Categories: CrimeLatest

ವಿವಾಹಿತೆಯೊಂದಿಗೆ ಯುವಕ ಪರಾರಿ: ಸಿಟ್ಟಿಗೆದ್ದ ಗುಂಪಿನಿಂದ ಮನೆ ಮೇಲೆ ಮಾರಣಾಂತಿಕ ದಾಳಿ

ಬೆಳಗಾವಿ ಜಿಲ್ಲೆಯಲ್ಲಿ ಪ್ರೇಮ ಪ್ರಕರಣವೊಂದು ಹಿಂಸಾತ್ಮಕ ತಿರುವು ಪಡೆದಿದ್ದು, ವಿವಾಹಿತೆಯೊಂದಿಗೆ ಯುವಕ ಓಡಿಹೋದ ಹಿನ್ನೆಲೆ ಆತನ ಮನೆಯ ಮೇಲೆ ಗುಂಪೊಂದು ದಾಳಿ ನಡೆಸಿದ ಘಟನೆ ಬೆಳಕಿಗೆ ಬಂದಿದೆ. ದಾಳಿಯಲ್ಲಿ ಯುವಕನ ತಂದೆ-ತಾಯಿಯ ಜೀವಕ್ಕೂ ಅಪಾಯ ಉಂಟಾಗಿದ್ದು, ಅವರು ಅಲ್ಪದಲ್ಲಿ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ಭರಮ್ಯಾನಟ್ಟಿ ಗ್ರಾಮದ ಯಲ್ಲಪ್ಪ ಎಂಬ ಯುವಕ, ನಾಗವ್ವ ಎಂಬ ವಿವಾಹಿತೆಯೊಂದಿಗೆ ಪ್ರೀತಿಯಲ್ಲಿ ಇದ್ದನು ಎನ್ನಲಾಗಿದೆ. ಇಬ್ಬರೂ ಎರಡು ದಿನಗಳ ಹಿಂದೆ ಊರು ಬಿಟ್ಟು ತೆರಳಿದ್ದರಿಂದ ಮಹಿಳೆಯ ಕುಟುಂಬಸ್ಥರು ಆಕ್ರೋಶಗೊಂಡಿದ್ದರು ಎಂದು ಹೇಳಲಾಗಿದೆ.

ಈ ವಿಚಾರ ತಿಳಿದ ಬಳಿಕ ಸುಮಾರು 12ಕ್ಕೂ ಹೆಚ್ಚು ಮಂದಿ ಯಲ್ಲಪ್ಪನ ಮನೆಗೆ ನುಗ್ಗಿ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ತಳವಾರ, ಜಂಬೆ, ಕುಡಗೋಲು ಹಾಗೂ ಇತರೆ ಆಯುಧಗಳೊಂದಿಗೆ ಬಂದಿದ್ದ ಗುಂಪು ಮನೆಯಲ್ಲಿದ್ದವರ ಮೇಲೆ ದಾಳಿ ಮಾಡಲು ಯತ್ನಿಸಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ದಾಳಿಯ ವೇಳೆ ಮನೆಯಲ್ಲಿದ್ದ ವಸ್ತುಗಳನ್ನು ಪುಡಿಗೈಯಲಾಗಿದ್ದು, ಟಿವಿ ಸೇರಿದಂತೆ ಹಲವು ಸಾಮಗ್ರಿಗಳು ಹಾನಿಗೊಳಗಾಗಿವೆ. ಮನೆಯ ಹಂಚುಗಳನ್ನೂ ಒಡೆದು ನಾಶಪಡಿಸಲಾಗಿದೆ ಎಂದು ತಿಳಿದುಬಂದಿದೆ. ಈ ವೇಳೆ ಯಲ್ಲಪ್ಪನ ತಂದೆ-ತಾಯಿ ಅಲ್ಲಿಂದ ತಪ್ಪಿಸಿಕೊಂಡು ಪ್ರಾಣ ಉಳಿಸಿಕೊಂಡಿದ್ದಾರೆ.

