ಬೆಂಗಳೂರು: ಪತಿಯ ನಿರಂತರ ಅನುಮಾನ ಮತ್ತು ಕಿರುಕುಳದಿಂದ ಬೇಸತ್ತ ಯುವ ಗೃಹಿಣಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಆರೋಪದ ಘಟನೆ ಬೆಂಗಳೂರಿನ ಇಂದಿರಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬಿ.ಎಸ್ಸಿ ಪದವಿ ಪೂರ್ಣಗೊಳಿಸಿದ್ದ 21 ವರ್ಷದ ಪ್ರೇರಣಾ ಮೃತಪಟ್ಟಿದ್ದು, ಈ ಪ್ರಕರಣ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.
ದುಪ್ಪನಹಳ್ಳಿ ಸಮೀಪದ ಪತಿಯ ಮನೆಯಲ್ಲಿ ವಾಸವಾಗಿದ್ದ ಪ್ರೇರಣಾ, ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಾತ್ರೂಮ್ನಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ವಿಷಯ ತಿಳಿದ ಕುಟುಂಬಸ್ಥರು ಅವರನ್ನು ತಕ್ಷಣ ಇಂದಿರಾನಗರದ ಚಿನ್ಮಯಿ ಆಸ್ಪತ್ರೆಗೆ ಕರೆದೊಯ್ದರೂ, ಆಸ್ಪತ್ರೆಗೆ ತಲುಪುವಷ್ಟರಲ್ಲೇ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಪ್ರೇರಣಾ ಮತ್ತು ವಿನಯ್ ಕುಮಾರ್ ಅವರ ವಿವಾಹ ಸುಮಾರು ಒಂದೂವರೆ ವರ್ಷದ ಹಿಂದೆ ನಡೆದಿತ್ತು. ಮದುವೆಯ ನಂತರವೂ ಆಕೆಯ ವಿದ್ಯಾಭ್ಯಾಸ ಮುಂದುವರಿಯಲು ಅವಕಾಶ ನೀಡಲಾಗಿದ್ದು, ಈ ವರ್ಷವಷ್ಟೇ ಅವರು ಬಿ.ಎಸ್ಸಿ ಪದವಿ ಪೂರ್ಣಗೊಳಿಸಿದ್ದರು. ಆದರೆ, ಪ್ರೇರಣಾ ಕುಟುಂಬದ ಆರೋಪದ ಪ್ರಕಾರ, ವಿನಯ್ ಕುಮಾರ್ ಪತ್ನಿಯ ಬಗ್ಗೆ ಅತಿಯಾದ ಅನುಮಾನ ಹೊಂದಿದ್ದು, ಇದೇ ವಿಚಾರವಾಗಿ ಆಗಾಗ ಜಗಳ ಹಾಗೂ ಮಾನಸಿಕ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಜೊತೆಗೆ ಮಗು ಮಾಡಿಕೊಳ್ಳುವ ವಿಚಾರದಲ್ಲೂ ಒತ್ತಡ ಹೇರಲಾಗುತ್ತಿತ್ತು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಸುಮಾರು ಎರಡು ತಿಂಗಳ ಹಿಂದೆ ಕಿರುಕುಳ ತಾಳಲಾರದೆ ಪ್ರೇರಣಾ ತಂದೆಯ ಮನೆಗೆ ತೆರಳಿದ್ದರು. ಬಳಿಕ ಎರಡೂ ಕುಟುಂಬಗಳ ನಡುವೆ ಪಂಚಾಯಿತಿ ನಡೆಸಿ ರಾಜಿ ಮಾಡಿಸಿ, 15 ದಿನಗಳ ಹಿಂದಷ್ಟೇ ಪತಿಯ ಮನೆಗೆ ಕಳುಹಿಸಲಾಗಿತ್ತು. ಆದರೆ, ಗಂಡನ ಮನೆಯವರ ವರ್ತನೆಯಲ್ಲಿ ಯಾವುದೇ ಬದಲಾವಣೆ ಆಗಿಲ್ಲ ಎಂದು ಮೃತೆಯ ಪೋಷಕರು ಆರೋಪಿಸಿದ್ದಾರೆ.
