ಇತ್ತೀಚಿನ ದಿನಗಳಲ್ಲಿ ಮಹಿಳೆಯರ ಸುರಕ್ಷತೆ ಮಹಾನಗರಗಳಲ್ಲಿ ಗಂಭೀರ ಚಿಂತನೆಯ ವಿಷಯವಾಗಿದ್ದು, ಮತ್ತೊಂದು ಕೃತ್ಯ ತಡವಾಗಿ ಬೆಳಕಿಗೆ ಬಂದಿದೆ. ಬೆಂಗಳೂರಿನ ಹೆಣ್ಣೂರು ಮುಖ್ಯ ರಸ್ತೆಯ ಇಂಡಿಯನ್ ಪೆಟ್ರೋಲ್ ಬಂಕ್ ಬಳಿಯಲ್ಲಿ ಯುವತಿಯೊಬ್ಬರಿಗೆ ನಡೆದ ಅಮಾನವೀಯ ಘಟನೆ ಈಗ ಬಹಿರಂಗವಾಗಿದೆ.
ಮೂರು ದಿನಗಳ ಹಿಂದೆ, ಬೆಳಗಿನ ಜಾವ 4.30ರ ಸುಮಾರಿಗೆ, ಯುವತಿ ತನ್ನ ಸ್ನೇಹಿತರ ಮನೆಯಿಂದ ಸ್ಕೂಟರ್ನಲ್ಲಿ ಮನೆಗೆ ಹಿಂತಿರುಗುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಹೆಣ್ಣೂರು ಬಳಿ ಸ್ಕೂಟರ್ನಲ್ಲಿ ತೆರಳುತ್ತಿದ್ದಾಗ, ಇಬ್ಬರು ಅಪರಿಚಿತ ವ್ಯಕ್ತಿಗಳು ಅವರ ವಾಹನವನ್ನು ಹಿಂಬಾಲಿಸುತ್ತಿದ್ದರು. ಅಚ್ಚರಿಯವೆಂದರೆ, ಇವರು ಯುವತಿಯ ಸ್ಕೂಟರ್ಗೆ ಅಡ್ಡಗಟ್ಟಿ, ಲೈಂಗಿಕ ಕಿರುಕುಳ ನೀಡಿದಿದ್ದಾರೆ. ಖಾಸಗಿ ಭಾಗಕ್ಕೆ ಕೈ ಹಾಕಿ ಅವಮಾನಿಸುವಂತಹ ನಡೆ ತೋರಿದ ಆರೋಪ ಎದುರಾಗಿದೆ.
ಸ್ಥಳದಲ್ಲಿ ಕೆಲ ಸಾರ್ವಜನಿಕರು ಧಾವಿಸಿ ಕಾಮುಕರನ್ನು ಹಿಡಿಯಲು ಯತ್ನಿಸಿದಾಗ, ಇಬ್ಬರೂ ದಂಡುಗೊಳಿಸಿದವರು ಚಾಕು ತೋರಿಸಿ ಪರಾರಿಯಾಗಿದ್ದಾರೆ ಎನ್ನಲಾಗಿದೆ.
ಈ ಸಂಬಂಧ ಯುವತಿ ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳ ಪರಿಶೀಲನೆ, ಸ್ಥಳದ ಸಾಕ್ಷ್ಯಗಳ ಸಂಗ್ರಹ ಸೇರಿದಂತೆ ಆರೋಪಿಗಳನ್ನು ಪತ್ತೆ ಹಚ್ಚಲು ಪೊಲೀಸರು ಚುರುಕಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಈ ಘಟನೆ ಮಹಿಳಾ ಸುರಕ್ಷತೆಗೆ ಸಂಬಂಧಿಸಿದಂತೆ ಮತ್ತೆ ಸದ್ದು ಮಾಡಿದ್ದು, ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಹಿಳೆಯರು ಒಬ್ಬಂಟಿಯಾಗಿ ಸವಾರಿಯಾಗೋದು ಭಯಕಾರಿಯಾಗುತ್ತಿರುವ ಸಂದರ್ಭದಲ್ಲಿ, ಪೊಲೀಸರು ಗಂಭೀರ ಕ್ರಮ ಕೈಗೊಳ್ಳಬೇಕೆಂಬ ಸಾರ್ವಜನಿಕರ ಒತ್ತಾಯ.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…