Latest

ಬಸ್‌ನಲ್ಲಿ ಲೈಂಗಿಕ ಕಿರುಕುಳ ನೀಡಿದ ವೃದ್ಧನಿಗೆ ಯುವತಿಯಿಂದ ಕಪಾಳಮೋಕ್ಷ

ತಿರುವನಂತಪುರಂ, ಜುಲೈ 29: ಕೇರಳದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡುವ ಪ್ರಕರಣಗಳು ತೀವ್ರ ಗಂಭೀರತೆಯನ್ನು ಪಡೆದುಕೊಂಡಿವೆ. ಇತ್ತೀಚೆಗೆ ತಿರುವನಂತಪುರಂನಲ್ಲಿ ನಡೆದ ಮತ್ತೊಂದು ಘಟನೆ ಇದಕ್ಕೆ ತಾಜಾ ಉದಾಹರಣೆ. ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಗೆ ಪಕ್ಕದಲ್ಲಿದ್ದ ವೃದ್ಧ ವ್ಯಕ್ತಿ ಕಿರುಕುಳ ನೀಡಿದ್ದು,  ಯುವತಿ ತಕ್ಷಣವೇ ಪ್ರತಿಕ್ರಿಯಿಸಿ ಆತನಿಗೆ ಬಸ್‌ನಲ್ಲೇ ತರಾಟೆ ನೀಡಿದ ಘಟನೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.

ಪ್ರಕರಣದ ವಿವರಗಳನ್ನು ನೋಡಿದರೆ, ಯುವತಿ ತನ್ನ ಸ್ನೇಹಿತೆಯೊಂದಿಗೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಪಕ್ಕದ ಸೀಟಿನಲ್ಲಿ ವೃದ್ಧ ವ್ಯಕ್ತಿಯೊಬ್ಬನು ಕುಳಿತುಕೊಂಡಿದ್ದ. ಕೆಲ ಹೊತ್ತಿನ ನಂತರ ಆತನು ನಿಧಾನವಾಗಿ ತನ್ನ ಕೈಯನ್ನು ಯುವತಿಯ ಎದೆ ಹತ್ತಿರ ತಂದು ಇಡಲು ಯತ್ನಿಸಿದ್ದ. ಆರಂಭದಲ್ಲಿ ಯುವತಿ ಈ ವರ್ತನೆಯನ್ನು ನಿರ್ಲಕ್ಷಿಸಿದರೂ, ಅವನು ಉದ್ದೇಶಪೂರ್ವಕವಾಗಿ ಈ ಕೃತ್ಯ ಮಾಡುತ್ತಿದ್ದಾನೆ ಎಂಬುದು ಸ್ಪಷ್ಟವಾದ ನಂತರ, ಆಕೆ ತಕ್ಷಣವೇ ತನ್ನ ಸ್ನೇಹಿತೆಗೆ ಈ ಬಗ್ಗೆ ತಿಳಿಸಿದ್ದಾಳೆ.

ಸ್ನೇಹಿತೆ ಮೊಬೈಲ್‌ನಲ್ಲಿ ಆ ದೃಶ್ಯವನ್ನು ರೆಕಾರ್ಡ್ ಮಾಡುವ ಮೂಲಕ ಸಾಬೀತು ಸಂಗ್ರಹಿಸಿದ್ದಾರೆ. ನಂತರ ಆಕ್ರೋಶದಿಂದ ಎದ್ದು ನಿಂತ ಯುವತಿ ವೃದ್ಧ ವ್ಯಕ್ತಿಗೆ ಬಸ್‌ನಲ್ಲೇ ದಿಟ್ಟವಾಗಿ ಪ್ರಶ್ನಿಸಿ, “ನಿಮ್ಮ ಮನೆಯಲ್ಲೇನು ಹೆಣ್ಣುಮಕ್ಕಳು ಇಲ್ಲವೇ?” ಎಂದು ಕಿಡಿಕಾರಿದ್ದಾರೆ. ಅಲ್ಲಿಯವರೆದುರು ಅವನಿಗೆ ಕಪಾಳಮೋಕ್ಷ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಘಟನೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಯುವತಿಯ ಧೈರ್ಯಮಯ ನಡೆಗೆ ಸಾರ್ವಜನಿಕರಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಈ ಘಟನೆಯು ಸಾರ್ವಜನಿಕ ಪ್ರದೇಶಗಳಲ್ಲಿ ಮಹಿಳೆಯರ ಸುರಕ್ಷತೆಗೆ ಸಂಬಂಧಿಸಿದಂತೆ ಮತ್ತೆ ಚರ್ಚೆಗೆ ಗ್ರಾಸವಾಗುತ್ತಿದೆ. ಪೊಲೀಸರೇನು ಕ್ರಮ ಕೈಗೊಂಡಿದ್ದಾರೆ ಎಂಬ ಮಾಹಿತಿ ಇನ್ನೂ ಬಹಿರಂಗವಾಗಿಲ್ಲ.

nazeer ahamad

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

1 week ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago