Categories: CrimeLatest

ರಾಪಿಡೋ ಚಾಲಕನ ನಿರ್ಲಕ್ಷ್ಯಕ್ಕೆ ಯುವತಿಯ ಬದುಕೇ ಚಿಂದಿ: 20 ಲಕ್ಷ ಚಿಕಿತ್ಸಾ ವೆಚ್ಚ, ನ್ಯಾಯಕ್ಕಾಗಿ ಕಣ್ಣೀರಿನ ಹೋರಾಟ!

ಬೆಂಗಳೂರು: ಆನ್‌ಲೈನ್ ಬೈಕ್ ಟ್ಯಾಕ್ಸಿ ಸೇವೆಗಳ ಸುರಕ್ಷತೆ ಕುರಿತು ಮತ್ತೆ ಪ್ರಶ್ನೆಗಳು ಮೂಡುವಂತ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ರಾಪಿಡೋ ಬೈಕ್ ಪ್ರಯಾಣದ ವೇಳೆ ಚಾಲಕನ ಅಜಾಗರೂಕತೆ ಮತ್ತು ಅತಿವೇಗದ ಚಾಲನೆಯಿಂದ ಸಂಭವಿಸಿದ ಭೀಕರ ಅಪಘಾತದಲ್ಲಿ ಯುವತಿಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಅವರ ಜೀವನವೇ ಸಂಪೂರ್ಣ ಬದಲಾಗಿದೆ. ಇದೀಗ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿ ವೆಚ್ಚ ಮಾಡಿರುವ ಸಂತ್ರಸ್ತೆ ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿದ್ದಾರೆ.

ಅಪಘಾತ ಹೇಗೆ ಸಂಭವಿಸಿತು?

ಸಾಹಿತ್ಯ ಹಾಗೂ ಕಲೆಯ ಬಗ್ಗೆ ಅಪಾರ ಆಸಕ್ತಿ ಹೊಂದಿದ್ದ ಸಾನಿಕೃಷ್ಣ ಅವರು ಬೆಂಗಳೂರಿನ ದೊಮ್ಮಲೂರಿನಲ್ಲಿ ಉದ್ಯೋಗದಲ್ಲಿದ್ದರು. ಜೂನ್ 17, 2026ರಂದು ಬೈರಸಂದ್ರದಿಂದ ದೊಮ್ಮಲೂರಿಗೆ ತೆರಳಲು ರಾಪಿಡೋ ಬೈಕ್ ಸೇವೆಯನ್ನು ಬುಕ್ ಮಾಡಿಕೊಂಡಿದ್ದರು.

ಪ್ರಯಾಣದ ವೇಳೆ ಚಾಲಕ ಅತಿವೇಗದಲ್ಲಿ ಬೈಕ್ ಚಲಾಯಿಸುತ್ತಿದ್ದನ್ನು ಗಮನಿಸಿದ ಸಾನಿಕೃಷ್ಣ, “ನನಗೆ ತುರ್ತು ಇಲ್ಲ, ದಯವಿಟ್ಟು ನಿಧಾನವಾಗಿ ಚಾಲನೆ ಮಾಡಿ” ಎಂದು ಮನವಿ ಮಾಡಿಕೊಂಡಿದ್ದರು. ಆದರೆ ಚಾಲಕ ಪ್ರಯಾಣಿಕರ ಮನವಿಯನ್ನು ಲೆಕ್ಕಿಸದೆ ವೇಗವಾಗಿ ಬೈಕ್ ಚಲಾಯಿಸಿದ್ದಾನೆ ಎನ್ನಲಾಗಿದೆ.

ಬಾಗ್ಮನೆ ಟೆಕ್ ಪಾರ್ಕ್ ಬಳಿ ಭೀಕರ ದುರಂತ

ಬಾಗ್ಮನೆ ಟೆಕ್ ಪಾರ್ಕ್ ಸಮೀಪ ರಸ್ತೆಯಲ್ಲಿ ಸಾಗುತ್ತಿದ್ದ ಟ್ರ್ಯಾಕ್ಟರ್ ಅನ್ನು ಓವರ್‌ಟೇಕ್ ಮಾಡಲು ಯತ್ನಿಸಿದ ವೇಳೆ ಚಾಲಕ ಬೈಕ್ ಮೇಲಿನ ನಿಯಂತ್ರಣ ಕಳೆದುಕೊಂಡಿದ್ದಾನೆ. ಪರಿಣಾಮ ಬೈಕ್ ರಸ್ತೆ ಮೇಲೆ ಮಗುಚಿ ಬಿದ್ದಿದ್ದು, ಸಾನಿಕೃಷ್ಣ ಟ್ರ್ಯಾಕ್ಟರ್ ಚಕ್ರದಡಿ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ತೀವ್ರ ಗಾಯಗಳು, 20 ಲಕ್ಷಕ್ಕೂ ಅಧಿಕ ಚಿಕಿತ್ಸಾ ವೆಚ್ಚ

