Categories: CrimeLatest

ಪ್ರೇಮ ವೈಫಲ್ಯದಿಂದ ಯುವಕನ ಆತ್ಮಹತ್ಯೆ: ವಾಟ್ಸಪ್ ಚಾಟ್‌ಗಳಿಂದ ಶಾಕ್ ನೀಡಿದ ಸತ್ಯ ಬಯಲು

ಹಲವಾರು ವರ್ಷಗಳಿಂದ ಪ್ರೀತಿಸುತ್ತಿದ್ದ ಯುವತಿ ದೂರವಾದ ಹಿನ್ನೆಲೆಯಲ್ಲಿ ಮನನೊಂದು ಯುವಕ ಆತ್ಮಹತ್ಯೆ ಮಾಡಿಕೊಂಡ ದುರ್ಘಟನೆ ನಡೆದಿದೆ. ಮೃತ ಯುವಕನನ್ನು ಮೂಡುಶೆಡ್ಡೆ ಎದುರುಪದವು ನಿವಾಸಿ ಮಹಮ್ಮದ್ ಆಶಿಕ್ (22) ಎಂದು ಗುರುತಿಸಲಾಗಿದೆ. ಈ ಘಟನೆ ಮಾರ್ಚ್ 21ರಂದು ನಡೆದಿದೆ.

ಆಶಿಕ್ ತನ್ನ ಕಾಲೇಜಿನ ಸಹಪಾಠಿಯಾಗಿದ್ದ ಯುವತಿಯನ್ನು ಪ್ರೀತಿಸುತ್ತಿದ್ದು, ಇಬ್ಬರೂ ಹಲವು ಕಡೆ ಒಟ್ಟಿಗೆ ಸಂಚರಿಸುತ್ತಿದ್ದರು. ಪದವಿ ಪೂರ್ಣಗೊಳಿಸಿದ ನಂತರ ಆಶಿಕ್ ಅಕೌಂಟೆಂಟ್ ಆಗಿ ಕೆಲಸ ಮಾಡುತ್ತಿದ್ದ. ಆದರೆ ಇತ್ತೀಚಿನ ದಿನಗಳಲ್ಲಿ ಪ್ರೇಯಸಿ ಆತನಿಂದ ದೂರವಾಗತೊಡಗಿದ್ದರಿಂದ, ಆಶಿಕ್ ಮಾನಸಿಕವಾಗಿ ಕುಗ್ಗಿದ್ದನು. ಈ ವಿಷಯಕ್ಕೆ ಸಂಬಂಧಿಸಿದಂತೆ ಇಬ್ಬರ ಮಧ್ಯೆ ಕಲಹವೂ ಉಂಟಾಗಿತ್ತು.

ಈ ಹಿನ್ನೆಲೆದಲ್ಲಿ, ಪ್ರೇಯಸಿಯೊಂದಿಗೆ ನಡೆದ ಜಗಳದ ಬಳಿಕ ಆಶಿಕ್ ಆತ್ಮಹತ್ಯೆಗೆ ಶರಣಾಗಿರುವುದು ತಿಳಿದು ಬಂದಿದೆ.

ಇನ್ನೂ, ಆಶಿಕ್ ಸಾವಿನ ಹಿಂದಿನ ಕಾರಣಗಳನ್ನು ಪರಿಶೀಲಿಸಿದಾಗ ವಾಟ್ಸಪ್ ಚಾಟಿಂಗ್‌ಗಳು ಹಲವು ಅಚ್ಚರಿಯ ಸಂಗತಿಗಳನ್ನು ಹೊರಹಾಕಿವೆ. ಕಾಸರಗೋಡಿನ ಯುವತಿಯನ್ನು ಪ್ರೀತಿಸುತ್ತಿದ್ದ ಆಶಿಕ್, ಆಕೆಯೊಂದಿಗೆ ಆತ್ಮಹತ್ಯೆಗೆ ಮುನ್ನ ವಿಡಿಯೋ ಕಾಲ್ ಹಾಗೂ ಚಾಟ್ ನಡೆಸಿದ್ದಾನೆ ಎಂಬುದು ಪತ್ತೆಯಾಗಿದೆ. ಈ ವೇಳೆ ಯುವತಿ ಅಸಭ್ಯವಾಗಿ ಮಾತನಾಡಿದ್ದು ಮಾತ್ರವಲ್ಲದೆ, ಆತ್ಮಹತ್ಯೆಗೆ ಪ್ರಚೋದನೆ ನೀಡಿರುವುದಾಗಿ ಮೊಬೈಲ್ ಚಾಟಿಂಗ್‌ನಲ್ಲಿ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾವೂರು ಪೊಲೀಸ್ ಠಾಣೆಯಲ್ಲಿ ಯುವತಿ, ಆಕೆಯ ತಾಯಿ ಹಾಗೂ ಮತ್ತೊಬ್ಬ ಅಪರಿಚಿತ ವ್ಯಕ್ತಿ ವಿರುದ್ಧ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆಯನ್ನು ಮುಂದುವರಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

