Latest

ಯುವತಿಗೆ ನಡುರಸ್ತೆಯಲ್ಲಿ ಲೈಂಗಿಕ ದೌರ್ಜನ್ಯ: ಬೆಂಗಳೂರಿನಲ್ಲಿ ಮಹಿಳಾ ಭದ್ರತೆಗೆ ಮತ್ತೆ ಸವಾಲು.

ಇತ್ತೀಚಿನ ದಿನಗಳಲ್ಲಿ ಮಹಿಳೆಯರ ಸುರಕ್ಷತೆ ಮಹಾನಗರಗಳಲ್ಲಿ ಗಂಭೀರ ಚಿಂತನೆಯ ವಿಷಯವಾಗಿದ್ದು, ಮತ್ತೊಂದು ಕೃತ್ಯ ತಡವಾಗಿ ಬೆಳಕಿಗೆ ಬಂದಿದೆ. ಬೆಂಗಳೂರಿನ ಹೆಣ್ಣೂರು ಮುಖ್ಯ ರಸ್ತೆಯ ಇಂಡಿಯನ್ ಪೆಟ್ರೋಲ್ ಬಂಕ್ ಬಳಿಯಲ್ಲಿ ಯುವತಿಯೊಬ್ಬರಿಗೆ ನಡೆದ ಅಮಾನವೀಯ ಘಟನೆ ಈಗ ಬಹಿರಂಗವಾಗಿದೆ.

ಮೂರು ದಿನಗಳ ಹಿಂದೆ, ಬೆಳಗಿನ ಜಾವ 4.30ರ ಸುಮಾರಿಗೆ, ಯುವತಿ ತನ್ನ ಸ್ನೇಹಿತರ ಮನೆಯಿಂದ ಸ್ಕೂಟರ್‌ನಲ್ಲಿ ಮನೆಗೆ ಹಿಂತಿರುಗುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಹೆಣ್ಣೂರು ಬಳಿ ಸ್ಕೂಟರ್‌ನಲ್ಲಿ ತೆರಳುತ್ತಿದ್ದಾಗ, ಇಬ್ಬರು ಅಪರಿಚಿತ ವ್ಯಕ್ತಿಗಳು ಅವರ ವಾಹನವನ್ನು ಹಿಂಬಾಲಿಸುತ್ತಿದ್ದರು. ಅಚ್ಚರಿಯವೆಂದರೆ, ಇವರು ಯುವತಿಯ ಸ್ಕೂಟರ್‌ಗೆ ಅಡ್ಡಗಟ್ಟಿ, ಲೈಂಗಿಕ ಕಿರುಕುಳ ನೀಡಿದಿದ್ದಾರೆ. ಖಾಸಗಿ ಭಾಗಕ್ಕೆ ಕೈ ಹಾಕಿ ಅವಮಾನಿಸುವಂತಹ ನಡೆ ತೋರಿದ ಆರೋಪ ಎದುರಾಗಿದೆ.

ಸ್ಥಳದಲ್ಲಿ ಕೆಲ ಸಾರ್ವಜನಿಕರು ಧಾವಿಸಿ ಕಾಮುಕರನ್ನು ಹಿಡಿಯಲು ಯತ್ನಿಸಿದಾಗ, ಇಬ್ಬರೂ ದಂಡುಗೊಳಿಸಿದವರು ಚಾಕು ತೋರಿಸಿ ಪರಾರಿಯಾಗಿದ್ದಾರೆ ಎನ್ನಲಾಗಿದೆ.

ಈ ಸಂಬಂಧ ಯುವತಿ ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳ ಪರಿಶೀಲನೆ, ಸ್ಥಳದ ಸಾಕ್ಷ್ಯಗಳ ಸಂಗ್ರಹ ಸೇರಿದಂತೆ ಆರೋಪಿಗಳನ್ನು ಪತ್ತೆ ಹಚ್ಚಲು ಪೊಲೀಸರು ಚುರುಕಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಈ ಘಟನೆ ಮಹಿಳಾ ಸುರಕ್ಷತೆಗೆ ಸಂಬಂಧಿಸಿದಂತೆ ಮತ್ತೆ ಸದ್ದು ಮಾಡಿದ್ದು, ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಹಿಳೆಯರು ಒಬ್ಬಂಟಿಯಾಗಿ ಸವಾರಿಯಾಗೋದು ಭಯಕಾರಿಯಾಗುತ್ತಿರುವ ಸಂದರ್ಭದಲ್ಲಿ, ಪೊಲೀಸರು ಗಂಭೀರ ಕ್ರಮ ಕೈಗೊಳ್ಳಬೇಕೆಂಬ  ಸಾರ್ವಜನಿಕರ ಒತ್ತಾಯ.

nazeer ahamad

Recent Posts

ಅಟ್ರಾಸಿಟಿ ಪ್ರಕರಣದಲ್ಲಿ ಆರೋಪಿಗಳ ಬಂಧನಕ್ಕೆ ಲಂಚ ಬೇಡಿಕೆ: ಸಿಪಿಐ ಲೋಕಾಯುಕ್ತ ಬಲೆಗೆ

ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…

9 hours ago

ಕರ್ಕಶ ಶಬ್ದದ ಬೈಕ್ ವಿಚಾರಕ್ಕೆ ಪೊಲೀಸರ ಮೇಲೆಯೇ ವಿದ್ಯಾರ್ಥಿಗಳ ಹಲ್ಲೆ

ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…

16 hours ago

ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ ದಂಧೆ: ಬೆಳ್ತಂಗಡಿಯಲ್ಲಿ ಪೊಲೀಸರ ದಾಳಿ, ಮೂವರು ಬಂಧನ

ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…

16 hours ago

ಒಂದು ವರ್ಷದ ನಿರೀಕ್ಷೆಗೆ ತೆರೆ: ಭಟ್ಕಳಕ್ಕೆ ಖಾಯಂ ಎಸಿ, ಜೆ. ಮಹೇಶ್ ಅಧಿಕಾರ ಸ್ವೀಕಾರ

ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…

2 days ago

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ; ರಾಜಕೀಯ ವಲಯದಲ್ಲಿ ಶೋಕದ ಛಾಯೆ

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…

2 days ago

ಆಂಟಿ ಹಿಂದೆ ಹೋದವನ ದುರಂತ ಅಂತ್ಯ: ಲಿವ್-ಇನ್ ಸಂಗಾತಿಯ ಕಿರುಕುಳಕ್ಕೆ ಯುವಕ ಆತ್ಮಹತ್ಯೆ!

ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…

2 days ago