Latest

ಬೂಟು ಕಳಚಿಕೊಂಡು ಹೊಡೀತೀನಿ! ದೆಹಲಿ ಕರ್ನಾಟಕ ಭವನದಲ್ಲಿ ಸಿದ್ದು & ಡಿಕೆಶಿ ವಿಶೇಷ ಅಧಿಕಾರಿಗಳ ಜಟಾಪಟಿ

ದೆಹಲಿ, ಜುಲೈ 25: ರಾಜಧಾನಿ ದೆಹಲಿಯಲ್ಲಿರುವ ಕರ್ನಾಟಕ ಭವನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ವಿಶೇಷ ಕರ್ತವ್ಯಾಧಿಕಾರಿಗಳ ನಡುವೆ ಉಲ್ಬಣಗೊಂಡ ವಾದ-ವಿವಾದ ಈಗ ಖಾಸಗಿ ನಾಟಕವನ್ನು ಬಿಟ್ಟು ಅಧಿಕೃತ ದೂರು ಹಂತಕ್ಕೆ ತಲುಪಿದೆ. ಡಿಸಿಎಂ ಡಿಕೆ ಶಿವಕುಮಾರ್ ಅವರ ವಿಶೇಷ ಕರ್ತವ್ಯಾಧಿಕಾರಿ ಆಂಜನೇಯ, ಸಿಎಂ ಸಿದ್ದರಾಮಯ್ಯ ಅವರ ಅಧಿಕಾರಿ ಮೋಹನ್ ಕುಮಾರ್ ವಿರುದ್ಧ ಗಂಭೀರ ದೂರನ್ನು ದಾಖಲಿಸಿದ್ದಾರೆ.

ಆಂಜನೇಯ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ನಿವಾಸಿ ಆಯುಕ್ತರಿಗೆ ನೀಡಿದ ದೂರುದಲ್ಲಿ, ಸಿಎಂ ಅಧಿಕಾರಿಯ ವರ್ತನೆ ತನ್ನ ಕಾರ್ಯನಿರ್ವಹಣೆಗೆ ತೀವ್ರ ಅಡಚಣೆ ಉಂಟುಮಾಡಿದುದಾಗಿ ಆರೋಪಿಸಿದ್ದಾರೆ. “ಮೋಹನ್ ಕುಮಾರ್ ಅವರು ಅಧಿಕಾರದ ಹೆಮ್ಮೆಯೊಂದಿಗೆ ಮಾತನಾಡುತ್ತಾ, ನನ್ನನ್ನು ಬೂಟು ಕಳಚಿಕೊಂಡು ಹೊಡೆಯುತ್ತೇನೆ ಎಂದು ಸಾರ್ವಜನಿಕವಾಗಿ ಬೆದರಿಸಿದ್ದಾರೆ,” ಎಂದು ಆಂಜನೇಯ ದೂರಿನಲ್ಲಿ ತಿಳಿಸಿದ್ದಾರೆ.

ದೂರುದಲ್ಲಿ ಉಲ್ಲೇಖವಾದ ಪ್ರಮುಖ ಅಂಶಗಳು ಹೀಗಿವೆ:

ಸಿಎಂ ಅಧಿಕಾರಿ ಮೋಹನ್ ಕುಮಾರ್ ಅವರಿಂದ ನಿರಂತರ ಅವಮಾನ.

“ಬೂಟು ಕಳಚಿಕೊಂಡು ಹೊಡೆಯುತ್ತೇನೆ” ಎಂಬ ಬೆದರಿಕೆ ಅವರದೇ ಚೇಂಬರ್‌ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ.

ಪ್ರಮೀಳಾ ಎಂಬ ಮತ್ತೊಬ್ಬ ಸಿಬ್ಬಂದಿಯ ಸಮ್ಮುಖದಲ್ಲಿಯೂ ಅಪಮಾನಿತಸ್ಥಿತಿ.

ಸೇವಾ ದಾಖಲೆಯನ್ನು ಪರಿಶೀಲಿಸಿದರೆ, ಈ ಮೊದಲು ಕೂಡಾ ಹಿರಿಯ ಅಧಿಕಾರಿ ಎಂ.ಎಂ. ಜೋಷಿಗೆ ಹಲ್ಲೆ ಮಾಡಿದ ವರದಿ ಇದೆ.

