ಧಾರವಾಡದಲ್ಲಿ ಭೀತಿಯನ್ನು ಉಂಟುಮಾಡುವಂತಹ ಘಟನೆ ನಡೆದಿದೆ. ಯುವ ಕಾಂಗ್ರೆಸ್ನ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಅವರನ್ನು ದುಷ್ಕರ್ಮಿಗಳು ಅವರ ಸ್ವಗೃಹದಲ್ಲೇ ಬರ್ಬರವಾಗಿ ಹತ್ಯೆಗೈದಿದ್ದಾರೆ. ಈ ದಾರುಣ ಘಟನೆಯಿಂದ ನಗರದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಕಾಂಗ್ರೆಸ್ ಕಾರ್ಯಕರ್ತರಲ್ಲಿ ಶೋಕ ಮತ್ತು ದಿಗ್ಭ್ರಮೆ ವ್ಯಕ್ತವಾಗಿದೆ.
ಹಾಶ್ಮಿನಗರದಲ್ಲಿರುವ ತಮ್ಮ ನಿವಾಸದಲ್ಲಿ ಇದ್ದ ಫೈರೋಜ್ ಪಠಾಣ್ ಮೇಲೆ ನಿನ್ನೆ ರಾತ್ರಿ ನಾಲ್ವರು ಅಪರಿಚಿತರು ದಾಳಿ ನಡೆಸಿದ್ದಾರೆ. ಮನೆಗೆ ನುಗ್ಗಿದ ದುಷ್ಕರ್ಮಿಗಳು ಏಕಾಏಕಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ, ಮನಬಂದಂತೆ ಹೊಡೆದಿದ್ದಾರೆ. ಪರಿಣಾಮವಾಗಿ ತೀವ್ರ ರಕ್ತಸ್ರಾವಗೊಂಡ ಫೈರೋಜ್ ಪಠಾಣ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆ ಬಳಿಕ ಆರೋಪಿಗಳು ತಕ್ಷಣವೇ ಸ್ಥಳದಿಂದ ಪರಾರಿಯಾಗಿದ್ದಾರೆ.
ಫೈರೋಜ್ ಪಠಾಣ್ ಅವರು ಧಾರವಾಡದ ಚುರುಕು ಯುವ ನಾಯಕರಾಗಿ ಗುರುತಿಸಿಕೊಂಡಿದ್ದರು. ರಾಜಕೀಯ ಜೀವನವನ್ನು ಎನ್ಎಸ್ಯುಐ ಮೂಲಕ ಆರಂಭಿಸಿ, ನಂತರ ಯುವ ಕಾಂಗ್ರೆಸ್ನಲ್ಲಿ ಪ್ರಮುಖ ಹುದ್ದೆ ವಹಿಸಿಕೊಂಡಿದ್ದರು.
ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ವೈಯಕ್ತಿಕ ದ್ವೇಷ, ರಾಜಕೀಯ ವೈರತ್ವ ಸೇರಿದಂತೆ ವಿವಿಧ ಕೋನಗಳಲ್ಲಿ ತನಿಖೆ ಮುಂದುವರಿಸಿದ್ದಾರೆ. ಆದರೆ ಈವರೆಗೆ ಯಾವುದೇ ಆರೋಪಿಗಳನ್ನು ಬಂಧಿಸಲಾಗಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…