ತಿರುವನಂತಪುರಂ, ಜುಲೈ 29: ಕೇರಳದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡುವ ಪ್ರಕರಣಗಳು ತೀವ್ರ ಗಂಭೀರತೆಯನ್ನು ಪಡೆದುಕೊಂಡಿವೆ. ಇತ್ತೀಚೆಗೆ ತಿರುವನಂತಪುರಂನಲ್ಲಿ ನಡೆದ ಮತ್ತೊಂದು ಘಟನೆ ಇದಕ್ಕೆ ತಾಜಾ ಉದಾಹರಣೆ. ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಗೆ ಪಕ್ಕದಲ್ಲಿದ್ದ ವೃದ್ಧ ವ್ಯಕ್ತಿ ಕಿರುಕುಳ ನೀಡಿದ್ದು, ಯುವತಿ ತಕ್ಷಣವೇ ಪ್ರತಿಕ್ರಿಯಿಸಿ ಆತನಿಗೆ ಬಸ್ನಲ್ಲೇ ತರಾಟೆ ನೀಡಿದ ಘಟನೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.
ಪ್ರಕರಣದ ವಿವರಗಳನ್ನು ನೋಡಿದರೆ, ಯುವತಿ ತನ್ನ ಸ್ನೇಹಿತೆಯೊಂದಿಗೆ ಬಸ್ನಲ್ಲಿ ಪ್ರಯಾಣಿಸುತ್ತಿದ್ದಾಗ ಪಕ್ಕದ ಸೀಟಿನಲ್ಲಿ ವೃದ್ಧ ವ್ಯಕ್ತಿಯೊಬ್ಬನು ಕುಳಿತುಕೊಂಡಿದ್ದ. ಕೆಲ ಹೊತ್ತಿನ ನಂತರ ಆತನು ನಿಧಾನವಾಗಿ ತನ್ನ ಕೈಯನ್ನು ಯುವತಿಯ ಎದೆ ಹತ್ತಿರ ತಂದು ಇಡಲು ಯತ್ನಿಸಿದ್ದ. ಆರಂಭದಲ್ಲಿ ಯುವತಿ ಈ ವರ್ತನೆಯನ್ನು ನಿರ್ಲಕ್ಷಿಸಿದರೂ, ಅವನು ಉದ್ದೇಶಪೂರ್ವಕವಾಗಿ ಈ ಕೃತ್ಯ ಮಾಡುತ್ತಿದ್ದಾನೆ ಎಂಬುದು ಸ್ಪಷ್ಟವಾದ ನಂತರ, ಆಕೆ ತಕ್ಷಣವೇ ತನ್ನ ಸ್ನೇಹಿತೆಗೆ ಈ ಬಗ್ಗೆ ತಿಳಿಸಿದ್ದಾಳೆ.
ಸ್ನೇಹಿತೆ ಮೊಬೈಲ್ನಲ್ಲಿ ಆ ದೃಶ್ಯವನ್ನು ರೆಕಾರ್ಡ್ ಮಾಡುವ ಮೂಲಕ ಸಾಬೀತು ಸಂಗ್ರಹಿಸಿದ್ದಾರೆ. ನಂತರ ಆಕ್ರೋಶದಿಂದ ಎದ್ದು ನಿಂತ ಯುವತಿ ವೃದ್ಧ ವ್ಯಕ್ತಿಗೆ ಬಸ್ನಲ್ಲೇ ದಿಟ್ಟವಾಗಿ ಪ್ರಶ್ನಿಸಿ, “ನಿಮ್ಮ ಮನೆಯಲ್ಲೇನು ಹೆಣ್ಣುಮಕ್ಕಳು ಇಲ್ಲವೇ?” ಎಂದು ಕಿಡಿಕಾರಿದ್ದಾರೆ. ಅಲ್ಲಿಯವರೆದುರು ಅವನಿಗೆ ಕಪಾಳಮೋಕ್ಷ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಘಟನೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಯುವತಿಯ ಧೈರ್ಯಮಯ ನಡೆಗೆ ಸಾರ್ವಜನಿಕರಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಈ ಘಟನೆಯು ಸಾರ್ವಜನಿಕ ಪ್ರದೇಶಗಳಲ್ಲಿ ಮಹಿಳೆಯರ ಸುರಕ್ಷತೆಗೆ ಸಂಬಂಧಿಸಿದಂತೆ ಮತ್ತೆ ಚರ್ಚೆಗೆ ಗ್ರಾಸವಾಗುತ್ತಿದೆ. ಪೊಲೀಸರೇನು ಕ್ರಮ ಕೈಗೊಂಡಿದ್ದಾರೆ ಎಂಬ ಮಾಹಿತಿ ಇನ್ನೂ ಬಹಿರಂಗವಾಗಿಲ್ಲ.
ನಾಸಿಕ್ನ ಟಿಸಿಎಸ್ ಸಂಬಂಧಿತ ಮತಾಂತರ ಮತ್ತು ಕಿರುಕುಳ ಪ್ರಕರಣದ ತನಿಖೆಯಲ್ಲಿ ಹೊಸದಾಗಿ ಸ್ಫೋಟಕ ಮಾಹಿತಿಗಳು ಬಹಿರಂಗವಾಗುತ್ತಿವೆ. ಬಿಪಿಒ ಘಟಕದಲ್ಲಿ ಎಚ್ಆರ್…
ವಿಜಯನಗರ:- ಗೃಹಲಕ್ಷ್ಮಿ ಯೋಜನೆ ಹಣವನ್ನು ಕೂಡಿಟ್ಟು ಮಹಿಳೆಯೊಬ್ಬರು ಸಣ್ಣದಾಗಿ ಐಸ್ ಕ್ರೀಮ್ ಅಂಗಡಿ ತೆರೆದು ಬದುಕು ಕಟ್ಟಿಕೊಂಡಿದ್ದಾರೆ.ಕೊಟ್ಟೂರು ತಾಲ್ಲೂಕಿನ ಹರಾಳು…
ಧಾರವಾಡ ಜಿಪಂ ಮಾಜಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಹತ್ವದ ತೀರ್ಪು ಹೊರಬಿದ್ದಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕಾಂಗ್ರೆಸ್…
ವಿಜಯಪುರ ಜಿಲ್ಲೆಯಲ್ಲಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಸಿಲುಕಿರುವ ಘಟನೆ ನಡೆದಿದೆ. ಪೆಟ್ರೋಲ್ ಬಂಕ್ ಜಾಗದ…
ನಿವೇಶನದ ಖಾತೆ ಮಾಡಿಕೊಡಲು ಲಂಚ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ನೆಲಮಂಗಲ ತಾಲೂಕಿನ ಕಳಲುಘಟ್ಟ ಗ್ರಾಮ ಪಂಚಾಯಿತಿ ಪಿಡಿಓ ಲೋಕಾಯುಕ್ತ…
ಕೇರಳದ ಅಲೆಪ್ಪಿ ಜಿಲ್ಲೆಯ ಚೆರ್ತಲಾದಲ್ಲಿ ವಿಷು ಹಬ್ಬದ ಶುಭಾಶಯ ಪೋಸ್ಟರ್ ಒಂದು ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಈ ಪೋಸ್ಟರ್ನಲ್ಲಿ ಶ್ರೀಕೃಷ್ಣನ…