ಉಡುಪಿ ಜಿಲ್ಲೆಯ ಕೊಳ್ನಾಡು ಗ್ರಾಮದ ಕುಡ್ತಮುಗೈರಿಯಲ್ಲಿ ಶನಿವಾರದಂದು ಯುವತಿಯರೊಂದಿಗೆ ಅಶ್ಲೀಲ ವರ್ತನೆ ನಡೆಸುತ್ತಿದ್ದ ಯುವಕನಿಗೆ ಸಾರ್ವಜನಿಕರು ಪಾಠ ಕಲಿಸಿದ ಘಟನೆ ವರದಿಯಾಗಿದೆ.
ಪಂಜಾಜೆ, ಕಣ್ಯಾನ ಗ್ರಾಮದ ನಿವಾಸಿಯಾಗಿರುವ ಸವಾದ್ (20) ಎಂಬ ಯುವಕನೇ ಥಳಿಗೆ ಒಳಗಾದವನಾಗಿದ್ದು, ಬೆಂಗಳೂರಿನ ಕೋರಮಂಗಲದಲ್ಲಿ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಸವಾದ್ ಹಲವು ಯುವತಿಯರಿಗೆ ಮೊಬೈಲ್ ಮೂಲಕ ಅಶ್ಲೀಲ ಮೆಸೇಜ್ಗಳನ್ನು ಕಳುಹಿಸುತ್ತಿದ್ದನು. ನಡುರಾತ್ರಿಯಲ್ಲಿ ಬಟ್ಟೆ ಬಿಚ್ಚಿ ವೀಡಿಯೋ ಕಾಲ್ ಮಾಡಲು ಒತ್ತಾಯಿಸುತ್ತಿದ್ದ ಈತನ ವರ್ತನೆ ಯುವತಿಯರ ಮಾನಸಿಕ ಆರೋಗ್ಯಕ್ಕೂ ಧಕ್ಕಿಯನ್ನೇಂಟಿಸುತ್ತಿತ್ತು.
ಈ ಬಗ್ಗೆ ಬಾಲಕಿಯೊಬ್ಬಳಿಂದ ಮಾಹಿತಿ ಪಡೆದ ಯುವಕರ ಗುಂಪು, ಅವನಿಗೆ ಪಾಠ ಕಲಿಸಲು ತಂತ್ರ ರೂಪಿಸಿದರು. ಅವರು ಯುವತಿಯ ಹೆಸರಿನಲ್ಲಿ ಸವಾದ್ಗೆ ಸಂದೇಶ ಕಳಿಸಿ, ಕುಡ್ತಮುಗೈರಿಗೆ ಬರುವಂತೆ ಆಮಿಷ ಒಡ್ಡಿದರು. ಹುಡುಗಿಯೆಂದು ಭಾವಿಸಿ ಸ್ಥಳಕ್ಕೆ ಬಂದ ಸವಾದ್ ಅಲ್ಲಿ ಸಿಕ್ಕಿಹಾಕಿಕೊಂಡ. ಆಗಾಗಲೇ ಸ್ಥಳೀಯರು ಆತನನ್ನು ಹಿಡಿದು ಬಾರಿಸಿದರು.
ಅತನಿಗೆ ಹಿಗ್ಗಾಮುಗ್ಗಾ ಥಳಿಸಿದ ಸಾರ್ವಜನಿಕರು, ಬಳಿಕ ಸ್ಥಳೀಯ ಪೊಲೀಸರ ಜವಾಬ್ದಾರಿಗೆ ಒಪ್ಪಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರಿದಿದೆ.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…