ಬೆಂಗಳೂರು: ಸಾರ್ವಜನಿಕರ ಜೀವಕ್ಕೆ ಅಪಾಯ ಉಂಟುಮಾಡುವ ರೀತಿಯಲ್ಲಿ ರಸ್ತೆ ಮೇಲೆ ಅಪಾಯಕಾರಿಯಾಗಿ ವ್ಹೀಲಿಂಗ್ ಮಾಡಿದ ಯುವಕನನ್ನು ಪೊಲೀಸರು ಬಂಧಿಸಿರುವ ಘಟನೆ ಮಾಗಡಿ ರಸ್ತೆಯಲ್ಲಿ ನಡೆದಿದೆ.
ಬಂಧಿತನನ್ನು ಮೊಹಮ್ಮದ್ ಅಸ್ಲಾಂ ಎಂದು ಗುರುತಿಸಲಾಗಿದ್ದು, ವೆಸ್ಟ್ ಆಪ್ ಕಾರ್ಡ್ ರಸ್ತೆ ಹಾಗೂ ಮಾಗಡಿ ಮೈನ್ ರಸ್ತೆಯಲ್ಲಿ ಸ್ಕೂಟರ್ನಲ್ಲಿ ವ್ಹೀಲಿಂಗ್ ಮಾಡುವ ಮೂಲಕ ಆತಂಕದ ವಾತಾವರಣ ಸೃಷ್ಟಿಸಿದ್ದಾನೆ. ಅಸ್ಲಾಂನ ಹಂಗಾಮಿಯಿಂದ ಸಾರ್ವಜನಿಕರು ಭೀತಿಗೊಳಗಾಗಿದ್ದರು ಎನ್ನಲಾಗಿದೆ.
ಆರೋಪಿ ನಡೆಸಿದ ಈ ಸಾಹಸವನ್ನು ಗಮನದಲ್ಲಿಟ್ಟುಕೊಂಡು ಸಂಚಾರ ಪೊಲೀಸ್ ಇಲಾಖೆ ತ್ವರಿತ ಕ್ರಮ ಕೈಗೊಂಡಿದ್ದು, ಆರೋಪಿಯನ್ನು ವಶಕ್ಕೆ ಪಡೆದು, ಅವನು ಬಳಸುತ್ತಿದ್ದ ಸ್ಕೂಟರ್ನ್ನು ಜಪ್ತಿ ಮಾಡಲಾಗಿದೆ.
ಈ ಸಂಬಂಧ ಮಾಗಡಿ ರಸ್ತೆ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ಕ್ರಮ ಜರುಗುತ್ತಿದೆ. ಸಾರ್ವಜನಿಕರ ಸುರಕ್ಷತೆಗಾಗಿ ಈ ರೀತಿಯ ಕೃತ್ಯಗಳಿಗೆ ಯಾವುದೇ ಸಹಿಷ್ಣುತೆ ಇರುವುದಿಲ್ಲ ಎಂಬ ಸ್ಪಷ್ಟ ಸಂದೇಶವನ್ನು ಪೊಲೀಸರು ನೀಡಿದ್ದಾರೆ.
ಮಂಡ್ಯ: ಜಿಲ್ಲೆಯ ಮದ್ದೂರು ಪಟ್ಟಣದ ಹಳೆಯ ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಇತ್ತೀಚೆಗೆ ಕಳ್ಳತನದ ಘಟನೆ ನಡೆದಿದೆ. ತಡರಾತ್ರಿ ವೇಳೆ ಖದೀಮರು ರಸ್ತೆ…
ಬೆಂಗಳೂರು ನಗರದ ವಿಶ್ವೇಶ್ವರಯ್ಯ ಲೇಔಟ್ನಲ್ಲಿ ಶನಿವಾರ ಮಧ್ಯಾಹ್ನ ನಾಪತ್ತೆಯಾಗಿದ್ದ ಆರು ವರ್ಷದ ಮಗು ಪ್ರಕರಣವನ್ನು 24 ಗಂಟೆಗಳಲ್ಲಿ ಬಗೆಹರಿಸಿದ ಮಹತ್ತರ…
ಶಿವಾಪೂರ (ವಿಜಯಪುರ ಜಿಲ್ಲೆ): ಅಡವಿಸಿದ್ದೇಶ್ವರ ಮಠದ ಪೀಠಾಧಿಪತಿ ಅಡವಿಸಿದ್ದರಾಮ ಸ್ವಾಮೀಜಿಗೆ ಅಕ್ರಮ ಸಂಬಂಧದ ಆರೋಪ ಎದುರಾಗಿ, ಇಡೀ ಗ್ರಾಮಸ್ಥರ ಆಕ್ರೋಶಕ್ಕೆ…
ಧಾರವಾಡ ಜಿಲ್ಲೆ ಕುಂದಗೋಳ ತಾಲ್ಲೂಕಿನ ಯರಿನಾರಾಯಣಪುರ ಗ್ರಾಮದಲ್ಲಿ ನಿಕಟದಲ್ಲೇ ಸಂಭವಿಸಿದ ಹೃದಯವಿದ್ರಾವಕ ಘಟನೆ – ಮೂರು ವರ್ಷದ ಅವಳಿ ಜವಳಿ…
ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ವೈಎಸ್ಆರ್ ಕಾಂಗ್ರೆಸ್ ಪಕ್ಷದ ನಾಯಕ ವೈಎಸ್ ಜಗನ್ ಮೋಹನ್ ರೆಡ್ಡಿ ಅವರ ಭೇಟಿ ವೇಳೆ…
ಕಲಬುರ್ಗಿ ಜಿಲ್ಲೆ ಆಳಂದ್ ಶಾಸಕ ಬಿ.ಆರ್. ಪಾಟೀಲ್ ವಿರುದ್ಧ ಗಂಭೀರ ಆರೋಪ ಹೊರಿಸಿ, ಮಾಜಿ ಶಾಸಕ ಸುಭಾಷ್ ಗುತ್ತೇದಾರ ಮಾಧ್ಯಮಗಳ…