ಪ್ರೇರಣಾ ಆತ್ಮಹತ್ಯೆ ಮಾಡಿಕೊಂಡಿಲ್ಲ, ಪತಿ ಹಾಗೂ ಆತನ ಕುಟುಂಬದ ಕಿರುಕುಳವೇ ಆಕೆಯ ಸಾವಿಗೆ ಕಾರಣವಾಗಿದೆ ಎಂದು ಪೋಷಕರು ಇಂದಿರಾನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಈ ಪ್ರಕರಣದ ನಿಖರ ಕಾರಣ ತನಿಖೆ ಪೂರ್ಣಗೊಂಡ ಬಳಿಕವೇ ಸ್ಪಷ್ಟವಾಗಬೇಕಿದೆ.
ಸೂರ್ಯಾಪೇಟೆ: ಅನೈತಿಕ ಸಂಬಂಧಕ್ಕೆ ಪತಿ ಅಡ್ಡಿಯಾಗಿದ್ದಾನೆ ಎಂಬ ಕಾರಣಕ್ಕೆ ಪತಿಯನ್ನೇ ಕೊಲೆ ಮಾಡಲು ಪತ್ನಿ ಹಾಗೂ ಆಕೆಯ ಕುಟುಂಬಸ್ಥರು ಸಂಚು…
ಸೋನ್ಭದ್ರ: ಗಂಡ ನೈಟ್ ಡ್ಯೂಟಿಗೆ ಹೋದ ಬಳಿಕ ಮಕ್ಕಳಿಗೆ ನಿದ್ರೆ ಮಾತ್ರೆ ನೀಡಿ, ಪ್ರಿಯಕರನನ್ನು ಮನೆಗೆ ಕರೆಸಿಕೊಳ್ಳುತ್ತಿದ್ದ ಪತ್ನಿ, ಕೊನೆಗೆ…
ಗೌರಿಬಿದನೂರು: ರೈಲ್ವೆ ಇಲಾಖೆಯ ಕಾಮಗಾರಿ ಕೆಲಸಕ್ಕೆ ತೆರಳುತ್ತಿದ್ದ ಕೂಲಿ ಕಾರ್ಮಿಕರಿದ್ದ ಬೊಲೆರೋ ವಾಹನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾದ…
ಹುಬ್ಬಳ್ಳಿ–ಧಾರವಾಡ: ಅವಳಿ ನಗರದಲ್ಲಿ ಮಾದಕ ವಸ್ತುಗಳ ಜಾಲವನ್ನು ಬೇರುಸಹಿತ ಕಿತ್ತುಹಾಕಲು ಹುಬ್ಬಳ್ಳಿ–ಧಾರವಾಡ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸುತ್ತಿದ್ದು, ಕಳೆದ ಮೂರು…
ಸಾಗರ: ಜಮೀನಿಗೆ ಅಕ್ರಮವಾಗಿ ವಿದ್ಯುತ್ ತಂತಿ ಅಳವಡಿಸಿ ಎರಡು ಗಂಡು ಜಿಂಕೆಗಳನ್ನು ವಿದ್ಯುತ್ ಸ್ಪರ್ಶದಿಂದ ಸಾಯಿಸಿ, ಅವುಗಳ ಮಾಂಸವನ್ನು ಜಮೀನಿನಲ್ಲೇ…
ಕುಮಟಾ: ನಗರದ ಪ್ರಸಿದ್ಧ ಕುಂಭೇಶ್ವರ ದೇವಸ್ಥಾನದ ಅರ್ಚಕ ವಿಶ್ವೇಶ್ವರ ಭಟ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರವಾರ ಜಿಲ್ಲಾ ಮತ್ತು…