ನಾಸಿಕ್: ಪ್ರೀತಿಯ ಹೆಸರಿನಲ್ಲಿ ನಡೆಯುವ ಉನ್ಮಾದಕ್ಕೆ ಮತ್ತೊಂದು ಯುವತಿ ಬಲಿಯಾಗಿರುವ ಘಟನೆ ಮಹಾರಾಷ್ಟ್ರದ ನಾಸಿಕ್ನಲ್ಲಿ ನಡೆದಿದೆ. ಮಾಜಿ ಪ್ರೇಯಸಿ ಬೇರೊಬ್ಬ ಯುವಕನೊಂದಿಗೆ ಮದುವೆಯಾಗಲಿರುವ ವಿಚಾರದಿಂದ ಆಕ್ರೋಶಗೊಂಡಿದ್ದ ಯುವಕ, ಆಕೆಯನ್ನು ಚಾಕುವಿನಿಂದ ಬರ್ಬರವಾಗಿ ಹತ್ಯೆಗೈದು, ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮೃತ ಯುವತಿಯನ್ನು ಅಮರಾವತಿ ಜಿಲ್ಲೆಯ ವೈಷ್ಣವಿ ಎಂದು ಗುರುತಿಸಲಾಗಿದ್ದು, ಆರೋಪಿ ಆಕೆಯ ಮಾಜಿ ಪ್ರಿಯತಮ ಸಾಹಿಲ್ ಲವ್ಹಾರೆ ಎಂದು ಪೊಲೀಸರು ತಿಳಿಸಿದ್ದಾರೆ. ವೈಷ್ಣವಿಗೆ ಇತ್ತೀಚೆಗೆ ಮತ್ತೊಬ್ಬ ಯುವಕನೊಂದಿಗೆ ನಿಶ್ಚಿತಾರ್ಥವಾಗಿತ್ತು. ಇದರಿಂದ ಅಸಮಾಧಾನಗೊಂಡಿದ್ದ ಸಾಹಿಲ್, ಶುಕ್ರವಾರ ರಾತ್ರಿ ನಾಸಿಕ್ನ ಇಂದಿರಾನಗರದ ವನಸಂಪದ ಗಾರ್ಡನ್ ಬಳಿ ವೈಷ್ಣವಿಯನ್ನು ಭೇಟಿಯಾಗಿದ್ದಾನೆ.
ಘಟನೆಯ ವೇಳೆ ವೈಷ್ಣವಿ ತನ್ನ ಭಾವಿ ಪತಿಗೆ ಕರೆ ಮಾಡಿ, “ಸಾಹಿಲ್ ಇಲ್ಲಿದ್ದಾನೆ, ಬೇಗ ಬನ್ನಿ” ಎಂದು ಆತಂಕ ವ್ಯಕ್ತಪಡಿಸಿದ್ದಳು. ಸುಮಾರು 22 ನಿಮಿಷಗಳ ಕಾಲ ಕರೆ ಸಂಪರ್ಕದಲ್ಲೇ ಇತ್ತು. ಈ ವೇಳೆ ಸಾಹಿಲ್ ಮತ್ತು ವೈಷ್ಣವಿ ನಡುವೆ ನಡೆದ ತೀವ್ರ ವಾಗ್ವಾದವನ್ನು ಆಕೆಯ ಭಾವಿ ಪತಿ ಫೋನ್ ಮೂಲಕವೇ ಕೇಳುತ್ತಾ ಸ್ಥಳಕ್ಕೆ ಧಾವಿಸುತ್ತಿದ್ದರು. ಆದರೆ, ಅವರು ತಲುಪುವ ಮುನ್ನವೇ ಸಾಹಿಲ್ ವೈಷ್ಣವಿಯ ಮೇಲೆ ಚಾಕುವಿನಿಂದ ಹಲವು ಬಾರಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ವೈಷ್ಣವಿಯನ್ನು ಕೊಂದ ಬಳಿಕ ಸಾಹಿಲ್, ಆಕೆಯ ಭಾವಿ ಪತಿಗೆ ಕರೆ ಮಾಡಿ, “ವೈಶು ಕಥೆ ಮುಗಿಯಿತು” ಎಂದು ಹೇಳಿ ಕರೆ ಸ್ಥಗಿತಗೊಳಿಸಿದ್ದಾನೆ ಎನ್ನಲಾಗಿದೆ. ಸ್ಥಳಕ್ಕೆ ಆಗಮಿಸಿದಾಗ ವೈಷ್ಣವಿ ರಕ್ತದ ಮಡುವಿನಲ್ಲಿ ಬಿದ್ದಿದ್ದು, ಆಗಲೇ ಮೃತಪಟ್ಟಿದ್ದಳು.
