ಬೆಂಗಳೂರು: ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಸಂಭವಿಸಿದ ವೈದ್ಯರ ನಿರ್ಲಕ್ಷ್ಯದ ಘಟನೆ ಭಾರೀ ಚರ್ಚೆಗೆ ಗ್ರಾಸವಾಗಿದೆ. ಚಿಕಿತ್ಸೆಗಾಗಿ ದಾಖಲಾಗಿದ್ದ 18 ವರ್ಷದ ಯುವತಿಯೊಬ್ಬಳು ಆಪರೇಷನ್ ನಂತರ ಅಸುನೀಗಿದ್ದು, ಘಟನೆಯಿಂದ ಆಕ್ರೋಶಗೊಂಡ ಕುಟುಂಬಸ್ಥರು ಆಸ್ಪತ್ರೆ ಎದುರು ಮೃತದೇಹವನ್ನಿಟ್ಟು ಪ್ರತಿಭಟನೆ ಆರಂಭಿಸಿದ್ದಾರೆ.
ಹಾವೇರಿ ಜಿಲ್ಲೆಯ ಬ್ಯಾಡಗಿ ಪಟ್ಟಣದ ನಿವಾಸಿ ವಂದನಾ ಎಂಬ ಯುವತಿಗೆ ಕೈಯಲ್ಲಿ ಗುಳ್ಳೆಗಳು ಮೂಡಿದ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ನಗರದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಬರುವತ್ತಾಯಿತು. ತಕ್ಷಣ ವೈದ್ಯರು ಆಪರೇಷನ್ ಅಗತ್ಯವಿದೆ ಎಂದು ಸಲಹೆ ನೀಡಿದ್ದು, ವಂದನಾಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಆಪರೇಷನ್ ಮೊದಲು ವೈದ್ಯರು ಎರಡು ಇಂಜೆಕ್ಷನ್ ನೀಡಿದ್ದು, ಅದಾದ ಬಳಿಕ ವಂದನಾಳ ಆರೋಗ್ಯದಲ್ಲಿ ಹಠಾತ್ ಏರುಪೇರು ಕಂಡುಬಂದಿದೆ. ಕುಟುಂಬಸ್ಥರ ಪ್ರಕಾರ, ಅವಳ ಶ್ವಾಸಕೋಶದ ಮೇಲೆ ಪರಿಣಾಮ ಬೀರಿದ ಪರಿಣಾಮದಿಂದ ಆರೋಗ್ಯ ಗಂಭೀರವಾಗಿದೆ.
ತಕ್ಷಣವೇ ಇತರ ಆಸ್ಪತ್ರೆಗೆ ರವಾನಿಸಲಾಗಿದ್ರೂ ಮಾರ್ಗಮಧ್ಯದಲ್ಲಿ ವಂದನಾ ಪ್ರಾಣಬಿಟ್ಟಿದ್ದಾರೆ. ಘಟನೆಗೆ ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಆರೋಪಿಸುತ್ತಿರುವ ಕುಟುಂಬಸ್ಥರು, ತಮ್ಮ ಮಗಳ ಸಾವಿಗೆ ನ್ಯಾಯ ಕೋರಿ ಆಸ್ಪತ್ರೆಗೆ ಎದುರು ಶವವಿಟ್ಟು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸ್ಥಳಕ್ಕೆ ಸ್ಥಳೀಯ ಪೊಲೀಸರು ಭೇಟಿ ನೀಡಿ ಪರಿಸ್ಥಿತಿ ನಿಯಂತ್ರಣಕ್ಕೆ ಕೈಜೋಡಿಸಿದ್ದು, ಘಟನೆಯ ಕುರಿತು ಹೆಚ್ಚಿನ ತನಿಖೆ ಮುಂದುವರೆದಿದೆ.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…