ಅಪಘಾತದಲ್ಲಿ ಸಾನಿಕೃಷ್ಣ ಅವರ ಮುಖಕ್ಕೆ ತೀವ್ರ ಪೆಟ್ಟಾಗಿದ್ದು, ಒಂಬತ್ತು ಪಕ್ಕೆಲುಬುಗಳು ಮುರಿದಿವೆ. ಆಂತರಿಕ ರಕ್ತಸ್ರಾವದಿಂದ ಗುಲ್ಮವನ್ನು ಶಸ್ತ್ರಚಿಕಿತ್ಸೆ ಮೂಲಕ ತೆರವುಗೊಳಿಸಬೇಕಾಯಿತು. ಹಲ್ಲುಗಳು ಮುರಿದಿದ್ದು, ಮುಖದ ಪುನರ್‌ನಿರ್ಮಾಣಕ್ಕಾಗಿ ಹಲವು ಪ್ಲಾಸ್ಟಿಕ್ ಸರ್ಜರಿಗಳನ್ನು ನಡೆಸಲಾಗಿದೆ.

ಬೆಂಗಳೂರಿನಲ್ಲಿ ಪ್ರಾಥಮಿಕ ಚಿಕಿತ್ಸೆ ಬಳಿಕ ಹೆಚ್ಚಿನ ಚಿಕಿತ್ಸೆಗೆ ಕೇರಳಕ್ಕೆ ಸ್ಥಳಾಂತರಿಸಲಾಗಿದ್ದು, ಇದುವರೆಗೆ ವೈದ್ಯಕೀಯ ವೆಚ್ಚ 20 ಲಕ್ಷ ರೂಪಾಯಿಗೂ ಅಧಿಕವಾಗಿದೆ.

ನ್ಯಾಯಕ್ಕಾಗಿ ಸಂತ್ರಸ್ತೆಯ ಹೋರಾಟ

ಅಪಘಾತದಿಂದ ಬದುಕುಳಿದಿರುವ ಸಾನಿಕೃಷ್ಣ, ತನಗೆ ಸೂಕ್ತ ಪರಿಹಾರ ನೀಡುವಂತೆ ರಾಪಿಡೋ ಸಂಸ್ಥೆಗೆ ಕಾನೂನು ನೋಟಿಸ್ ಕಳುಹಿಸಿರುವುದಾಗಿ ತಿಳಿಸಿದ್ದಾರೆ. ಆದರೆ, ಕಂಪನಿಯಿಂದ ಯಾವುದೇ ಸಮರ್ಪಕ ಸ್ಪಂದನೆ ದೊರೆತಿಲ್ಲ ಎಂದು ಅವರು ಆರೋಪಿಸಿದ್ದಾರೆ.

ಈ ಘಟನೆ ಬಳಿಕ ಆನ್‌ಲೈನ್ ಬೈಕ್ ಟ್ಯಾಕ್ಸಿ ಸೇವೆಗಳ ಸುರಕ್ಷತೆ, ಚಾಲಕರ ಜವಾಬ್ದಾರಿ ಹಾಗೂ ಕಂಪನಿಗಳ ಹೊಣೆಗಾರಿಕೆ ಕುರಿತು ಸಾರ್ವಜನಿಕ ವಲಯದಲ್ಲಿ ಗಂಭೀರ ಚರ್ಚೆ ಆರಂಭವಾಗಿದೆ. ಸಂತ್ರಸ್ತೆಗೆ ನ್ಯಾಯ ದೊರಕಿಸಿಕೊಡಬೇಕೆಂಬ ಒತ್ತಾಯವೂ ಹೆಚ್ಚಾಗಿದೆ.

ಭ್ರಷ್ಟರ ಬೇಟೆ

Recent Posts

ಒಂಟಿ ಯುವತಿಯ ಮನೆಗೆ ನುಗ್ಗಲು ಯತ್ನಿಸಿದ ಡೆಲಿವರಿ ಬಾಯ್? ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ಘಟನೆ!

ಬೆಂಗಳೂರು: ನಗರದ ಅಪಾರ್ಟ್‌ಮೆಂಟ್‌ನಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಯುವತಿಗೆ ಪಾರ್ಸಲ್ ಡೆಲಿವರಿ ವೇಳೆ ಆತಂಕಕಾರಿ ಅನುಭವ ಎದುರಾಗಿರುವ ಘಟನೆ ಬೆಳಕಿಗೆ ಬಂದಿದೆ.…

23 hours ago

ಪ್ಯಾಕಿಂಗ್ ಕೆಲಸದ ಆಮಿಷಕ್ಕೆ ಕೋಟಿ ಕೋಟಿ ವಂಚನೆ: ದಂಪತಿ ಬಂಧನ, ಹಲವು ಜಿಲ್ಲೆಗಳಲ್ಲಿ ಪ್ರಕರಣ ದಾಖಲು!

