Latest

ಪ್ರಧಾನಿ ಆಗಮನದ ವೇಳೆ ಯುವಕ ಬ್ಯಾರಿಕೇಡ್ ಜಂಪ್ – ಕ್ಷಣಿಕ ಆತಂಕ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಇಂದು ನಗರದ ಮೆಟ್ರೋ ಮೂರನೇ ಹಂತ ಹಾಗೂ ವಂದೇ ಭಾರತ್ ರೈಲು ಸೇವೆಗಳಿಗೆ ಹಸಿರು ನಿಶಾನೆ ತೋರಿಸಿ ಉದ್ಘಾಟನೆ ನೆರವೇರಿಸಿದರು. ಈ ವೇಳೆ, ಭದ್ರತಾ ವಲಯದಲ್ಲಿ ಒಂದು ಅಸಹಜ ಘಟನೆ ನಡೆದು ಕೆಲ ಕ್ಷಣ ಗೊಂದಲ ಉಂಟಾಯಿತು.

ಸೌತ್ ಎಂಡ್ ಸರ್ಕಲ್ ಬಳಿ ಪ್ರಧಾನಿಯ ವಾಹನದ ಪಥಸಂಚಲನ ಸಾಗುತ್ತಿರುವ ಸಮಯದಲ್ಲಿ, ಯುವಕನೊಬ್ಬ ಅಕಸ್ಮಾತ್ ಬ್ಯಾರಿಕೇಡ್ ಹಾರಿ ರಸ್ತೆಯತ್ತ ಓಡುವ ಪ್ರಯತ್ನ ಮಾಡಿದ. ಸ್ಥಳದಲ್ಲಿದ್ದ ಪೊಲೀಸರು ತಕ್ಷಣವೇ ಎಚ್ಚರಗೊಂಡು ಅವನನ್ನು ತಡೆದರು.

ಘಟನೆ ಸಂಭವಿಸುವ ವೇಳೆಗೆ ಪ್ರಧಾನಿಯ ವಾಹನ ಅಲ್ಲಿತೆರಳಿತ್ತು. ಆದರೆ, ಪ್ರಧಾನಿಯ ಆಗಮನದ ಸಮಯಕ್ಕೆ ಸಮೀಪವೇ ನಡೆದ ಈ ಘಟನೆ ಸ್ಥಳದಲ್ಲಿ ಕ್ಷಣಿಕ ಆತಂಕವನ್ನು ಉಂಟುಮಾಡಿತು. ಪೊಲೀಸರು ಯುವಕನನ್ನು ವಿಚಾರಣೆಗಾಗಿ ಕಸ್ಟಡಿಗೆ ತೆಗೆದುಕೊಂಡಿದ್ದು, ಅವನು ಬ್ಯಾರಿಕೇಡ್ ಹಾರಿ ಹೋಗಲು ಯತ್ನಿಸಿದ ಕಾರಣವನ್ನು ತಿಳಿಯಲು ತನಿಖೆ ಮುಂದುವರಿಸಿದ್ದಾರೆ.

nazeer ahamad

Recent Posts

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

9 hours ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

9 hours ago

ಹುಬ್ಬಳ್ಳಿ–ಅಂಕೋಲಾ ರೈಲ್ವೆ ಯೋಜನೆಗೆ ಭೂಸ್ವಾಧೀನ ಅಧಿಕೃತ ಚಾಲನೆ

163 ಕಿ.ಮೀ. ಉದ್ದದ ಯೋಜನೆ; ಉತ್ತರ ಕನ್ನಡದ 40 ಗ್ರಾಮಗಳು ಭೂಸ್ವಾಧೀನ ವ್ಯಾಪ್ತಿಗೆ ಉತ್ತರ ಕನ್ನಡ: ಹಲವು ವರ್ಷಗಳಿಂದ ನನೆಗುದಿಗೆ…

9 hours ago

ಪಾಂಡೆಗಾಂವ–ಕಂಗೋಳಿ ರಸ್ತೆ ಕೆಸರಿನ ಹೊಂಡ: ಜನರ ಆಕ್ರೋಶ, ಕಾಮಗಾರಿ ವಿಳಂಬವಾದರೆ ರಸ್ತೆ ತಡೆ ಎಚ್ಚರಿಕೆ

ಮಳೆ ಬಂದರೆ ಕೆಸರುಗದ್ದೆ; ವಿದ್ಯಾರ್ಥಿಗಳು, ವೃದ್ಧರು, ರೋಗಿಗಳ ಸಂಚಾರಕ್ಕೆ ಸಂಕಷ್ಟ — ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ ಕಾಗವಾಡ: ಬೆಳಗಾವಿ…

9 hours ago

ಜಾತ್ರೆಯಲ್ಲಿ ಮಹಿಳೆಯ ಮಂಗಳಸೂತ್ರ ಕಳವು: ಮೂವರು ಆರೋಪಿಗಳ ಬಂಧನ

₹4.50 ಲಕ್ಷ ಮೌಲ್ಯದ ಚಿನ್ನ, ಕೃತ್ಯಕ್ಕೆ ಬಳಸಿದ್ದ ಬೈಕ್ ವಶ ಹಳಿಯಾಳ: ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ…

1 day ago

ಬೈಕ್‌ನಲ್ಲಿ ಕರೆದೊಯ್ದು ಹಣ ಕಸಿದು ಜೀವ ಬೆದರಿಕೆ: 24 ಗಂಟೆಯಲ್ಲೇ ಆರೋಪಿ ಬಂಧನ

ಸಿಸಿಟಿವಿ ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಯ ಪತ್ತೆ; ಬೈಕ್, ಹಣ ವಶ ಹೊನ್ನಾವರ: ಬ್ಯಾಂಕ್‌ನಿಂದ ಹಣ ಪಡೆದು ಹೊರಬಂದ…

1 day ago