Latest

ಬೂಟು ಕಳಚಿಕೊಂಡು ಹೊಡೀತೀನಿ! ದೆಹಲಿ ಕರ್ನಾಟಕ ಭವನದಲ್ಲಿ ಸಿದ್ದು & ಡಿಕೆಶಿ ವಿಶೇಷ ಅಧಿಕಾರಿಗಳ ಜಟಾಪಟಿ

ದೆಹಲಿ, ಜುಲೈ 25: ರಾಜಧಾನಿ ದೆಹಲಿಯಲ್ಲಿರುವ ಕರ್ನಾಟಕ ಭವನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ವಿಶೇಷ ಕರ್ತವ್ಯಾಧಿಕಾರಿಗಳ ನಡುವೆ ಉಲ್ಬಣಗೊಂಡ ವಾದ-ವಿವಾದ ಈಗ ಖಾಸಗಿ ನಾಟಕವನ್ನು ಬಿಟ್ಟು ಅಧಿಕೃತ ದೂರು ಹಂತಕ್ಕೆ ತಲುಪಿದೆ. ಡಿಸಿಎಂ ಡಿಕೆ ಶಿವಕುಮಾರ್ ಅವರ ವಿಶೇಷ ಕರ್ತವ್ಯಾಧಿಕಾರಿ ಆಂಜನೇಯ, ಸಿಎಂ ಸಿದ್ದರಾಮಯ್ಯ ಅವರ ಅಧಿಕಾರಿ ಮೋಹನ್ ಕುಮಾರ್ ವಿರುದ್ಧ ಗಂಭೀರ ದೂರನ್ನು ದಾಖಲಿಸಿದ್ದಾರೆ.

ಆಂಜನೇಯ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ನಿವಾಸಿ ಆಯುಕ್ತರಿಗೆ ನೀಡಿದ ದೂರುದಲ್ಲಿ, ಸಿಎಂ ಅಧಿಕಾರಿಯ ವರ್ತನೆ ತನ್ನ ಕಾರ್ಯನಿರ್ವಹಣೆಗೆ ತೀವ್ರ ಅಡಚಣೆ ಉಂಟುಮಾಡಿದುದಾಗಿ ಆರೋಪಿಸಿದ್ದಾರೆ. “ಮೋಹನ್ ಕುಮಾರ್ ಅವರು ಅಧಿಕಾರದ ಹೆಮ್ಮೆಯೊಂದಿಗೆ ಮಾತನಾಡುತ್ತಾ, ನನ್ನನ್ನು ಬೂಟು ಕಳಚಿಕೊಂಡು ಹೊಡೆಯುತ್ತೇನೆ ಎಂದು ಸಾರ್ವಜನಿಕವಾಗಿ ಬೆದರಿಸಿದ್ದಾರೆ,” ಎಂದು ಆಂಜನೇಯ ದೂರಿನಲ್ಲಿ ತಿಳಿಸಿದ್ದಾರೆ.

ದೂರುದಲ್ಲಿ ಉಲ್ಲೇಖವಾದ ಪ್ರಮುಖ ಅಂಶಗಳು ಹೀಗಿವೆ:

ಸಿಎಂ ಅಧಿಕಾರಿ ಮೋಹನ್ ಕುಮಾರ್ ಅವರಿಂದ ನಿರಂತರ ಅವಮಾನ.

“ಬೂಟು ಕಳಚಿಕೊಂಡು ಹೊಡೆಯುತ್ತೇನೆ” ಎಂಬ ಬೆದರಿಕೆ ಅವರದೇ ಚೇಂಬರ್‌ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ.

ಪ್ರಮೀಳಾ ಎಂಬ ಮತ್ತೊಬ್ಬ ಸಿಬ್ಬಂದಿಯ ಸಮ್ಮುಖದಲ್ಲಿಯೂ ಅಪಮಾನಿತಸ್ಥಿತಿ.

ಸೇವಾ ದಾಖಲೆಯನ್ನು ಪರಿಶೀಲಿಸಿದರೆ, ಈ ಮೊದಲು ಕೂಡಾ ಹಿರಿಯ ಅಧಿಕಾರಿ ಎಂ.ಎಂ. ಜೋಷಿಗೆ ಹಲ್ಲೆ ಮಾಡಿದ ವರದಿ ಇದೆ.

ಹಿರಿಯತೆ ಹೊಂದಿದ್ದರೂ, ತಮ್ಮನ್ನು ಲೆಕ್ಕಾಧಿಕಾರಿ ಹುದ್ದೆಗೆ ವರ್ಗಾಯಿಸದಂತೆ ತಡೆಯಲಾಗುತ್ತಿದೆ ಎಂಬ ಆರೋಪ.

