Latest

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಯುವತಿಗೆ ಕಿರುಕುಳ: ನಿರ್ವಾಹಕ ಬಂಧನ”

ಮಂಗಳೂರು: ಮುಡಿಪು ಮಾರ್ಗವಾಗಿ ಸಾಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ದಲ್ಲಿ ನಿದ್ದೆಹೋಗಿದ್ದ ಯುವತಿಗೆ ಅನುಚಿತವಾಗಿ ವರ್ತಿಸಿದ ಆರೋಪದಲ್ಲಿ  ಬಸ್ ನಿರ್ವಾಹಕನನ್ನು ಕೊಣಾಜೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತನು ಬಾಗಲಕೋಟೆ ಜಿಲ್ಲೆ ಮೂಲದ ಪ್ರದೀಪ್ ಎಂಬಾತನೆಂಬ ಮಾಹಿತಿ ಲಭ್ಯವಾಗಿದೆ. ಬುಧವಾರ ರಾತ್ರಿ ಮುಡಿಪುವಿನಿಂದ ಮಂಗಳೂರಿಗೆ ಬರುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ.

ಯುವತಿ ಬಸ್‌ನಲ್ಲೇ ನಿದ್ದೆಮಗ್ನವಾಗಿದ್ದ ವೇಳೆ, ನಿರ್ವಾಹಕ ಆಕೆಯ ಖಾಸಗಿ ಅಂಗಾಂಗಗಳನ್ನು ಸ್ಪರ್ಶಿಸಲು ಯತ್ನಿಸಿದ. ಈ ಕೃತ್ಯವನ್ನು ಗಮನಿಸಿದ್ದ ಮತ್ತೊಬ್ಬ ಪ್ರಯಾಣಿಕನು ಮೊಬೈಲ್ ಫೋನ್‌ನಲ್ಲಿ ಈ ದೃಶ್ಯವನ್ನು ದಾಖಲಿಸಿ, , ವಿಡಿಯೋ ವೈರಲ್  ಮಾಡಿದ್ದಾರೆ.

ವೀಡಿಯೋ ವೈರಲ್ ಆದ ತಕ್ಷಣ ಪೊಲೀಸರು ಸ್ಪಂದಿಸಿ ಪ್ರದೀಪ್ ಎಂಬ ನಿರ್ವಾಹಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಘಟನೆಯ ಬಗ್ಗೆ ಮುಂದಿನ ತನಿಖೆ ಜಾರಿಯಲ್ಲಿದೆ.

ಸರ್ಕಾರಿ ಬಸ್‌ನಲ್ಲಿ ಈ ರೀತಿ ನಡೆದಿರುವ ಅಸಭ್ಯ ನಡೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದ್ದು, ಸಂಬಂಧಿತ ಇಲಾಖೆ ನಿರ್ವಾಹಕನ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ.

nazeer ahamad

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

9 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

9 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

10 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

10 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

1 day ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

1 day ago