Latest

ಇ-ಮೇಲ್ ಬಾಂಬ್ ಬೆದರಿಕೆ ಹಬ್ಬಿಸಿದ್ದ ಯುವತಿ ಅರೆಸ್ಟ್: ಉಡುಪಿಯಿಂದ ಹಿಡಿದು ದೇಶದಾದ್ಯಂತ ತೀವ್ರ ಆತಂಕ ಸೃಷ್ಟಿಸಿದ್ದೆ

ಉಡುಪಿ: ನಿರಂತರವಾಗಿ ಶಾಲೆಗಳು, ಆಸ್ಪತ್ರೆಗಳು ಮತ್ತು ವಿಮಾನ ನಿಲ್ದಾಣಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಕಳಿಸಿ ಅಧಿಕಾರಿಗಳನ್ನು ತಕ್ಷಣ ಎಚ್ಚರಿಕೆಮಾಡುತ್ತಿದ್ದ ಗುಪ್ತ ವ್ಯಕ್ತಿತ್ವದ ಮಹಿಳೆ ಕೈದಾಗಿದ್ದಾಳೆ. ಹಲವು ದಿನಗಳ ಶೋಧನೆಯ ನಂತರ ಪೊಲೀಸರು ಕೊನೆಗೂ ಈ ವಿಚಾರದಲ್ಲಿ ಮಹತ್ವದ ತಿರುವು ತಂದಿದ್ದಾರೆ.

ಬಂಧಿತೆಯು ಚೆನ್ನೈ ಮೂಲದ ರೀನಾ ಜೋಶಿಲ್ಡ್ ಎಂಬಾತಿ ಎಂದು ಗುರುತಿಸಲಾಗಿದೆ. ಇಂಜಿನಿಯರಿಂಗ್ ವ್ಯಾಸಂಗ ಮಾಡಿದ ಈಕೆ, ದೇಶದ ಹಲವೆಡೆ ಬೆದರಿಕೆ ಸಂದೇಶ ಕಳಿಸುತ್ತಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಇತ್ತೀಚೆಗೆ ಜೂನ್ 16ರಂದು ಉಡುಪಿ ನಗರದ ವಿದ್ಯೋದಯ ಪಬ್ಲಿಕ್‌ ಸ್ಕೂಲ್‌ಗೆ ಇ-ಮೇಲ್ ಮೂಲಕ ಬಾಂಬ್ ಅಳವಡಿಸಲಾಗಿದೆ ಎಂಬ ಕುಟಿಲ ಸಂದೇಶ ಕಳುಹಿಸಿದ್ದಳು. ಈ ಸಂದೇಶದಿಂದ ಪಠಶಾಲೆಯಲ್ಲಿ ಆತಂಕದ ಪರಿಸ್ಥಿತಿ ಉಂಟಾಗಿ, ತುರ್ತು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕಾಯಿತು.

ಅಹಮದಾಬಾದ್‌ನ ಗೂಢಚರ್ಯಾ ತಂಡ ಹಾಗೂ ಸ್ಥಳೀಯ ಪೊಲೀಸರು ಸಹಕಾರದೊಂದಿಗೆ ಹುಡುಕಾಟ ನಡೆಸಿದ ಬಳಿಕ ಈಕೆಯನ್ನು ಬಂಧಿಸಲಾಗಿದೆ. ಪತ್ತೆಯಾಗಿರುವ ಮಾಹಿತಿಗಳ ಪ್ರಕಾರ, ಈಕೆಯ ವಿರುದ್ಧ ದೇಶದ ಅನೇಕ ನಗರಗಳಲ್ಲಿ ಇದೇ ರೀತಿಯ ಕೃತ್ಯಗಳ ಕುರಿತು ಪ್ರಕರಣಗಳು ದಾಖಲಾಗಿವೆ.

ಆದರೆ ಈಕೆ ಈ ರೀತಿ ನಕಲಿ ಬಾಂಬ್ ಬೆದರಿಕೆ ಸಂದೇಶಗಳನ್ನು ಏಕೆ ಕಳಿಸುತ್ತಿದ್ದಳು ಎಂಬುದರ ಬಗ್ಗೆ ಇನ್ನೂ ಸ್ಪಷ್ಟತೆ ಬಂದಿಲ್ಲ. ತನಿಖೆಯ ನಂತರವೇ ಆತನ ಉದ್ದೇಶ ಸ್ಪಷ್ಟವಾಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಪ್ರಕರಣವು ಇ-ಮೇಲ್ ಮತ್ತು ಡಿಜಿಟಲ್ ಬೆದರಿಕೆಗಳ ಬಗ್ಗೆ ಸೈಬರ್ ಸೆಕ್ಯುರಿಟಿಯ ಮಹತ್ವವನ್ನು ಮತ್ತೊಮ್ಮೆ ಹೈಲೈಟ್ ಮಾಡಿದೆ.

nazeer ahamad

Recent Posts

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

10 hours ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

10 hours ago

ಹುಬ್ಬಳ್ಳಿ–ಅಂಕೋಲಾ ರೈಲ್ವೆ ಯೋಜನೆಗೆ ಭೂಸ್ವಾಧೀನ ಅಧಿಕೃತ ಚಾಲನೆ

163 ಕಿ.ಮೀ. ಉದ್ದದ ಯೋಜನೆ; ಉತ್ತರ ಕನ್ನಡದ 40 ಗ್ರಾಮಗಳು ಭೂಸ್ವಾಧೀನ ವ್ಯಾಪ್ತಿಗೆ ಉತ್ತರ ಕನ್ನಡ: ಹಲವು ವರ್ಷಗಳಿಂದ ನನೆಗುದಿಗೆ…

10 hours ago

ಪಾಂಡೆಗಾಂವ–ಕಂಗೋಳಿ ರಸ್ತೆ ಕೆಸರಿನ ಹೊಂಡ: ಜನರ ಆಕ್ರೋಶ, ಕಾಮಗಾರಿ ವಿಳಂಬವಾದರೆ ರಸ್ತೆ ತಡೆ ಎಚ್ಚರಿಕೆ

ಮಳೆ ಬಂದರೆ ಕೆಸರುಗದ್ದೆ; ವಿದ್ಯಾರ್ಥಿಗಳು, ವೃದ್ಧರು, ರೋಗಿಗಳ ಸಂಚಾರಕ್ಕೆ ಸಂಕಷ್ಟ — ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ ಕಾಗವಾಡ: ಬೆಳಗಾವಿ…

10 hours ago

ಜಾತ್ರೆಯಲ್ಲಿ ಮಹಿಳೆಯ ಮಂಗಳಸೂತ್ರ ಕಳವು: ಮೂವರು ಆರೋಪಿಗಳ ಬಂಧನ

₹4.50 ಲಕ್ಷ ಮೌಲ್ಯದ ಚಿನ್ನ, ಕೃತ್ಯಕ್ಕೆ ಬಳಸಿದ್ದ ಬೈಕ್ ವಶ ಹಳಿಯಾಳ: ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ…

1 day ago

ಬೈಕ್‌ನಲ್ಲಿ ಕರೆದೊಯ್ದು ಹಣ ಕಸಿದು ಜೀವ ಬೆದರಿಕೆ: 24 ಗಂಟೆಯಲ್ಲೇ ಆರೋಪಿ ಬಂಧನ

ಸಿಸಿಟಿವಿ ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಯ ಪತ್ತೆ; ಬೈಕ್, ಹಣ ವಶ ಹೊನ್ನಾವರ: ಬ್ಯಾಂಕ್‌ನಿಂದ ಹಣ ಪಡೆದು ಹೊರಬಂದ…

1 day ago