ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿಯಲ್ಲಿ ಅಪ್ರಾಪ್ತ ವಿದ್ಯಾರ್ಥಿನಿಯೊಬ್ಬರಿಗೆ ಅಶ್ಲೀಲ ಸಂದೇಶ ಕಳುಹಿಸಿ ಕಿರುಕುಳ ನೀಡಿದ ಆರೋಪದಡಿ ಸೈಯದ್ (24) ಎಂಬ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.
ತಿಳಿದಿರುವಂತೆ, ಬೆಳ್ತಂಗಡಿಯ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿನಿಗೆ ಸೈಯದ್ ವಾಟ್ಸಾಪ್ ಮೂಲಕ ಅಶ್ಲೀಲ ಸಂದೇಶಗಳನ್ನು ಕಳುಹಿಸುತ್ತಿದ್ದನು. ಘಟನೆ ಬಯಲಾಗುತ್ತಿದ್ದಂತೆ ಸ್ಥಳೀಯ ಹಿಂದೂ ಸಂಘಟನೆ ಕಾರ್ಯಕರ್ತರು ಆರೋಪಿಯನ್ನು ಹಿಡಿದು ಹಲ್ಲೆ ನಡೆಸಿ, ನಂತರ ಬೆಳ್ತಂಗಡಿ ಪೊಲೀಸ್ ಠಾಣೆಗೆ ಒಪ್ಪಿಸಿದರು. ಕಾರ್ಯಕರ್ತರು ಆರೋಪಿಯ ಮೊಬೈಲ್ ಫೋನ್ ಪರಿಶೀಲಿಸಿದಾಗ ಅದರಲ್ಲಿ ಅಶ್ಲೀಲ ವೀಡಿಯೋ ಮತ್ತು ಸಂದೇಶಗಳು ಪತ್ತೆಯಾಗಿರುವುದಾಗಿ ವರದಿಯಾಗಿದೆ.
ಕಾರ್ಕಳದ ನಿವಾಸಿಯಾದ ಸೈಯದ್, ಕಬ್ಬಡ್ಡಿ ಆಟಗಾರನಾಗಿಯೂ ಗುರುತಿಸಲಾಗಿದೆ. ವಿದ್ಯಾರ್ಥಿನಿಯ ದೂರಿನ ಮೇರೆಗೆ ಬೆಳ್ತಂಗಡಿ ಠಾಣೆ ಪೊಲೀಸರು ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪೊಲೀಸರು ಆತನನ್ನು ಬಂಧಿಸಿ, ರಾತ್ರಿ ಸಮಯದಲ್ಲಿ ಪೋಕ್ಸೋ ನ್ಯಾಯಾಲಯದ ನ್ಯಾಯಾಧೀಶರ ನಿವಾಸಕ್ಕೆ ಹಾಜರುಪಡಿಸಿದರು. ವಿಚಾರಣೆ ನಂತರ ನ್ಯಾಯಾಧೀಶರು ಶರತ್ತುಬದ್ಧ ಜಾಮೀನು ನೀಡಿದರು.
ಈ ಸಂಬಂಧ ಬೆಳ್ತಂಗಡಿ ಪೊಲೀಸರು ಮುಂದಿನ ಹಂತದ ತನಿಖೆ ಮುಂದುವರೆಸಿದ್ದಾರೆ.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…