ಕೆಲವು ಗಂಟೆಗಳ ಬಳಿಕ ಘಟನಾ ಸ್ಥಳದಿಂದ ಸುಮಾರು ಎರಡು ಕಿಲೋಮೀಟರ್ ದೂರದಲ್ಲಿ ಸಾಹಿಲ್ ಮೃತದೇಹ ಮರವೊಂದಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕೊಲೆ ನಡೆಸಿದ ಬಳಿಕ ಆತ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದೆ ಎಂದು ಪೊಲೀಸರು ಶಂಕಿಸಿದ್ದಾರೆ.
ಈ ನಡುವೆ, ವೈಷ್ಣವಿಯ ಮದುವೆ ನಿಶ್ಚಯವಾಗಿರುವ ಮಾಹಿತಿ ಸಾಹಿಲ್ಗೆ ಹೇಗೆ ತಿಳಿಯಿತು ಹಾಗೂ ಈ ವಿಷಯವನ್ನು ಆತನಿಗೆ ಯಾರು ತಿಳಿಸಿದ್ದರು ಎಂಬ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಈ ದುರ್ಘಟನೆಯು ಅತಿರೇಕದ ಪ್ರೀತಿಯ ಪರಿಣಾಮವಾಗಿ ಎರಡು ಜೀವಗಳನ್ನು ಬಲಿ ಪಡೆದಿದ್ದು, ನಾಸಿಕ್ನಲ್ಲಿ ಆತಂಕಕ್ಕೆ ಕಾರಣವಾಗಿದೆ.
ಸೂರ್ಯಾಪೇಟೆ: ಅನೈತಿಕ ಸಂಬಂಧಕ್ಕೆ ಪತಿ ಅಡ್ಡಿಯಾಗಿದ್ದಾನೆ ಎಂಬ ಕಾರಣಕ್ಕೆ ಪತಿಯನ್ನೇ ಕೊಲೆ ಮಾಡಲು ಪತ್ನಿ ಹಾಗೂ ಆಕೆಯ ಕುಟುಂಬಸ್ಥರು ಸಂಚು…
ಸೋನ್ಭದ್ರ: ಗಂಡ ನೈಟ್ ಡ್ಯೂಟಿಗೆ ಹೋದ ಬಳಿಕ ಮಕ್ಕಳಿಗೆ ನಿದ್ರೆ ಮಾತ್ರೆ ನೀಡಿ, ಪ್ರಿಯಕರನನ್ನು ಮನೆಗೆ ಕರೆಸಿಕೊಳ್ಳುತ್ತಿದ್ದ ಪತ್ನಿ, ಕೊನೆಗೆ…
ಗೌರಿಬಿದನೂರು: ರೈಲ್ವೆ ಇಲಾಖೆಯ ಕಾಮಗಾರಿ ಕೆಲಸಕ್ಕೆ ತೆರಳುತ್ತಿದ್ದ ಕೂಲಿ ಕಾರ್ಮಿಕರಿದ್ದ ಬೊಲೆರೋ ವಾಹನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾದ…
ಹುಬ್ಬಳ್ಳಿ–ಧಾರವಾಡ: ಅವಳಿ ನಗರದಲ್ಲಿ ಮಾದಕ ವಸ್ತುಗಳ ಜಾಲವನ್ನು ಬೇರುಸಹಿತ ಕಿತ್ತುಹಾಕಲು ಹುಬ್ಬಳ್ಳಿ–ಧಾರವಾಡ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸುತ್ತಿದ್ದು, ಕಳೆದ ಮೂರು…
ಸಾಗರ: ಜಮೀನಿಗೆ ಅಕ್ರಮವಾಗಿ ವಿದ್ಯುತ್ ತಂತಿ ಅಳವಡಿಸಿ ಎರಡು ಗಂಡು ಜಿಂಕೆಗಳನ್ನು ವಿದ್ಯುತ್ ಸ್ಪರ್ಶದಿಂದ ಸಾಯಿಸಿ, ಅವುಗಳ ಮಾಂಸವನ್ನು ಜಮೀನಿನಲ್ಲೇ…
ಕುಮಟಾ: ನಗರದ ಪ್ರಸಿದ್ಧ ಕುಂಭೇಶ್ವರ ದೇವಸ್ಥಾನದ ಅರ್ಚಕ ವಿಶ್ವೇಶ್ವರ ಭಟ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರವಾರ ಜಿಲ್ಲಾ ಮತ್ತು…