ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಹಾಡುಹಗಲೇ ನಡೆದ ಭೀಕರ ಹತ್ಯೆ ಇಡೀ ಕರಾವಳಿಯನ್ನೇ ಬೆಚ್ಚಿಬೀಳಿಸಿದೆ. ಬಸ್ಗಾಗಿ ಕಾಯುತ್ತಿದ್ದ 23 ವರ್ಷದ ಯುವತಿಯ ಮೇಲೆ ದುಷ್ಕರ್ಮಿಯೊಬ್ಬ ಮಾರಕಾಸ್ತ್ರದಿಂದ ದಾಳಿ ನಡೆಸಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಮೃತ ಯುವತಿಯನ್ನು ಕಕ್ಕೆಪದವು ನಿವಾಸಿ ಲಾವಣ್ಯ ಎಂದು ಗುರುತಿಸಲಾಗಿದೆ. ಅವರು ಕಲ್ಲಡ್ಕದ ಖಾಸಗಿ ನರ್ಸಿಂಗ್ ಹೋಮ್ನಲ್ಲಿ ಕೆಲಸ ಮಾಡುತ್ತಿದ್ದರು. ಎಂದಿನಂತೆ ಕೆಲಸ ಮುಗಿಸಿ ಮನೆಗೆ ಮರಳಲು ಬಿ.ಸಿ.ರೋಡ್ ಬಸ್ ನಿಲ್ದಾಣದಲ್ಲಿ ಬಸ್ಗಾಗಿ ಕಾಯುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ.
ಪ್ರತ್ಯಕ್ಷದರ್ಶಿಗಳ ಮಾಹಿತಿ ಪ್ರಕಾರ, ಯುವಕನೊಬ್ಬ ಏಕಾಏಕಿ ಬ್ಯಾಗ್ನಿಂದ ಕತ್ತಿಯನ್ನು ಹೊರತೆಗೆದು ಲಾವಣ್ಯ ಅವರ ಮೇಲೆ ದಾಳಿ ನಡೆಸಿದ್ದಾನೆ. ಅಪಾಯ ಅರಿತ ಲಾವಣ್ಯ ಅಲ್ಲಿಂದ ಓಡಿ ತಪ್ಪಿಸಿಕೊಳ್ಳಲು ಯತ್ನಿಸಿದರೂ, ಆರೋಪಿ ಬೆನ್ನಟ್ಟಿ ಸಾರ್ವಜನಿಕರ ಎದುರೇ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾನೆ. ತೀವ್ರವಾಗಿ ಗಾಯಗೊಂಡಿದ್ದ ಲಾವಣ್ಯ ಅವರನ್ನು ತಕ್ಷಣ ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಪ್ರಾಥಮಿಕ ತನಿಖೆಯಲ್ಲಿ ಲಾವಣ್ಯ ಅವರ ದೂರದ ಸಂಬಂಧಿಯಾಗಿರುವ ಚೇತನ್ ಎಂಬಾತನೇ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ. ಏಕಮುಖ ಪ್ರೀತಿಯನ್ನು ಯುವತಿ ನಿರಾಕರಿಸಿದ್ದರಿಂದ ಈ ಕೃತ್ಯ ನಡೆದಿರಬಹುದೆಂಬ ಅನುಮಾನ ವ್ಯಕ್ತವಾಗಿದ್ದು, ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಬಂಟ್ವಾಳ ಉಪವಿಭಾಗದ ಪೊಲೀಸ್ ಅಧಿಕಾರಿಗಳು ಹಾಗೂ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತಲೆಮರೆಸಿಕೊಂಡಿರುವ ಆರೋಪಿ ಚೇತನ್ನ ಪತ್ತೆಗಾಗಿ ವಿಶೇಷ ತಂಡಗಳು ಶೋಧ ಕಾರ್ಯ ಆರಂಭಿಸಿವೆ.
ನೂರಾರು ಜನರ ಓಡಾಟವಿರುವ ಸಾರ್ವಜನಿಕ ಬಸ್ ನಿಲ್ದಾಣದಲ್ಲೇ ಹಾಡುಹಗಲೇ ನಡೆದ ಈ ಘಟನೆ ಸಾರ್ವಜನಿಕರಲ್ಲಿ ತೀವ್ರ ಆತಂಕ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ. ಮಹಿಳೆಯರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಹಾಗೂ ಆರೋಪಿಗೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂಬ ಒತ್ತಾಯ ಸಾರ್ವಜನಿಕ ವಲಯದಿಂದ ಕೇಳಿಬರುತ್ತಿದೆ.
ಆಗ್ರಾ: ತಾಯಿ-ಮಗನ ಪವಿತ್ರ ಬಾಂಧವ್ಯವನ್ನೇ ಪ್ರಶ್ನಿಸುವಂತಹ ಬೆಚ್ಚಿಬೀಳಿಸುವ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ಬೆಳಕಿಗೆ ಬಂದಿದೆ. ತವರಿಗೆ ತೆರಳಿದ್ದ ಪತ್ನಿಯನ್ನು…
ಇನ್ಸ್ಟಾಗ್ರಾಮ್ನಲ್ಲಿ ಪರಿಚಯವಾದ ವ್ಯಕ್ತಿಯ ಪ್ರೀತಿಗೆ ಮರುಳಾಗಿ ತನ್ನ ಗಂಡ ಹಾಗೂ ಇಬ್ಬರು ಮಕ್ಕಳನ್ನು ತೊರೆದು ಮನೆ ಬಿಟ್ಟು ಹೋಗಿದ್ದ ಮಹಿಳೆಯೊಬ್ಬಳು,…
ದೇವಸ್ಥಾನಕ್ಕೆ ಹೋಗುವ ನೆಪದಲ್ಲಿ ಪತಿಯನ್ನೇ ಮರಣದ ಬಲೆಗೆ ಬೀಳಿಸಿ, ವಿವಾಹೇತರ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನನ್ನು ಪ್ರಿಯಕರನೊಂದಿಗೆ ಸೇರಿ ಹತ್ಯೆ ಮಾಡಿಸಿರುವ…
ಸರಗೂರು: ಮೈಸೂರು ಜಿಲ್ಲೆಯ ಸರಗೂರು ತಾಲೂಕಿನ ಐತಿಹಾಸಿಕ ಹಾಗೂ ಧಾರ್ಮಿಕ ಮಹತ್ವದ ಶ್ರೀ ಚಿಕ್ಕದೇವಮ್ಮ ಬೆಟ್ಟದ ತಪ್ಪಲಿನಲ್ಲಿ ನಕಲಿ ದಾಖಲೆಗಳನ್ನು…
ಬಾಗಲಕೋಟೆ: ಜಿಲ್ಲೆಯ ಬೀಳಗಿ ಪಟ್ಟಣದ ಶ್ರೀ ದುರ್ಗಾದೇವಿ ಮಹಿಳಾ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯಲ್ಲಿ ನಡೆದಿರುವ ಬಹುಕೋಟಿ ವಂಚನೆ ಪ್ರಕರಣದ ತನಿಖೆಗೆ…
ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ 'ಅಮುಕು ಡುಮುಕು' ಹೆಸರಿನಿಂದ ಪರಿಚಿತರಾಗಿರುವ ಯೂಟ್ಯೂಬರ್ ಮಂಜು ವಿರುದ್ಧ ಮಹಿಳಾ ಸಿಬ್ಬಂದಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದ…