ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಗುರುಪುರ ಗ್ರಾಮದಲ್ಲಿ ಭೀಕರ ಘಟನೆ ಒಂದು ಬೆಳಕಿಗೆ ಬಂದಿದೆ. ಮೇಕೆ ಮೇಯಿಸಲು ಹೋಗಿದ್ದ ಯುವಕನ ಮೇಲೆ ಹುಲಿ ದಾಳಿ ನಡೆಸಿದ ಪರಿಣಾಮ, ಯುವಕ ದಾರುಣವಾಗಿ ಮೃತಪಟ್ಟಿದ್ದಾನೆ.
ಮೃತಪಟ್ಟವನು ಗುರುಪುರದ ನಿವಾಸಿಯಾದ ಹರೀಶ್ (28) ಎನ್ನಲಾಗಿದೆ. ಗುರುವಾರ ಬೆಳಿಗ್ಗೆ ಮೆಕ್ಕೆಜೋಳದ ಗದ್ದೆ ಬಳಿ ಮೇಕೆಗಳನ್ನು ಮೇಯಿಸುತ್ತಿದ್ದ ವೇಳೆ ಅರಣ್ಯ ಪ್ರದೇಶದಿಂದ ಬಂದ ಹುಲಿ ಹರೀಶ್ ಮೇಲೆ ದಾಳಿ ನಡೆಸಿದೆ. ಈ ದಾಳಿಯಿಂದ ಗಂಭೀರವಾಗಿ ಗಾಯಗೊಂಡ ಹರೀಶ್ ನನ್ನು ಸ್ಥಳೀಯರು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯುವ ಪ್ರಯತ್ನ ಮಾಡಿದ್ದಾರೆ. ಆದರೆ ಮಾರ್ಗಮಧ್ಯೆ ಅವನು ಮೃತಪಟ್ಟಿದ್ದಾನೆ.
ಘಟನೆ ಮೈಸೂರು ಜಿಲ್ಲೆಯ ನಾಗಪುರದ 5ನೇ ಬ್ಲಾಕ್ ಸಮೀಪದ ಅರಣ್ಯವಲಯದಲ್ಲಿ ಸಂಭವಿಸಿದ್ದು, ಈ ಮೂಲಕ ಗ್ರಾಮದಲ್ಲಿ ಭಯದ ವಾತಾವರಣ ಮನೆಮಾಡಿದೆ. ಗ್ರಾಮದ ಜನರು ಅರಣ್ಯ ಇಲಾಖೆಯ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದು, ತಕ್ಷಣ ಹುಲಿಯ ಮೇಲೆ ನಿಗಾ ಇಡಲು ಹಾಗೂ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಒತ್ತಾಯಿಸಿದ್ದಾರೆ.
ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗ್ರಾಮದಲ್ಲಿ ಭದ್ರತೆಗಾಗಿ ತಾತ್ಕಾಲಿಕ ಪೊಲೀಸ್ ಹಾಗೂ ಅರಣ್ಯ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ತುಮಕೂರು ಜಿಲ್ಲೆಯ ಮದರಸಾವೊಂದರಲ್ಲಿ ಅಪ್ರಾಪ್ತ ಮಕ್ಕಳ ಮೇಲೆ ಅಮಾನವೀಯ ದೌರ್ಜನ್ಯ ಮತ್ತು ಬಾಲಕಾರ್ಮಿಕ ಶೋಷಣೆ ನಡೆಸಲಾಗುತ್ತಿದ್ದ ಬೆಚ್ಚಿಬೀಳಿಸುವ ಪ್ರಕರಣ ಬೆಳಕಿಗೆ…
ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…
ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…
ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…
ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…