ ಆರಂಭದಲ್ಲಿ ಎದುರಿಸಿದ ಕಹಿ ಅನುಭವವೊಂದನ್ನು ಬಹಿರಂಗಪಡಿಸಿದ್ದು, ಇದೀಗ ಟಾಲಿವುಡ್‌ನಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

‘ಚಾಯ್ ಬಿಸ್ಕೆಟ್’ ಆಯೋಜಿಸುವ ‘ದಿ ಆಡಿಷನ್ ಶೋ’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಚಾಂದಿನಿ, ಚಿತ್ರರಂಗದಲ್ಲಿ ಅವಕಾಶಕ್ಕಾಗಿ ತಮ್ಮ ಮೇಲೆ ಒತ್ತಡ ಹೇರಲಾಗಿತ್ತು ಎಂದು ಹೇಳಿಕೊಂಡಿದ್ದಾರೆ.

2015ರಲ್ಲೇ ಕಹಿ ಅನುಭವ!

ಚಾಂದಿನಿ ಅವರ ಹೇಳಿಕೆಯ ಪ್ರಕಾರ, 2015ರಲ್ಲಿ ಮಹೇಶ್ ಬಾಬು ಅಭಿನಯದ ಬ್ರಹ್ಮೋತ್ಸವಂ ಚಿತ್ರದ ಚಿತ್ರೀಕರಣ ನಡೆಯುತ್ತಿದ್ದ ಸಂದರ್ಭದಲ್ಲಿ ವ್ಯಕ್ತಿಯೊಬ್ಬರು ಜ್ಯುವೆಲ್ಲರಿ ಬ್ರಾಂಡ್‌ನ ಬ್ರಾಂಡ್ ಅಂಬಾಸಿಡರ್ ಆಗುವ ಅವಕಾಶ ಕೊಡಿಸುವುದಾಗಿ ಅವರನ್ನು ಸಂಪರ್ಕಿಸಿದ್ದರು. ಸೆಟ್‌ನಲ್ಲೇ ಚಾಂದಿನಿ ಅವರ ತಾಯಿಯ ಸಮ್ಮುಖದಲ್ಲಿ ಈ ಬಗ್ಗೆ ಮಾತನಾಡಿದ್ದ ವ್ಯಕ್ತಿ, ಬಳಿಕ ಫೋನ್ ಮೂಲಕ ನಟಿಗೆ ಅಸಭ್ಯ ರೀತಿಯಲ್ಲಿ ಮಾತನಾಡಿದ್ದಾನೆ ಎಂದು ಅವರು ಆರೋಪಿಸಿದ್ದಾರೆ.

ತಮ್ಮ ನೋಟ ಹಾಗೂ ಮೈಬಣ್ಣದ ಬಗ್ಗೆ ಅವಹೇಳನಕಾರಿ ಮಾತುಗಳನ್ನು ಆಡಿದ್ದಲ್ಲದೆ, ಚಿತ್ರರಂಗದಲ್ಲಿ ಮುಂದುವರಿಯಬೇಕಾದರೆ ‘ಕಮಿಟ್‌ಮೆಂಟ್’ ನೀಡಬೇಕೆಂದು ಪರೋಕ್ಷವಾಗಿ ಲೈಂಗಿಕ ಬೇಡಿಕೆ ಇಟ್ಟಿದ್ದ ಎಂದು ಚಾಂದಿನಿ ಹೇಳಿದ್ದಾರೆ.

ಈ ಪ್ರಸ್ತಾಪಕ್ಕೆ ಚಾಂದಿನಿ ಒಪ್ಪದಿದ್ದಾಗ, ಅದೇ ವ್ಯಕ್ತಿ ಅವರ ತಾಯಿಗೂ ಕರೆ ಮಾಡಿ ಅಸಭ್ಯವಾಗಿ ಮಾತನಾಡಿದ್ದಾನೆ ಎನ್ನಲಾಗಿದೆ. ಇದರಿಂದ ಕೋಪಗೊಂಡ ತಾಯಿ, ಮತ್ತೊಮ್ಮೆ ಕರೆ ಮಾಡಿದರೆ ಪೊಲೀಸರಿಗೆ ದೂರು ನೀಡುವುದಾಗಿ ಎಚ್ಚರಿಕೆ ನೀಡಿದ್ದರು ಎಂದು ನಟಿ ತಿಳಿಸಿದ್ದಾರೆ.

‘ನನ್ನ ವಿರುದ್ಧ ಅಪಪ್ರಚಾರ ಮಾಡಲಾಯಿತು’

ಈ ಘಟನೆಯ ಬಳಿಕ ಚಿತ್ರರಂಗದಲ್ಲಿ ತಮ್ಮ ವಿರುದ್ಧ ನಕಾರಾತ್ಮಕ ಪ್ರಚಾರ ನಡೆಸಲಾಯಿತು ಎಂದು ಚಾಂದಿನಿ ಆರೋಪಿಸಿದ್ದಾರೆ. ‘ಆಕೆ ಅಹಂಕಾರಿ’, ‘ಆಕೆಯೊಂದಿಗೆ ಕೆಲಸ ಮಾಡುವುದು ಕಷ್ಟ’, ‘ರಾಜಿಗೆ ಒಪ್ಪುವುದಿಲ್ಲ’ ಎಂಬ ರೀತಿಯ ಮಾತುಗಳನ್ನು ಹರಡಲಾಗಿತ್ತು ಎಂದು ಹೇಳಿದ್ದಾರೆ.

ಆದರೆ ಇಂತಹ ಟೀಕೆಗಳಿಗೆ ತಲೆಬಾಗದೆ, ಅಡ್ಡದಾರಿಯಲ್ಲಿ ಅವಕಾಶ ಪಡೆಯುವುದಕ್ಕಿಂತ ಕಷ್ಟದ ದಾರಿಯನ್ನೇ ಆಯ್ಕೆ ಮಾಡುವುದು ಉತ್ತಮ ಎಂದು ಚಾಂದಿನಿ ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ.

ವರ್ಷಗಳ ಬಳಿಕ ಮತ್ತೆ ಮುಖಾಮುಖಿ!

ಇದಾದ ಹಲವು ವರ್ಷಗಳ ಬಳಿಕ, 2024ರಲ್ಲಿ ಗಾಮಿ, ಏವಂ ಹಾಗೂ ಮ್ಯೂಸಿಕ್ ಶಾಪ್ ಮೂರ್ತಿ ಸಿನಿಮಾಗಳ ಪ್ರಚಾರದ ಸಂದರ್ಭದಲ್ಲಿ ಹೈದರಾಬಾದ್‌ನ ಹೋಟೆಲೊಂದರಲ್ಲಿ ಇದೇ ವ್ಯಕ್ತಿಯನ್ನು ಮತ್ತೆ ಭೇಟಿಯಾದ ಘಟನೆ ನಡೆದಿದೆ ಎಂದು ಚಾಂದಿನಿ ಹೇಳಿದ್ದಾರೆ.

ಹೋಟೆಲ್‌ನಲ್ಲಿ ಉಪಾಹಾರ ಸೇವಿಸುತ್ತಿದ್ದ ಸಂದರ್ಭದಲ್ಲಿ ಸ್ಟೈಲಿಸ್ಟ್ ಒಬ್ಬರ ಮೂಲಕ ಆ ವ್ಯಕ್ತಿ ತಮ್ಮ ಬಳಿಗೆ ಬಂದಿದ್ದಾಗಿ ಅವರು ತಿಳಿಸಿದ್ದಾರೆ. 2015ರಲ್ಲಿ ನಡೆದ ಜ್ಯುವೆಲ್ಲರಿ ಜಾಹೀರಾತಿನ ವಿಚಾರವನ್ನು ನೆನಪಿಸಲು ಆತ ಪ್ರಯತ್ನಿಸಿದಾಗ, ಚಾಂದಿನಿ ನೇರವಾಗಿಯೇ ಹಳೆಯ ಘಟನೆಯನ್ನು ನೆನಪಿಸಿದ್ದಾರೆ.

“ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?” ಎಂದು ಆತನನ್ನು ಪ್ರಶ್ನಿಸಿದ್ದಾಗಿ ನಟಿ ಹೇಳಿದ್ದಾರೆ.

ತಮ್ಮ ಮಾತಿನಿಂದ ಆತ ಮುಜುಗರಕ್ಕೊಳಗಾಗಿ ಮುಖ ಮುಚ್ಚಿಕೊಂಡು ಅಲ್ಲಿಂದ ತೆರಳಿದ್ದಾನೆ ಎಂದು ಚಾಂದಿನಿ ತಮ್ಮ ಅನುಭವವನ್ನು ಹಂಚಿಕೊಂಡಿದ್ದಾರೆ.

ಚಿತ್ರರಂಗದಲ್ಲಿ ಎದುರಾದ ಇಂತಹ ಅನುಭವಗಳೇ ತಮ್ಮಲ್ಲಿ ಒಂದು ರೀತಿಯ ‘ಡಿಫೆನ್ಸ್ ಮೆಕಾನಿಸಂ’ ಬೆಳೆಸಿಕೊಳ್ಳಲು ಕಾರಣವಾಯಿತು ಎಂದು ಚಾಂದಿನಿ ಹೇಳಿದ್ದಾರೆ. ಮುಂದೆ ಪ್ರಾಮಾಣಿಕವಾಗಿ ಕೆಲಸ ಮಾಡುವವರೊಂದಿಗೆ ಮಾತ್ರ ವೃತ್ತಿಜೀವನ ಮುಂದುವರಿಸುವುದಾಗಿ ಅವರು ಸ್ಪಷ್ಟಪಡಿಸಿದ್ದಾರೆ.

ಚಾಂದಿನಿ ಚೌಧರಿ ಅವರ ಈ ಹೇಳಿಕೆಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ಚಿತ್ರರಂಗದಲ್ಲಿ ಅವಕಾಶಕ್ಕಾಗಿ ನಟಿಯರ ಮೇಲೆ ನಡೆಯುತ್ತದೆ ಎನ್ನಲಾದ ಒತ್ತಡ ಹಾಗೂ ಕಾಸ್ಟಿಂಗ್ ಕೌಚ್ ಕುರಿತು ಮತ್ತೊಮ್ಮೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಸೂಚನೆ: ಮೇಲಿನ ಆರೋಪಗಳು ನಟಿ ಚಾಂದಿನಿ ಚೌಧರಿ ಕಾರ್ಯಕ್ರಮದಲ್ಲಿ ಹಂಚಿಕೊಂಡ ಹೇಳಿಕೆಗಳನ್ನು ಆಧರಿಸಿವೆ. ಆರೋಪಕ್ಕೆ ಸಂಬಂಧಿಸಿದ ವ್ಯಕ್ತಿಯ ಪ್ರತ್ಯೇಕ ಪ್ರತಿಕ್ರಿಯೆ ಇಲ್ಲಿ ಲಭ್ಯವಿಲ್ಲ.

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

1 hour ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

1 hour ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

1 hour ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

1 hour ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

1 hour ago

ಅಕ್ರಮ ಸಂಬಂಧಕ್ಕೆ ಪತಿಯೇ ಅಡ್ಡಿ; ಪ್ರಿಯಕರನ ಜೊತೆ ಸೇರಿ ಗಂಡನನ್ನೇ ಕೊಂದ ಪತ್ನಿ, 6 ತಿಂಗಳ ಬಳಿಕ ಬಯಲಾಯ್ತು ರಹಸ್ಯ!

ಬೆಳಗಾವಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನೇ ಪತ್ನಿಯೊಬ್ಬಳು ತನ್ನ ಪ್ರಿಯಕರನ ಜೊತೆ ಸೇರಿ ಕೊಲೆ ಮಾಡಿರುವ ಆರೋಪ ಕೇಳಿಬಂದಿದ್ದು, ಸುಮಾರು…

1 hour ago