ಘಟನೆಯಿಂದ ಭಯಭೀತರಾದ ಕುಟುಂಬಸ್ಥರು ಪೊಲೀಸರ ಮೊರೆ ಹೋಗಿದ್ದು, ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

25 ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ಆರೋಪಿ ಗುಜರಾತ್‌ನಲ್ಲಿ ಬಂಧನ

ಯಲ್ಲಾಪುರ: 2001ರಲ್ಲಿ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 25 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು…

4 hours ago

ನೈಸ್ ಯೋಜನೆ ಮತ್ತೆ ಕಾವೇರಿದ ವಿವಾದ: ಸರ್ಕಾರದ ವಶಕ್ಕೆ ಪಡೆಯಲು ಜೆಡಿಎಸ್ ಒತ್ತಾಯ

ಬೆಂಗಳೂರು–ಮೈಸೂರು ಸಂಪರ್ಕವನ್ನು ಸುಧಾರಿಸುವುದು ಹಾಗೂ ಬೆಂಗಳೂರಿನ ಸಂಚಾರ ದಟ್ಟಣೆ ಕಡಿಮೆ ಮಾಡುವ ಉದ್ದೇಶದಿಂದ ರೂಪುಗೊಂಡಿದ್ದ ಬೆಂಗಳೂರು–ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ (BMICP)…

5 hours ago

ಲೀಲಾ ದೂರವಾದ ಕೋಪ: ಮನೆಗೆ ನುಗ್ಗಿ ತಾಯಿಯ ಮೇಲೆ ಸೈಕಲ್ ಎತ್ತಿ ಹಾಕಿದ ಮಂಜ!

ಬೆಂಗಳೂರು: ಹುಳಿಮಾವು ಸಮೀಪದ ಬಸವನಪುರದಲ್ಲಿ ಲೀಲಾ-ಮಂಜ-ಸಂತು ನಡುವಿನ ತ್ರಿಕೋನ ಪ್ರೇಮಕಥೆ ಮತ್ತೆ ಸದ್ದು ಮಾಡಿದೆ. ಪತ್ನಿ ಲೀಲಾ ದೂರವಾಗಿದ್ದಾಳೆ ಎಂಬ…

1 day ago

ಮದುವೆಯ ಆಸೆ ತೋರಿಸಿ ಯುವತಿಯೊಂದಿಗೆ ದೈಹಿಕ ಸಂಪರ್ಕ, ₹10 ಸಾವಿರ ಕಳುಹಿಸಿ ಕೈ ತೊಳೆದುಕೊಳ್ಳಲು ಮುಂದಾದ SI ವಿರುದ್ಧ ಕೇಸ್!

ಮೀರತ್: ರಕ್ಷಣೆ ನೀಡಬೇಕಾದ ಪೊಲೀಸನೇ ಯುವತಿಯೊಬ್ಬಳಿಗೆ ವಂಚನೆ ಎಸಗಿದ ಆರೋಪ ಉತ್ತರ ಪ್ರದೇಶದ ಮೀರತ್‌ನಲ್ಲಿ ಕೇಳಿಬಂದಿದೆ. ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ…

1 day ago

ಪ್ರೀತಿಯ ಹೆಸರಲ್ಲಿ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ: ಯುವತಿ ಆತ್ಮಹತ್ಯೆ; ಪ್ರಿಯಕರನ ವಿರುದ್ಧ ಕೇಸ್

ಬೆಂಗಳೂರು: ಪ್ರೀತಿಯ ಹೆಸರಿನಲ್ಲಿ ಯುವತಿಗೆ ನಿರಂತರ ಕಿರುಕುಳ ನೀಡಿ, ಖಾಸಗಿ ಫೋಟೋ-ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ ಆರೋಪ…

1 day ago

ಪತಿ-ಪ್ರೇಮಿ ಇಬ್ಬರ ಜತೆಗೂ ಸಂಸಾರಕ್ಕೆ ಅನುಮತಿ ಕೊಡಿ! ಪೊಲೀಸರ ಮುಂದೆ ಮಹಿಳೆಯ ವಿಚಿತ್ರ ಬೇಡಿಕೆ

ಸೀತಾಪುರ: ಪೊಲೀಸ್ ಠಾಣೆಗಳಿಗೆ ಪ್ರತಿದಿನ ಹಲವು ರೀತಿಯ ದೂರುಗಳು ಬರುತ್ತವೆ. ಆದರೆ ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯ ಮಹಮೂದಾಬಾದ್ ಕೊತ್ವಾಲಿ…

1 day ago