ಜಮೀನಿಗೆ ಹೋದ ಮಹಿಳೆ ನಿಗೂಢ ನಾಪತ್ತೆ: ಸ್ಥಳದಲ್ಲಿ ಕೃತಕ ಚಿರತೆ ಹೆಜ್ಜೆ ಗುರುತು ಪತ್ತೆ, ಗ್ರಾಮದಲ್ಲಿ ಆತಂಕ

ನಂಜನಗೂಡು: ಜಮೀನಿಗೆ ತೆರಳಿದ್ದ 63 ವರ್ಷದ ಮಹಿಳೆಯೊಬ್ಬರು ನಿಗೂಢವಾಗಿ ನಾಪತ್ತೆಯಾಗಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಕಸುವಿನಹಳ್ಳಿ ಗ್ರಾಮದಲ್ಲಿ…

15 hours ago

ಭೀಮಾತೀರದಲ್ಲಿ ರಕ್ತದೋಕುಳಿ: ಒಂದೇ ಕುಟುಂಬದ 5 ಮಂದಿ ಸೇರಿ 6 ಜನರ ಹತ್ಯೆ; 10 ಆರೋಪಿಗಳ ಬಂಧನ

ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಗೋವಿಂದಪುರ ಗ್ರಾಮದಲ್ಲಿ ನಡೆದ ಭೀಕರ ಹತ್ಯಾಕಾಂಡ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಒಂದೇ ಕುಟುಂಬದ ಐದು…

17 hours ago

ಆರ್‌ಸಿಬಿ ಅಭಿಮಾನಿಯ ವಿಕೃತಿ: ಹೈದರಾಬಾದ್ ಬೆಂಬಲಿಸಿದ್ದ ಯುವತಿಗೆ ರೇಪ್ ಬೆದರಿಕೆ, ಸೈಬರ್ ಕ್ರೈಂನಲ್ಲಿ ಪ್ರಕರಣ!

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ ಟೂರ್ನಿ ಅಂತಿಮ ಹಂತ ತಲುಪಿದ್ದು, ನಾಳೆ ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ…

1 day ago

34 ವರ್ಷಗಳ ಬಳಿಕ ರವಿಚಂದ್ರನ್ ಬಳಿ ಕಣ್ಣೀರಿಟ್ಟು ಕ್ಷಮೆ ಕೇಳಿದ ನಟಿ ಬಿಂದಿಯಾ; “ರವಿ ಸರ್ ಯಾವುದೇ ತಪ್ಪು ಮಾಡಿರಲಿಲ್ಲ”

ಕನ್ನಡ ಚಿತ್ರರಂಗದ ಖ್ಯಾತ ನಟ ಕ್ರೇಜಿಸ್ಟಾರ್ ರವಿಚಂದ್ರನ್ ವಿರುದ್ಧ ಮೂರು ದಶಕಗಳ ಹಿಂದೆ ಗಂಭೀರ ಆರೋಪ ಮಾಡಿದ್ದ ನಟಿ ಬಿಂದಿಯಾ,…

1 day ago

ಭೀಮಾತೀರದಲ್ಲಿ ಭೀಕರ ಹತ್ಯಾಕಾಂಡ: 25 ಎಕರೆ ಜಮೀನು ಜಗಳಕ್ಕೆ ಒಂದೇ ಕುಟುಂಬದ 6 ಮಂದಿಯ ಹತ್ಯೆ

ಭೀಮಾತೀರ ಪ್ರದೇಶ ಮತ್ತೆ ರಕ್ತದ ಮಡುವಾಗಿ ಮಾರ್ಪಟ್ಟಿದೆ. ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಗೋವಿಂದಪುರ ಗ್ರಾಮದಲ್ಲಿ ನಡೆದ ಭೀಕರ ಹತ್ಯಾಕಾಂಡ…

2 days ago

ಡಿಕೆ ಶಿವಕುಮಾರ್ ಸಿಎಂ ಪಟ್ಟಾಭಿಷೇಕಕ್ಕೆ ಸಜ್ಜು: ಸೋಮವಾರ ಪ್ರಮಾಣ ವಚನ, ಹೊಸ ಸಚಿವರ ಪಟ್ಟಿ ಫೈನಲ್?

ರಾಜ್ಯದ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿದ್ದು, ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ ಬಳಿಕ ಕಾಂಗ್ರೆಸ್ ಸರ್ಕಾರದಲ್ಲಿ ನಾಯಕತ್ವ ಬದಲಾವಣೆ…

2 days ago