ಬೆಂಗಳೂರು: ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಸಂಭವಿಸಿದ ವೈದ್ಯರ ನಿರ್ಲಕ್ಷ್ಯದ ಘಟನೆ ಭಾರೀ ಚರ್ಚೆಗೆ ಗ್ರಾಸವಾಗಿದೆ. ಚಿಕಿತ್ಸೆಗಾಗಿ ದಾಖಲಾಗಿದ್ದ 18 ವರ್ಷದ ಯುವತಿಯೊಬ್ಬಳು ಆಪರೇಷನ್ ನಂತರ ಅಸುನೀಗಿದ್ದು, ಘಟನೆಯಿಂದ ಆಕ್ರೋಶಗೊಂಡ ಕುಟುಂಬಸ್ಥರು ಆಸ್ಪತ್ರೆ ಎದುರು ಮೃತದೇಹವನ್ನಿಟ್ಟು ಪ್ರತಿಭಟನೆ ಆರಂಭಿಸಿದ್ದಾರೆ.
ಹಾವೇರಿ ಜಿಲ್ಲೆಯ ಬ್ಯಾಡಗಿ ಪಟ್ಟಣದ ನಿವಾಸಿ ವಂದನಾ ಎಂಬ ಯುವತಿಗೆ ಕೈಯಲ್ಲಿ ಗುಳ್ಳೆಗಳು ಮೂಡಿದ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ನಗರದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಬರುವತ್ತಾಯಿತು. ತಕ್ಷಣ ವೈದ್ಯರು ಆಪರೇಷನ್ ಅಗತ್ಯವಿದೆ ಎಂದು ಸಲಹೆ ನೀಡಿದ್ದು, ವಂದನಾಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಆಪರೇಷನ್ ಮೊದಲು ವೈದ್ಯರು ಎರಡು ಇಂಜೆಕ್ಷನ್ ನೀಡಿದ್ದು, ಅದಾದ ಬಳಿಕ ವಂದನಾಳ ಆರೋಗ್ಯದಲ್ಲಿ ಹಠಾತ್ ಏರುಪೇರು ಕಂಡುಬಂದಿದೆ. ಕುಟುಂಬಸ್ಥರ ಪ್ರಕಾರ, ಅವಳ ಶ್ವಾಸಕೋಶದ ಮೇಲೆ ಪರಿಣಾಮ ಬೀರಿದ ಪರಿಣಾಮದಿಂದ ಆರೋಗ್ಯ ಗಂಭೀರವಾಗಿದೆ.
ತಕ್ಷಣವೇ ಇತರ ಆಸ್ಪತ್ರೆಗೆ ರವಾನಿಸಲಾಗಿದ್ರೂ ಮಾರ್ಗಮಧ್ಯದಲ್ಲಿ ವಂದನಾ ಪ್ರಾಣಬಿಟ್ಟಿದ್ದಾರೆ. ಘಟನೆಗೆ ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಆರೋಪಿಸುತ್ತಿರುವ ಕುಟುಂಬಸ್ಥರು, ತಮ್ಮ ಮಗಳ ಸಾವಿಗೆ ನ್ಯಾಯ ಕೋರಿ ಆಸ್ಪತ್ರೆಗೆ ಎದುರು ಶವವಿಟ್ಟು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸ್ಥಳಕ್ಕೆ ಸ್ಥಳೀಯ ಪೊಲೀಸರು ಭೇಟಿ ನೀಡಿ ಪರಿಸ್ಥಿತಿ ನಿಯಂತ್ರಣಕ್ಕೆ ಕೈಜೋಡಿಸಿದ್ದು, ಘಟನೆಯ ಕುರಿತು ಹೆಚ್ಚಿನ ತನಿಖೆ ಮುಂದುವರೆದಿದೆ.
ತುಮಕೂರು ಜಿಲ್ಲೆಯ ಮದರಸಾವೊಂದರಲ್ಲಿ ಅಪ್ರಾಪ್ತ ಮಕ್ಕಳ ಮೇಲೆ ಅಮಾನವೀಯ ದೌರ್ಜನ್ಯ ಮತ್ತು ಬಾಲಕಾರ್ಮಿಕ ಶೋಷಣೆ ನಡೆಸಲಾಗುತ್ತಿದ್ದ ಬೆಚ್ಚಿಬೀಳಿಸುವ ಪ್ರಕರಣ ಬೆಳಕಿಗೆ…
ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…
ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…
ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…
ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…