ಹಿರಿಯತೆ ಹೊಂದಿದ್ದರೂ, ತಮ್ಮನ್ನು ಲೆಕ್ಕಾಧಿಕಾರಿ ಹುದ್ದೆಗೆ ವರ್ಗಾಯಿಸದಂತೆ ತಡೆಯಲಾಗುತ್ತಿದೆ ಎಂಬ ಆರೋಪ.

ನ್ಯಾಯಕ್ಕಾಗಿ ಅರ್ಜಿ:

“ನಾನು ಒಬ್ಬ ಗ್ರೂಪ್ ಬಿ ಅಧಿಕಾರಿಯಾಗಿದ್ದು, ಉಪ ಮುಖ್ಯಮಂತ್ರಿ ಅವರ ವಿಶೇಷ ಕರ್ತವ್ಯಾಧಿಕಾರಿ ಹುದ್ದೆಯಲ್ಲಿ ನಿಷ್ಠೆಯಿಂದ ಸೇವೆ ಸಲ್ಲಿಸುತ್ತಿದ್ದೇನೆ. ನನ್ನ ಮೇಲೆ ಇಂತಹ ನಿಂದನೆ ಹಾಗೂ ಬೆದರಿಕೆಗಳು ನನ್ನ ಮಾನಸಿಕ ಸ್ಥಿತಿಗೆ ಭಾರೀ ಆಘಾತ ತಂದಿದೆ. ಮೋಹನ್ ಕುಮಾರ್ ವಿರುದ್ಧ ತಕ್ಷಣ ಇಲಾಖಾ ವಿಚಾರಣೆ ನಡೆಸಿ, ನ್ಯಾಯ ಒದಗಿಸಬೇಕು,” ಎಂಬುದು ಆಂಜನೇಯ ಅವರ ವಿನಂತಿಯ ಸಾರಾಂಶ.

ಈ ಘಟನೆ ಸಿಎಂ-ಡಿಸಿಎಂ ಲೈನಿನಲ್ಲಿರುವ ಅಧಿಕಾರಿಗಳ ನಡುವೆ ನಡೆಯುತ್ತಿರುವ ಸಂಘರ್ಷವನ್ನು ಬಹಿರಂಗಪಡಿಸಿದ್ದು, ಸರಕಾರದೊಳಗಿನ ಆಡಳಿತ ಶಿಸ್ತು ಪ್ರಶ್ನೆಗೆ ಒಳಪಡಿಸಿದೆ. ಇಲಾಖಾ ಮಟ್ಟದ ತನಿಖೆ ನಡೆಸಿ ಸತ್ಯಾಂಶ ಹೊರ ತರಲಾಗುತ್ತದೆಯೇ ಎನ್ನುವುದು ಮುಂದೆ ಗಮನಿಸಬೇಕಾದ ವಿಷಯ.

nazeer ahamad

Recent Posts

ಅಟ್ರಾಸಿಟಿ ಪ್ರಕರಣದಲ್ಲಿ ಆರೋಪಿಗಳ ಬಂಧನಕ್ಕೆ ಲಂಚ ಬೇಡಿಕೆ: ಸಿಪಿಐ ಲೋಕಾಯುಕ್ತ ಬಲೆಗೆ

ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…

3 hours ago

ಕರ್ಕಶ ಶಬ್ದದ ಬೈಕ್ ವಿಚಾರಕ್ಕೆ ಪೊಲೀಸರ ಮೇಲೆಯೇ ವಿದ್ಯಾರ್ಥಿಗಳ ಹಲ್ಲೆ

ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…

10 hours ago

ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ ದಂಧೆ: ಬೆಳ್ತಂಗಡಿಯಲ್ಲಿ ಪೊಲೀಸರ ದಾಳಿ, ಮೂವರು ಬಂಧನ

ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…

10 hours ago

ಒಂದು ವರ್ಷದ ನಿರೀಕ್ಷೆಗೆ ತೆರೆ: ಭಟ್ಕಳಕ್ಕೆ ಖಾಯಂ ಎಸಿ, ಜೆ. ಮಹೇಶ್ ಅಧಿಕಾರ ಸ್ವೀಕಾರ

ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…

1 day ago

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ; ರಾಜಕೀಯ ವಲಯದಲ್ಲಿ ಶೋಕದ ಛಾಯೆ

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…

1 day ago

ಆಂಟಿ ಹಿಂದೆ ಹೋದವನ ದುರಂತ ಅಂತ್ಯ: ಲಿವ್-ಇನ್ ಸಂಗಾತಿಯ ಕಿರುಕುಳಕ್ಕೆ ಯುವಕ ಆತ್ಮಹತ್ಯೆ!

ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…

1 day ago