ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಗುರುಪುರ ಗ್ರಾಮದಲ್ಲಿ ಭೀಕರ ಘಟನೆ ಒಂದು ಬೆಳಕಿಗೆ ಬಂದಿದೆ. ಮೇಕೆ ಮೇಯಿಸಲು ಹೋಗಿದ್ದ ಯುವಕನ ಮೇಲೆ ಹುಲಿ ದಾಳಿ ನಡೆಸಿದ ಪರಿಣಾಮ, ಯುವಕ ದಾರುಣವಾಗಿ ಮೃತಪಟ್ಟಿದ್ದಾನೆ.
ಮೃತಪಟ್ಟವನು ಗುರುಪುರದ ನಿವಾಸಿಯಾದ ಹರೀಶ್ (28) ಎನ್ನಲಾಗಿದೆ. ಗುರುವಾರ ಬೆಳಿಗ್ಗೆ ಮೆಕ್ಕೆಜೋಳದ ಗದ್ದೆ ಬಳಿ ಮೇಕೆಗಳನ್ನು ಮೇಯಿಸುತ್ತಿದ್ದ ವೇಳೆ ಅರಣ್ಯ ಪ್ರದೇಶದಿಂದ ಬಂದ ಹುಲಿ ಹರೀಶ್ ಮೇಲೆ ದಾಳಿ ನಡೆಸಿದೆ. ಈ ದಾಳಿಯಿಂದ ಗಂಭೀರವಾಗಿ ಗಾಯಗೊಂಡ ಹರೀಶ್ ನನ್ನು ಸ್ಥಳೀಯರು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯುವ ಪ್ರಯತ್ನ ಮಾಡಿದ್ದಾರೆ. ಆದರೆ ಮಾರ್ಗಮಧ್ಯೆ ಅವನು ಮೃತಪಟ್ಟಿದ್ದಾನೆ.
ಘಟನೆ ಮೈಸೂರು ಜಿಲ್ಲೆಯ ನಾಗಪುರದ 5ನೇ ಬ್ಲಾಕ್ ಸಮೀಪದ ಅರಣ್ಯವಲಯದಲ್ಲಿ ಸಂಭವಿಸಿದ್ದು, ಈ ಮೂಲಕ ಗ್ರಾಮದಲ್ಲಿ ಭಯದ ವಾತಾವರಣ ಮನೆಮಾಡಿದೆ. ಗ್ರಾಮದ ಜನರು ಅರಣ್ಯ ಇಲಾಖೆಯ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದು, ತಕ್ಷಣ ಹುಲಿಯ ಮೇಲೆ ನಿಗಾ ಇಡಲು ಹಾಗೂ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಒತ್ತಾಯಿಸಿದ್ದಾರೆ.
ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗ್ರಾಮದಲ್ಲಿ ಭದ್ರತೆಗಾಗಿ ತಾತ್ಕಾಲಿಕ ಪೊಲೀಸ್ ಹಾಗೂ ಅರಣ್ಯ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…