ಬೆಳಗಾವಿ ಜಿಲ್ಲೆಯ ಯಮಕನಮರಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾನವೀಯತೆ ಮೀರಿದ ದಾರುಣ ಘಟನೆ ಬೆಳಕಿಗೆ ಬಂದಿದೆ. ಪತಿಯನ್ನು ಬಿಟ್ಟು ಪ್ರಿಯಕರನೊಂದಿಗೆ ಓಡಿಹೋಗಿದ್ದ ಯುವತಿಯನ್ನು ಕುಟುಂಬದ ಮರ್ಯಾದೆ ಕಳೆದುಕೊಂಡಳೆಂಬ ಕಾರಣಕ್ಕೆ ಸ್ವಂತ ಮನೆಯವರೇ ಹತ್ಯೆ ಮಾಡಿ, ಬಳಿಕ ಶವವನ್ನು ಸುಟ್ಟು ಸಾಕ್ಷ್ಯ ನಾಶ ಮಾಡಲು ಯತ್ನಿಸಿದ ಪ್ರಕರಣ ತಡವಾಗಿ ಬಹಿರಂಗವಾಗಿದೆ.
ರಾಯಬಾಗ ತಾಲೂಕಿನ ಹಣಬರಟ್ಟಿ ಗ್ರಾಮದ ಸತ್ಯವ್ವ ಸಂತೋಷ ಹಳವಿ (24) ಹತ್ಯೆಗೀಡಾದ ಯುವತಿ. ಸತ್ಯವ್ವಳಿಗೆ ಈ ಹಿಂದೆ ಮದುವೆಯಾಗಿದ್ದರೂ, ನಂತರ ಪತಿಯನ್ನು ಬಿಟ್ಟು ಕೃಷ್ಣಾ ಪಾಟೀಲ (28) ಎಂಬಾತನೊಂದಿಗೆ ಮನೆ ಬಿಟ್ಟು ಹೋಗಿದ್ದಳು. ಈ ಸಂಬಂಧ ಈಗಾಗಲೇ ನಾಪತ್ತೆ ಪ್ರಕರಣವೂ ದಾಖಲಾಗಿತ್ತು.
ಮನೆ ಬಿಟ್ಟು ಹೋಗಿದ್ದ ಸತ್ಯವ್ವಳನ್ನು ಪತ್ತೆ ಹಚ್ಚಿದ ಕುಟುಂಬಸ್ಥರು, ಮಾರ್ಚ್ 13ರಂದು ಆಕೆಯನ್ನು ಕೊಲೆ ಮಾಡಿದ್ದಾರೆ. ಬಳಿಕ ಪ್ರಕರಣ ಬೆಳಕಿಗೆ ಬರಬಾರದೆಂಬ ಉದ್ದೇಶದಿಂದ ಮೃತದೇಹವನ್ನು ಸುಟ್ಟು ಹಾಕಿದ್ದಾರೆ ಎಂದು ತಿಳಿದುಬಂದಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಪ್ರಕಾಶ ಹಳವರ (ಚಿಕ್ಕಪ್ಪ), ಶಾನೂರ ಹಳವರ (ಸಹೋದರ) ಮತ್ತು ಮೊರಬದ ಕಲ್ಲಪ್ಪ (ಸಹೋದರಿಯ ಪತಿ) ಬಂಧಿತರಾಗಿದ್ದಾರೆ.
ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಾಥಮಿಕ ತನಿಖೆಯಲ್ಲಿ ಈ ಕೃತ್ಯ ಮಹಾರಾಷ್ಟ್ರದ ಮಿರಜ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಸಾಧ್ಯತೆ ವ್ಯಕ್ತವಾಗಿದೆ. ಸದ್ಯ ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಿರುವ ಪೊಲೀಸರು, ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…