ನ್ಯಾಯಕ್ಕಾಗಿ ಅರ್ಜಿ:

“ನಾನು ಒಬ್ಬ ಗ್ರೂಪ್ ಬಿ ಅಧಿಕಾರಿಯಾಗಿದ್ದು, ಉಪ ಮುಖ್ಯಮಂತ್ರಿ ಅವರ ವಿಶೇಷ ಕರ್ತವ್ಯಾಧಿಕಾರಿ ಹುದ್ದೆಯಲ್ಲಿ ನಿಷ್ಠೆಯಿಂದ ಸೇವೆ ಸಲ್ಲಿಸುತ್ತಿದ್ದೇನೆ. ನನ್ನ ಮೇಲೆ ಇಂತಹ ನಿಂದನೆ ಹಾಗೂ ಬೆದರಿಕೆಗಳು ನನ್ನ ಮಾನಸಿಕ ಸ್ಥಿತಿಗೆ ಭಾರೀ ಆಘಾತ ತಂದಿದೆ. ಮೋಹನ್ ಕುಮಾರ್ ವಿರುದ್ಧ ತಕ್ಷಣ ಇಲಾಖಾ ವಿಚಾರಣೆ ನಡೆಸಿ, ನ್ಯಾಯ ಒದಗಿಸಬೇಕು,” ಎಂಬುದು ಆಂಜನೇಯ ಅವರ ವಿನಂತಿಯ ಸಾರಾಂಶ.

ಈ ಘಟನೆ ಸಿಎಂ-ಡಿಸಿಎಂ ಲೈನಿನಲ್ಲಿರುವ ಅಧಿಕಾರಿಗಳ ನಡುವೆ ನಡೆಯುತ್ತಿರುವ ಸಂಘರ್ಷವನ್ನು ಬಹಿರಂಗಪಡಿಸಿದ್ದು, ಸರಕಾರದೊಳಗಿನ ಆಡಳಿತ ಶಿಸ್ತು ಪ್ರಶ್ನೆಗೆ ಒಳಪಡಿಸಿದೆ. ಇಲಾಖಾ ಮಟ್ಟದ ತನಿಖೆ ನಡೆಸಿ ಸತ್ಯಾಂಶ ಹೊರ ತರಲಾಗುತ್ತದೆಯೇ ಎನ್ನುವುದು ಮುಂದೆ ಗಮನಿಸಬೇಕಾದ ವಿಷಯ.

nazeer ahamad

Recent Posts

ಲೋಕಾಯುಕ್ತ ಅಧಿಕಾರಿ ಎಂದು ಎಂಜಿನಿಯರ್‌ಗೆ ಹಣ ಬೇಡಿಕೆ ಇಟ್ಟ ಆರೋಪಿ ಬಂಧನ

ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…

12 hours ago

ಉತಾರ ನೀಡಲು ₹1.5 ಲಕ್ಷ ಲಂಚ: ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಬಲೆಗೆ

ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…

17 hours ago

‘ಉಗ್ರ ಎಂದು ಗೊತ್ತಿದ್ದರೆ ಮನೆ ಕೊಡುತ್ತಿರಲಿಲ್ಲ’; ಶಂಕಿತ ಸುಹೇಲ್ ಬಂಧನದಿಂದ ಬೆಚ್ಚಿಬಿದ್ದ ಮನೆ ಮಾಲೀಕರು

ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…

17 hours ago

17 ವರ್ಷದ ಸೋದರಳಿಯನ ಬ್ಲಾಕ್ ಮೇಲ್ ಮಾಡಿ ಸೆಕ್ಸ್ ಮಾಡುತ್ತಿದ್ದ 40 ವರ್ಷದ ಅತ್ತೆ..! ಪೋಕ್ಸೋ ಪ್ರಕರಣ ದಾಖಲು.

ಉತ್ತರ ಪ್ರದೇಶದ ಅಲಿಗಢ್‌ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…

17 hours ago

ನಟಿ ಕೃಷಿ ತಾಪಾಂಡ ನಿವಾಸದಲ್ಲಿ ಉದ್ಯಮಿ ವೈಶಾಕ್ ಮೃತದೇಹ ಪತ್ತೆ; ಸಾವಿನ ಸುತ್ತ ಹಲವು ಪ್ರಶ್ನೆಗಳು

ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್‌ಮೆಂಟ್‌ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…

17 hours ago

ಇಡಿ ದಾಳಿ: ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿ ಮನೆಯಿಂದ ಯಮುನಾ ವಶಕ್ಕೆ

ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…

22 hours ago