ಬೆಂಗಳೂರು: ಮನೆದಲ್ಲೇ ಕುಳಿತು ಬೂದುಬತ್ತಿ, ಮೆಣದಬತ್ತಿ ಹಾಗೂ ಪೇಪರ್ ಪ್ಲೇಟ್ ಪ್ಯಾಕಿಂಗ್ ಕೆಲಸ ನೀಡಿ ಹೆಚ್ಚಿನ ಆದಾಯ ಗಳಿಸಬಹುದು ಎಂದು…

23 hours ago

₹5 ಲಕ್ಷ ಸಾಲ ವಾಪಸ್ ಕೇಳಿದ್ದಕ್ಕೆ ರೇಪ್ ಕೇಸ್ ಬೆದರಿಕೆ? ಮಾನಸಿಕ ಕಿರುಕುಳಕ್ಕೆ ನೊಂದು ಯುವಕ ಆತ್ಮಹತ್ಯೆ; ಕುಟುಂಬದ ಗಂಭೀರ ಆರೋಪ

ಮಂಡ್ಯ: ಸಾಲವಾಗಿ ನೀಡಿದ್ದ ಹಣವನ್ನು ಮರಳಿ ಕೇಳಿದ್ದಕ್ಕೆ ಸುಳ್ಳು ಅತ್ಯಾಚಾರ ಪ್ರಕರಣ ದಾಖಲಿಸುವುದಾಗಿ ಬೆದರಿಕೆ ಹಾಕಿದ ವಿವಾಹಿತೆಯ ಮಾನಸಿಕ ಕಿರುಕುಳದಿಂದ…

23 hours ago

ಹುಟ್ಟುಹಬ್ಬದ ಸಂಭ್ರಮ ದುರಂತದಲ್ಲಿ ಅಂತ್ಯ: ನೆಲಮಂಗಲದಲ್ಲಿ ಕಾರು ಪಲ್ಟಿ, ಇಬ್ಬರು ಸಾವು..!

ಬೆಂಗಳೂರು ಗ್ರಾಮಾಂತರ: ಹುಟ್ಟುಹಬ್ಬದ ಸಂಭ್ರಮ ಮುಗಿಸಿ ಮನೆಗೆ ವಾಪಸ್ ಆಗುತ್ತಿದ್ದ ಸ್ನೇಹಿತರ ತಂಡ ಭೀಕರ ರಸ್ತೆ ಅಪಘಾತಕ್ಕೆ ಗುರಿಯಾಗಿದ್ದು, ಇಬ್ಬರು…

23 hours ago

ರೋಡ್ ರೇಜ್ ವಿವಾದದ ಬಳಿಕ ಮಾಲೂರು ನ್ಯಾಯಾಧೀಶೆ ಗಾಯತ್ರಿಗೆ ಬೀದರ್ ವರ್ಗಾವಣೆ; ಹೈಕೋರ್ಟ್ ಆಡಳಿತಾತ್ಮಕ ಕ್ರಮ

ಬೆಂಗಳೂರು: ಸಾರ್ವಜನಿಕರೊಂದಿಗೆ ರಸ್ತೆ ಮಧ್ಯೆ ಮಾತಿನ ಚಕಮಕಿ ನಡೆಸಿ ಅಧಿಕಾರ ದುರ್ಬಳಕೆ ಆರೋಪಕ್ಕೆ ಗುರಿಯಾಗಿದ್ದ ಹಾಗೂ ಹೈಕೋರ್ಟ್‌ನಿಂದ ತೀವ್ರ ತರಾಟೆಗೆ…

23 hours ago

ನಡತೆ ಶಂಕೆಗೆ ಸಹಜೀವನ ಸಂಗಾತಿಯ ಹತ್ಯೆ: ಐದು ದಿನಗಳ ಬಳಿಕ ಪಶ್ಚಾತ್ತಾಪದಿಂದ ಪೊಲೀಸರಿಗೆ ಶರಣಾದ ಆರೋಪಿ

ಮೈಸೂರು ತಾಲೂಕಿನ ಭುಗತಗಳ್ಳಿ ಗ್ರಾಮದಲ್ಲಿ ನಡತೆ ಶಂಕೆಯಿಂದ ನಡೆದಿರುವ ಭೀಕರ ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಸಿದ್ದರಾಜು (64) ಎಂಬಾತ…

24 hours ago